9:46 AM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಕಾಲ್ತೋಡು: ಕಾಲು ಸಂಕದಿಂದ ಆಯತಪ್ಪಿ ಬಿದ್ದು ನೀರು ಪಾಲಾಗಿದ್ದ ಶಾಲಾ ಬಾಲಕಿಯ ಮೃತದೇಹ ಪತ್ತೆ

10/08/2022, 20:12

ಬೈಂದೂರು(reporterkarnataka.com): ಶಾಲೆಯಿಂದ ಮನೆಗೆ ವಾಪಸಾಗುತ್ತಿದ್ದ

ವೇಳೆ ಕಾಲುಸಂಕದಿಂದ ನೀರಿಗೆ ಬಿದ್ದು  ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕಿ ಸನ್ನಿಧಿ(7) ಮೃತದೇಹ ಘಟನೆ ನಡೆದು 48 ತಾಸಿನ ಬಳಿಕ ಪತ್ತೆಯಾಗಿದೆ.

ಕಾಲ್ತೋಡು ಗ್ರಾಮದ ಮಕ್ಕಿಮನೆ ನಿವಾಸಿ 2ನೇ ತರಗತಿಯ ವಿದ್ಯಾರ್ಥಿನಿ ಸನ್ನಿಧಿಯ ಮೃತದೇಹ ಬುಧವಾರ ಸಂಜೆ ದುರ್ಘಟನೆ ನಡೆದ ಸ್ಥಳದಿಂದ 400 ಮೀಟರ್ ಅಂತರದಲ್ಲಿ  ಪತ್ತೆಯಾಗಿದೆ.

ಸೋಮವಾರ ಸಂಜೆ ಶಾಲೆಯಿಂದ ಮನೆಗೆ ವಾಪಸಾಗುತ್ತಿದ್ದ ಬಾಲಕಿ ಕಾಲು ಸೇತುವೆಯಲ್ಲಿ ಆಯತಪ್ಪಿ ನೀರಿಗೆ ಬಿದ್ದಿದ್ದಳು. ಘಟನೆ ನಡೆದ ಬಳಿಕ ಬಾಲಕಿಯ ಪತ್ತೆಗಾಗಿ ನಿರಂತರ ಶೋಧ ಕಾರ್ಯ ನಡೆದಿತ್ತು. ಇದೀಗ ಬುಧವಾರ ಸಂಜೆ ಅಗ್ನಿಶಾಮಕ ದಳ ಸಿಬ್ಬಂದಿ, ಈಜುಪಟುಗಳಾದ ಮೀನುಗಾರ ನರೇಶ್ ಕೊಡೇರಿಯವರ ಮುಂದಾಳತ್ವದ 22 ಜನರ ತಂಡ, ಸಾರ್ವಜನಿಕರೂ ಸೇರಿ ನೂರಕ್ಕೂ ಅಧಿಕ ಮಂದಿ ಶೋಧ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಕಾರ್ಯಾಚರಣೆಗೆ ಎರಡು ದೋಣಿ ಗಳನ್ನು ಬಳಿಸಿಕೊಳ್ಳಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು