ಇತ್ತೀಚಿನ ಸುದ್ದಿ
ಕೊರ್ಗಿ: ಮಹಿಳೆಗೆ ರಾಡ್ ನಿಂದ ಹಲ್ಲೆ ನಡೆಸಿ ಚಿನ್ನಾಭರಣ ಲೂಟಿ ಪ್ರಕರಣ: ಓರ್ವ ಆರೋಪಿಯ ಬಂಧನ
12/08/2022, 00:47
ಸಾಂದರ್ಭಿಕ ಚಿತ್ರ
ಕುಂದಾಪುರ(reporterkarnataka.com): ಇಲ್ಲಿನ ಕೊರ್ಗಿ ಗ್ರಾಮದಲ್ಲಿ ಆ.5ರಂದು ರಾಡ್ ನಿಂದ ಹಲ್ಲೆ ನಡೆಸಿ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರ, ಕೈಯಲ್ಲಿದ್ದ ಬಳೆ ಹಾಗೂ ಉಂಗುರ ಸಹಿತ 1.60 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಕುಂದಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ತ್ರಾಸಿ ಹೊಸಾಡು ಗ್ರಾಮದ ಭರತ್ ನಗರದ ಪ್ರವೀಣ್(24) ಬಂಧಿತ ಆರೋಪಿ. ಈತ ಬೈಕ್ ನಲ್ಲಿ ಬಂದು ಮಹಿಳೆಗೆ ರಾಡ್ ನಿಂದ ಹಲ್ಲೆ ನಡೆಸಿ, ಕುತ್ತಿಗೆ ಹಾಗೂ ಕೈಯಲ್ಲಿದ್ದ ಚಿನ್ನಾಭರಣ ಸುಲಿಗೈದಿದ್ದನು. ಪ್ರಕರಣವನ್ನು ದಾಖಿಲಿಸಿಕೊಂಡು ತನಿಖೆಗೆ ಇಳಿದ ಕುಂದಾಪುರ ಗ್ರಾಮಾಂತರ ಪೊಲೀಸರು, ಆ.10ರಂದು ರಾತ್ರಿ ಗಂಗೊಳ್ಳಿ ತ್ರಾಸಿ ಬಳಿ ಆರೋಪಿಯನ್ನು ಬಂಧಿಸಿದ್ದಾರೆ.