11:50 PM Friday26 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ಕೇರಳ ಸರಕಾರ ಹಾಗೂ ರಾಜ್ಯಪಾಲರ ನಡುವೆ ಶೀತಲ ಸಮರ: 11 ಸುಗ್ರೀವಾಜ್ಞೆಗಳಿಗೆ ಸಹಿ ಹಾಕದೆ ವಾಪಸ್

11/08/2022, 10:46

ತಿರುವನಂತಪುರ(reporterkarnataka.com);ಕೇರಳ ರಾಜ್ಯಪಾಲರು 11 ಸುಗ್ರೀವಾಜ್ಞೆಗಳಿಗೆ ಸಹಿ ಹಾಕದೆ ವಾಪಸ್ ಕಳುಹಿಸುವುದರೊಂದಿಗೆ ಕೇರಳದಲ್ಲಿ ಸರಕಾರ ಮತ್ತು ರಾಜ್ಯಪಾಲ ಆರೀಫ್​ ಮೊಹಮ್ಮದ್​ ಖಾನ್​ ನಡುವೆ ಶೀತಲ ಸಮರ ಮುಂದುವರಿದಿದೆ. ಇದರೊಂದಿಗೆ ವಿಶೇಷ ಅಧಿವೇಶನಕ್ಕೆ ಕೇರಳ ಸರಕಾರ ಮೊರೆ ಹೋಗಿದೆ.

ರಾಜ್ಯಪಾಲರ ಅಂಕಿತ ಸಿಗದ ಹಿನ್ನೆಲೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಇವುಗಳನ್ನು ಪಾಸ್​ ಮಾಡಿಕೊಳ್ಳಲೆಂದೇ​ ವಿಶೇಷ ಅಧಿವೇಶನ ಕರೆದಿದೆ.

ಎರಡು ದಿನಗಳ ಹಿಂದೆ ರಾಜ್ಯಪಾಲರ ಅಂಕಿತಕ್ಕಾಗಿ ಸರ್ಕಾರ ಸುಗ್ರೀವಾಜ್ಞೆಗಳನ್ನು ಕಳುಹಿಸಲಾಗಿತ್ತು. ಆದರೆ, ರಾಜ್ಯಪಾಲ ಯಾವುದೇ ದಾಖಲೆಗಳನ್ನು ಓದದೆ ಸಹಿ ಹಾಕಲು ನಿರಾಕರಿಸಿದ್ದರು. ಹೀಗಾಗಿಯೇ ಮರು ಪ್ರಕಟಣೆಯಾಗಬೇಕಿದ್ದ ಸುಗ್ರೀವಾಜ್ಞೆಗಳು ರದ್ದಾಗಿವೆ.

ಇದೀಗ ರಾಜ್ಯಪಾಲರಿಗೆ ಸೆಡ್ಡು ಹೊಡೆದಿರುವ ಪಿಣರಾಯಿ ಸರ್ಕಾರ ಸಚಿವ ಸಂಪುಟ ಸಭೆ ಕರೆದು, 10 ದಿನಗಳ ವಿಶೇಷ ಅಧಿವೇಶನ ನಡೆಸಲು ತೀರ್ಮಾನಿಸಿದೆ. ಈ ಅಧಿವೇಶನದಲ್ಲಿ ಮಸೂದೆಗಳನ್ನು ಮಂಡಿಸಿ ಸದನದಲ್ಲೇ ಅಂಗೀಕಾರ ಪಡೆಯುವ ಉದ್ದೇಶ ಸರ್ಕಾರದ್ದು. 140 ಸದಸ್ಯ ಬಲದ ವಿಧಾನಸಭೆಯಲ್ಲಿ 99 ಸದಸ್ಯರು ಆಡಳಿತಾರೂಢ ಎಡಪಕ್ಷಗಳಿಗೆ ಸೇರಿದ್ದು, ಈ ಎಲ್ಲ ಮಸೂದೆಗಳು ಕ್ಷಣಾರ್ಧದಲ್ಲಿ ಅಂಗೀಕಾರಗೊಳ್ಳುವ ನಿರೀಕ್ಷೆ ಇದೆ.

ಇತ್ತ, ಅಧಿವೇಶನ ನಡೆಸುವ ಬಗ್ಗೆ ರಾಜ್ಯಪಾಲರಿಗೆ 14 ದಿನಗಳು ಮುಂಚಿತವಾಗಿ ನೋಟಿಸ್​ ನೀಡಬೇಕು. ಹೀಗಾಗಿಯೇ ಸ್ಪೀಕರ್​ ಜೊತೆ ಚರ್ಚಿಸಿ ಸರ್ಕಾರ ಅಧಿವೇಶನಕ್ಕೆ ದಿನಾಂಕ ನಿಗದಿ ಮಾಡಲಿದೆ ಎಂದು ಹೇಳಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು