4:43 AM Friday26 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ನೆರೆ ಹಾವಳಿಗೆ ಕೇಂದ್ರದ ಅನುದಾನ ಕೇಳಲು ರಾಜ್ಯ ಬಿಜೆಪಿಗೆ ದಮ್ಮು ಇಲ್ಲ; ಪ್ರತಿಪಕ್ಷದ ಉಪ ನಾಯಕ ಖಾದರ್ ಕಿಡಿ

06/08/2022, 20:40

ಮಂಗಳೂರು(reporterkarnataka.com): ರಾಜ್ಯದಲ್ಲಿ ಜನರು ಅತಿವೃಷ್ಠಿ ಹಾಗೂ ನೆರೆ ಹಾವಳಿಯಿಂದ ತತ್ತರಿಸಿ ಹೋಗಿದ್ದಾರೆ. ಆದರೆ ರಾಜ್ಯ ಸರಕಾರದ ಬಳಿ ಈಗ ಅತಿವೃಷ್ಟಿಗೆ ಯಾವುದೇ ಯೋಜನೆಗಳಿಲ್ಲ. ಹಾಗೇ ಕೇಂದ್ರದಿಂದ ಅನುದಾನ ಕೇಳುವ ಧೈರ್ಯವೂ ಇವರಿಗಿಲ್ಲ.

ಇದರಿಂದ ಸಂತ್ರಸ್ತರು ಅನಾಥರಾಗಿದ್ದಾರೆ ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಹೇಳಿದರು.

ನಗರದಲ್ಲಿ ಶನಿವಾರ ಮಾಧ್ಯಮ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಅತಿವೃಷ್ಠಿ ಹಾಗೂ ನೆರೆ ಹಾವಳಿಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಆದರೆ 25 ಮಂದಿ ಸಂಸದರು ಮತ್ತು ರಾಜ್ಯ ಸರ್ಕಾರ ಗೃಹ ಸಚಿವರ ಬಳಿ ಎನ್‌ಡಿಆರ್‌ಫ್ ಅನುದಾನ ಯಾಕೆ ಕೇಳುತ್ತಿಲ್ಲ ಎಂದು ಪ್ರಶ್ನಿಸಿದರು.

ಕೇಂದ್ರ ಗೃಹ ಸಚಿವರು ಮೊನ್ನೆ ಬೆಂಗಳೂರಿಗೆ ಬಂದಾಗ ಅವರ ಬಳಿ ಪಕ್ಷದ ಬಗ್ಗೆ ಮಾತನಾಡುತ್ತಾರೆ ಹೊರತು ಎನ್‌ಡಿಆರ್‌ಎಫ್ ಅನುದಾನ ಕೇಳಲು ಇವರಿಗೆ ಬಾಯಿ ಬರುವುದಿಲ್ಲ. ಇವರು ಜನರನ್ನು ಉಳಿಸುವ ಬದಲು ಪಕ್ಷ ಉಳಿಸುವ ಬಗ್ಗೆ ಗೃಹ ಸಚಿವರಲ್ಲಿ ಮಾತನಾಡುತ್ತಾರೆ ಎಂದು ಖಾದರ್ ಕಿಡಿ ಕಾರಿದರು.

ಬಿಜೆಪಿಯವರಿಗೆ ಕೇಂದ್ರದ ಬಳಿ ಅನುದಾನ ಕೇಳಲು ಮುಜುಗರ ಮತ್ತು ಭಯ ಆಗೋದಾದರೆ ಸರ್ವಪಕ್ಷದ ನಿಯೋಗ ಕರೆದುಕೊಂಡು ಹೋಗಲಿ. ರಾಜ್ಯದ ಪರವಾಗಿ ನಾವು ಮಾತನಾಡುತ್ತೇವೆ. ಸುಳ್ಯ ಸಂಪಾಜೆಗೆ ವಿಶೇಷ ತಂಡ ಕಳುಹಿಸಿ ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ಶಾಂತಿ- ಸಾಮರಸ್ಯಕ್ಕೆ ಜಿಲ್ಲಾಡಳಿತದ ಯಾವುದೇ ತೀರ್ಮಾನಕ್ಕೆ ನಾವು ಬದ್ಧ. ಆದರೆ ಈಗ 3 ಪರ್ಸೆಂಟ್ ಸಮಾಜಘಾತುಕರಿಗೆ ಹೆದರಿ 97 ಶೇಕಡಾ ಜನರಿಗೆ ಕಷ್ಟ ಕೊಡುತ್ತಿದ್ದಾರೆ ಎಂದು ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು