5:10 PM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ಸ್ವಾತಂತ್ರ್ಯ ಅಮೃತ ಮಹೋತ್ಸವ: ‘ಕ್ಲಬ್ ಹೌಸ್’ ಇತಿಹಾಸದಲ್ಲೇ ಮೊದಲ ಬಾರಿಗೆ 75 ಗಂಟೆಗಳ ಮ್ಯಾರಥಾನ್ ಕಾರ್ಯಕ್ರಮ!

11/08/2022, 21:14

ಮಂಗಳೂರು(reporterkarnataka.com): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ‘ಕ್ಲಬ್ ಹೌಸ್’ ಇತಿಹಾಸದಲ್ಲೇ ಮೊದಲ ಬಾರಿಗೆ 75 ಗಂಟೆಗಳ ಮ್ಯಾರಥಾನ್ ಕಾರ್ಯಕ್ರಮ!

ಈ 75 ಗಂಟೆಗಳ ನಿರಂತರ ಕಾರ್ಯಕ್ರಮದಲ್ಲಿ ಪ್ರತಿ ಗಂಟೆಗೊಮ್ಮೆ ಒಬ್ಬ ಮಹನೀಯರಂತೆ ಒಟ್ಟು 75 ಅವಿಖ್ಯಾತ(ಇದುವರೆಗೆ ಹೆಚ್ಚು ಪರಿಚಯಿಸಲ್ಪಡದ) ಸ್ವಾತಂತ್ರ್ಯ ಕಲಿಗಳ ಪರಿಚಯ ಹಾಗೂ ಇನ್ನೂ ಅನೇಕ ಅಚ್ಚರಿಗಳು ನಿಮಗಾಗಿ…

ಭಾರತದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಈ ಸುಸಂದರ್ಭದಲ್ಲಿ ಉಪನಿಷತ್ತಿನಿಂದ ಹಿಡಿದು ಉಪಗ್ರಹದವರೆಗೆ ಭಾರತದ ಸಾಧನೆಗಳ ಹೆಗ್ಗುರುತುಗಳನ್ನು ಯಥಾಮತಿ,ಯಥಾಸಾಮರ್ಥ್ಯಾ ಸ್ಮರಿಸುವ ಮೂಲಕ ತಾಯಿ ಭಾರತಿಯ ಅಮೃತಪುತ್ರರಾದ ಭಾರತೀಯರಲ್ಲಿ ದೇಶಾಭಿಮಾನದ ಸ್ಫೂರ್ತಿಯ ನಂದಾದೀವಿಗೆಯನ್ನು ಬೆಳಗುವಂತೆ ಮಾಡುವುದೇ ಈ ಕಾರ್ಯಕ್ರಮದ ಪ್ರಮುಖ ಉದ್ದೇಶ.

‘ಭಾರತೀಯ ಕ್ಷಾತ್ರ ಪರಂಪರೆಯ ಮತ್ತು ಸ್ವರಾಜ್ಯ’ ವಿಷಯಗಳೂ ಸೇರಿದಂತೆ ಹಲವು ಸಂವಾದಗಳು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ರಸಪ್ರಶ್ನೆ, ಏಕಪಾತ್ರಾಭಿನಯ, ‘ಈಸೂರು ದಂಗೆ’ ರಂಗನಾಟಕ ವಾಚನ, ‘ಹಲಗಲಿಯ ಬೇಡರು’ ಐತಿಹಾಸಿಕ ನಾಟಕ, ಚರ್ಚೆ, ಉಪನ್ಯಾಸ, ಸೋಬಾನೆ ಪದ, ಭಜನೆ, ದೇಶಭಕ್ತಿ ಗೀತೆಗಳು, ಜಾನಪದ ಗೀತೆಗಳು, ಹಾಸ್ಯ ಗೀತೆಗಳು, ನಾಟಕ, ತಾನಾಜಿ ವಂಶಸ್ಥರಿಂದಲೇ ಛತ್ರಪತಿ ಶಿವಾಜಿ ಮಹಾರಾಜರ ಜೀವನಗಾಥೆ ಕೇಳುವ ಅವಕಾಶ… ಏನುಂಟು, ಏನಿಲ್ಲ!!

ಇವಿಷ್ಟೇ ಅಲ್ಲದೆ, ಭಾರತೀಯ ಕಾಲಮಾನ ರಾತ್ರಿ 12 ಗಂಟೆಯ ನಂತರ ಅನಿವಾಸಿ ಭಾರತೀಯರು ಪಾಲ್ಗೊಂಡು ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು