2:55 AM Wednesday1 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

10ರಂದು ರಾಷ್ಟ್ರೀಯ ಜಂತುಹುಳ ನಿವಾರಣಾ ದಿನ ಆಚರಣೆ

08/08/2022, 22:06

ಮಂಗಳೂರು(reporterkarnataka.com): ಭವಿಷ್ಯದಲ್ಲಿ ಮಕ್ಕಳು ರೋಗಗಳಿಂದ ಮುಕ್ತರಾಗಿ ಆರೋಗ್ಯ ಪೂರ್ಣ ಜೀವನ ನಡೆಸಲು ಸಹಕಾರಿಯಾಗಲು ಇದೇ ಆ.10ರಂದು ರಾಷ್ಟ್ರೀಯ ಜಂತುಹುಳ ನಿವಾರಣಾ ದಿನವನ್ನು ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ಹೇಳಿದರು.

ಅವರು ಸೋಮವಾರ ಡಿಎಚ್‍ಓ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಮಕ್ಕಳು ಸೇರಿದಂತೆ ಎಲ್ಲರಲ್ಲೂ ಜಂತು ಹುಳುವಿನ ಸಮಸ್ಯೆ ಸಾಮಾನ್ಯವಾಗಿರುತ್ತದೆ. ಜಂತು ಹುಳುಗಳು ಮನುಷ್ಯನ ಕರುಳಿನಿಂದ ಆಹಾರ ಪಡೆದು ಜೀವಿಸುವ ಉಪಜೀವಿಗಳು. ಬರಿಗಾಲಿನಲ್ಲಿ ಬಯಲಿನಲ್ಲಿ ತಿರುಗಾಡುವುದು, ಕೈ ತೊಳೆಯದೆ ಆಹಾರ ಸೇವಿಸುವುದು, ಬಯಲು ಮಲ ವಿಸರ್ಜನೆ, ಶೌಚದ ನಂತರ ಕೈ ತೊಳೆಯದಿರುವುದು, ತೊಳೆಯದ ಹಣ್ಣು, ಹಂಪಲು ಸೇವನೆ ಸೇರಿದಂತೆ ಇನ್ನಿತರ ಕಾರಣಗಳಿಂದ ಕ್ರಿಮಿಗಳು ಹೊಟ್ಟೆ ಸೇರಿ ಕರುಳಿನಲ್ಲಿ ಸಂತಾನೋತ್ಪತ್ತಿ ಮಾಡಿ ಜಂತು ಹುಳುವಿನ ಸಮಸ್ಯೆ ಎದುರಾಗುತ್ತದೆ, ಇದರಿಂದಾಗಿ ಹೊಟ್ಟೆ ನೋವು, ಭೇದಿ, ಹಸಿವಿಲ್ಲದಿರುವುದು, ಸುಸ್ತಾಗುವಂತಹ ಲಕ್ಷಣಗಳ ಜೊತೆಗೆ ಆಹಾರದ ಪೌಷ್ಟಿಕತೆ ದೇಹವನ್ನು ಸೇರದೆ ರಕ್ತ ಹೀನತೆಯುಂಟಾಗುತ್ತದೆ, ಇದರಿಂದ ಮಕ್ಕಳು ಶಾಲೆಗೆ ಸರಿಯಾಗಿ ಹೋಗಲಾಗದೆ ಶಿಕ್ಷಣ ಕುಂಠಿತವಾಗುವ ಸಂಭವವು ಇರುತ್ತದೆ ಎಂಬ ಮಾಹಿತಿ ನೀಡಿದರು.

ಆದ ಕಾರಣ ಜಂತುಹುಳ ಬಾಧೆಯಿಂದ ಮಕ್ಕಳನ್ನು ರಕ್ಷಿಸಲು ಆಗಸ್ಟ್ 10ರ ಬುಧವಾರ ನಗರದ ಮಣ್ಣಗುಡ್ಡೆಯ ಸರ್ಕಾರಿ ಶಾಲೆಯಲ್ಲಿ ರಾಷ್ಟ್ರೀಯ ಜಂತುಹುಳ ನಿವಾರಣಾ ದಿನ ಆಚರಿಸಲಾಗುತ್ತಿದೆ. ಆ ಮೂಲಕ ಜಿಲ್ಲೆಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲಾ ಕಾಲೇಜುಗಳ 1 ರಿಂದ 19 ವರ್ಷದ ಸುಮಾರು ಐದು ಲಕ್ಷಕ್ಕಿಂತಲೂ ಹೆಚ್ಚು ಮಕ್ಕಳಿಗೆ 2022-23ನೇ ಸಾಲಿನ ಪ್ರಥಮ ಸುತ್ತಿನಲ್ಲಿ ಜಂತುಹುಳ ನಿವಾರಣಾ ಔಷಧಿಯಾದ ವಿಶ್ವ ಸಂಸ್ಥೆ ಪ್ರಮಾಣೀಕರಿಸಿದ ಅಲ್ಬೆಂಡಝೋಲ್ 400 ಮಿ.ಗ್ರಾಂ. ಮಾತ್ರೆ ಉಚಿತವಾಗಿ ವಿತರಿಸಲಾಗುತ್ತಿದೆ, ಅಂದು ಮಾತ್ರೆ ಪಡೆಯಲಾಗದ ಮಕ್ಕಳಿಗೆ ಆಗಸ್ಟ್ 17ರಂದು ವಿತರಿಸಲಾಗುವುದು. ಜೊತೆಗೆ ಶಾಲೆ ಅಥವಾ ಅಂಗನವಾಡಿಗಳಿಂದ ಹೊರಗುಳಿದ ಮಕ್ಕಳಿಗೆ ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆ ಮತ್ತು ಕಿರಿಯ ಆರೋಗ್ಯ ಸಹಾಯಕಿಯರು  ಮನೆಗಳಿಗೆ ಭೇಟಿ ನೀಡಿ ವಿತರಿಸಲಿದ್ದಾರೆ ಎಂದವರು ಹೇಳಿದರು.

ಜಂತುಹುಳ ಮಾತ್ರೆಯು ಚೀಪುವ ಮಾತ್ರೆಯಾಗಿದ್ದು, 1 ರಿಂದ 2 ವರ್ಷದ ಮಕ್ಕಳಿಗೆ ಅರ್ಧ ಮಾತ್ರೆಯನ್ನು ಎದೆಹಾಲಿನಲ್ಲಿ ಬೆರೆಸಿ ನೀಡಬೇಕು. 2 ರಿಂದ 19 ವರ್ಷದೊಳಗಿನ ಮಕ್ಕಳಿಗೆ 1 ಮಾತ್ರೆ ನೀಡಲಾಗುತ್ತದೆ ಹಾಗೂ ಪ್ರತೀ ಆರು ತಿಂಗಳಿಗೊಮ್ಮೆ ಈ ಮಾತ್ರೆಗಳನ್ನು ಸೇವಿಸಬಹುದಾಗಿದೆ ಎಂದರು.

ಜಂತುಹುಳ ಮಾತ್ರೆ ಸೇವನೆಯಿಂದ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ, ಪೌಷ್ಟಿಕತೆ ಸುಧಾರಿಸುತ್ತದೆ, ಏಕಾಗ್ರತೆ ಮತ್ತು ಕಲಿಕಾ ಸಾಮಥ್ರ್ಯ ಹೆಚ್ಚುತ್ತದೆ ಮತ್ತು ಬಹುಮುಖ್ಯವಾಗಿ ಜಂತುಹುಳ ಬಾಧೆ ಒಬ್ಬರಿಂದ ಮತ್ತೊಬ್ಬರಿಗೆ ಹರಡುವುದನ್ನು ತಪ್ಪಿಸಬಹುದು ಎಂದು ತಿಳಿಸಿದರು.


ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಬದ್ರುದ್ದೀನ್, ಡಾ. ರಾಜೇಶ್, ಡಾ. ಸುದರ್ಶನ್, ಡಾ. ಸುಜಯ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ., ಜಿಲ್ಲಾ ಶುಶ್ರೂಣಾಧಿಕಾರಿ ಲಿಸ್ಸಿ ಗೋಷ್ಠಿಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು