7:20 PM Thursday25 - April 2024
ಬ್ರೇಕಿಂಗ್ ನ್ಯೂಸ್
ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ…

ಇತ್ತೀಚಿನ ಸುದ್ದಿ

ಸ್ಕೂಟರ್ ನಲ್ಲಿ ಡ್ರಗ್ಸ್ ಮಾರಾಟ: 10.50 ಲಕ್ಷ ರೂ. ಮೌಲ್ಯದ 21 ಕೆಜಿ ಗಾಂಜಾ ವಶ; ಓರ್ವನ ಬಂಧನ

05/08/2022, 20:49

ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರೀನಿವಾಸಪುರ ಠಾಣಾ ವ್ಯಾಪ್ತಿಯ ವಳಗೆರನಹಳ್ಳಿಗೆ ಹೋಗುವ ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಂದ ಸುಮಾರು 10.50 ಲಕ್ಷ ರೂ. ಮೌಲ್ಯದ 21 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಶುಕ್ರವಾರ ಮಧ್ಯಾಹ್ನ ಖಚಿತ ಮಾಹಿತಿಯ ಮೇರೆಗೆ ಅಕ್ರಮವಾಗಿ ಗಾಂಜವನ್ನು ಮಾರಾಟ ಮಾಡಲು ದ್ವಿಚಕ್ರ ವಾಹನದಲ್ಲಿ ಬಂದಿದ್ದ ಕೋಲಾರ ನಗರದ ಟವರ್‌ ವಾಸಿಯಾದ ನೂರ್‌ಪಾಷ  (50 ) ಎಂಬಾತನನ್ನು ಬಂಧಿಸಿ 21 ಕೆಜಿ ತೂಕದ ಸುಮಾರು 10. 50 ಲಕ್ಷ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಆರೋಪಿ ಮತ್ತು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದುಕೊಂಡು ಶ್ರೀನಿವಾಸಪರ ಠಾಣೆಯಲ್ಲಿ ಎನ್‌ಪಿಎಸ್ ಕಾಯ್ದೆ ಅಡಿಯಲ್ಲಿ ಪೊಲೀಸ್ ನಿರೀಕ್ಷಕ ಜಿ.ಸಿ.ನಾರಾಯಣಸ್ವಾಮಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ . ಈ ದಾಳಿಯನ್ನು ಜಿಲ್ಲಾ ರಕ್ಷಾಣಧಿಕಾರಿಗಳ ಡಿ.ದೇವರಾಜ್ , ಪೊಲೀಸ್ ಅಧೀಕ್ಷಕ ಸಚಿನ್ ಪಿ . ಘೋರ್ಪಡೆ ಮಾರ್ಗದರ್ಶನದಲ್ಲಿ ಡಿಎಸ್‌ಪಿ ಪಿ.ಮುರಳಿಧರ್ ಮುಂದಾಳತ್ವದಲ್ಲಿ ಅಪರಾದ ವಿಭಾಗದ ಎಎಸ್‌ಐ ಅಮೀದ್‌ಖಾನ್ ಹಾಗೂ ಸಿಬ್ಬಂದಿಗಳಾದ ರಾಮಚಂದ್ರ , ಮಂಜುನಾಥ್ , ಸುರೇಶ್ , ವೆಂಕಟಾಚಲಪತಿ , ಷಫೀವುಲ್ಲಾ , ಸಂದೀಪ್ , ರಿಜ್ವಾನ್ , ಸುಬಾನ್ ಆರೋಪಿಯನ್ನು ಬಂಧಿಸುವ ಕಾರ್ಯದಲ್ಲಿ ಪಾಲ್ಗೊಂಡಿದ್ದರು .

 

ಇತ್ತೀಚಿನ ಸುದ್ದಿ

ಜಾಹೀರಾತು