ಇತ್ತೀಚಿನ ಸುದ್ದಿ
ಸರಕಾರಿ ಬಸ್ – ಮಾರುತಿ ಕಾರು ಡಿಕ್ಕಿ: ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರೂ ಪ್ರಾಣಾಪಾಯದಿಂದ ಪಾರು
06/08/2022, 19:59
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಸರಕಾರಿ ಬಸ್ ಹಾಗೂ ಮಾರುತಿ ಕಾರು ಮಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಹಲವರು ಸಣ್ಣಪುಟ್ಟ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಪಟ್ಟಣದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಅಪಘಾತದಲ್ಲಿ ಮಾರುತಿ ಕಾರಿನಲಿದ್ದ ಇಬ್ಬರೂ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತ ಸಂದರ್ಭದಲ್ಲಿ ಬಸ್ಸಿನ ಚಾಲಕ ಬ್ರೇಕ್ ಹೊಡೆಯುವ ರಭಸಕ್ಕೆ ಬಸ್ಸಿನಲ್ಲಿರುವ ಹಲವು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಅಪಘಾತದಿಂದ ಮಾರುತಿ ಕಾರು ಮುಂಭಾಗ ಮತ್ತು ಹಿಂಭಾಗ ಜಖಂಗೊಂಡಿದೆ. ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ