4:43 AM Monday2 - October 2023
ಬ್ರೇಕಿಂಗ್ ನ್ಯೂಸ್
ಅನಧಿಕೃತ ಕೃಷಿ ಕೀಟ ನಾಶಕ ಮಾರಾಟ: ಕೆಮಿಕಲ್ ಮಳಿಗೆಗೆ ಕೃಷಿ ಅಧಿಕಾರಿಗಳ ದಿಢೀರ್… ಹೈಕೋರ್ಟ್ ಆದೇಶ ಉಲ್ಲಂಘಿಸಿ ವಿದ್ಯಾರ್ಥಿಗಳ ಮರುಹಂಚಿಕೆಗೆ ಕ್ರಮ? ವೈದ್ಯಕೀಯ ಶಿಕ್ಷಣ ಸಚಿವ ಶರಣ್… ಕೆಜೆ ಹಳ್ಳಿ-ಡಿಜೆಹಳ್ಳಿ-ಹುಬ್ಬಳ್ಳಿ ಕೇಸ್ ಸಂದರ್ಭದಲ್ಲಿ ಕಾಂಗ್ರೆಸ್ ದೇಶದ್ರೋಹಿಗಳ ಪರ ನಿಂತಿತ್ತು: ಕೇಂದ್ರ ಸಚಿವೆ… ಜೆಡಿಎಸ್- ಬಿಜೆಪಿ ಸಖ್ಯ: ಕೇಸರಿ ಪಾಳಯ ತೊರೆದು ದಳ ಸೇರಿದ್ದ ಮೂಡಿಗೆರೆ ಮಾಜಿ… ಕೊಟ್ಟಿಗೆಹಾರ ಸುತ್ತಮುತ್ತ 3 ದಿನಗಳಿಂದ ನಿರಂತರ ಧಾರಾಕಾರ ಮಳೆ: ಆತಂಕಕ್ಕೀಡಾದ ಕಾಫಿ ಬೆಳೆಗಾರರು ಮೆಸ್ಕಾಂ ನಿರ್ಲಕ್ಷ್ಯ: ಹೆಮ್ಮಾಡಿ ಕಾಲು ದಾರಿಯಲ್ಲಿ ವಿದ್ಯುತ್ ಶಾಕ್ ತಗುಲಿ ದಂಪತಿ ದಾರುಣ… ಬೆಳಗಾವಿಯಲ್ಲಿ 2 ದಿನಗಳ ಮೋಡ ಬಿತ್ತನೆಗೆ ಚಾಲನೆ: 20 ಸಾವಿರ ಅಡಿ ಎತ್ತದರದಲ್ಲಿರುವ… ಶೃಂಗೇರಿ: ತುಂಗಾ ನದಿಯ ನಡುಗಡ್ಡೆಯಲ್ಲಿ ಪ್ರವಾಹಕ್ಕೆ ಸಿಲುಕಿದ ಇಬ್ಬರ ರಕ್ಷಣೆ; ಅಗ್ನಿ ಶಾಮಕ… ಕಾವೇರಿ ನದಿ ನೀರು ಹಂಚಿಕೆ ವಿವಾದ: ಅಥಣಿಯಲ್ಲಿ ಪ್ರತಿಭಟನೆ; ಮಾನವ ಸರಪಳಿ ಮಂಗಳೂರಿನಲ್ಲಿ 50ಕ್ಕೂ ಹೆಚ್ಚು ಸ್ಥಳಗಳಲ್ಲಿ ಬಸ್ ಶೆಲ್ಟರ್ ಇಲ್ಲ!: ಆದ್ಯತೆ ಮೇರೆಗೆ ನಿರ್ಮಾಣ…

ಇತ್ತೀಚಿನ ಸುದ್ದಿ

ಶಿರ್ತಾಡಿ ಗ್ರಾಪಂ: ಸ್ವಾತಂತ್ರ್ಯ ಅಮೃತ ಮಹೋತ್ಸವ ನೆನಪಿಗಾಗಿ ಜನರಲ್ ಬಿಪಿನ್ ರಾವತ್ ಪ್ರತಿಮೆ, ಉದ್ಯಾನವನ ಉದ್ಘಾಟನೆ

13/08/2022, 21:08

ಮೂಡಬಿದ್ರೆ(reporterkarnataka.com) : ಮೂಡಬಿದ್ರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಿರ್ತಾಡಿ ಗ್ರಾಮ ಪಂಚಾಯತ್‌ನಲ್ಲಿ ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗಾಗಿ ಜನರಲ್ ಬಿಪಿನ್ ರಾವತ್ ಪ್ರತಿಮೆ ಹಾಗೂ ಉದ್ಯಾನವನದ ಉದ್ಘಾಟನೆ ಮತ್ತು ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ ನಡೆಯಿತು.

ಶಾಸಕ ಉಮಾನಾಥ ಎ. ಕೋಟ್ಯಾನ್ ಉದ್ಘಾಟನೆಯನ್ನು ನೆರವೇರಿಸಿ, ಭಾರತಕ್ಕೆ ಸ್ವಾತಂತ್ರ್ಯ ಸುಲಭದಲ್ಲಿ ದೊರಕಿಲ್ಲ, ಬಲಿದಾನಗಳ ಮೂಲಕ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ. ಈ ಸ್ವಾತಂತ್ರ್ಯವನ್ನು ಉಳಿಸುವ ಕರ್ತವ್ಯ ನಮ್ಮದಾಗಿದೆ. ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭ ಪ್ರತೀ ಮನೆಯಲ್ಲೂ ಗೌರವಯುತವಾಗಿ ರಾಷ್ಟ್ರ ಧ್ವಜವನ್ನು ಹಾರಾಡಿಸಬೇಕು ಎಂದರು.

ಪಂಚಾಯತ್ ಅಧ್ಯಕ್ಷ ಸಂತೋಷ್ ಕೋಟ್ಯಾನ್ ಸಭಾಧ್ಯಕ್ಷತೆ ವಹಿಸಿ ಶಿರ್ತಾಡಿಯ ಅಭಿವೃದ್ಧಿಗೆ ಉದ್ಯಾನವನ ಹಾಗೂ ಪ್ರತಿಮೆ ಹೊಸ ಸೇರ್ಪಡೆಯಾಗಿದೆ. ಶಿರ್ತಾಡಿಯಲ್ಲಿ ಸುಸಜ್ಕಿತ ಬಸ್ ನಿಲ್ದಾಣ, ಮಾರುಕಟ್ಟೆ, ಮೆಸ್ಕಾಂ ಸೆಕ್ಷನ್ ಕಚೇರಿ, ಪ್ರತೀ ಸರಕಾರಿ ಶಾಲೆಗಳಿಗೂ ವಾಹನ ವ್ಯವಸ್ಥೆ ಮುಂತಾದ ಯೋಜನೆಗಳನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು.

ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ದಯಾವತಿ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಡೊಂಬಯ್ಯ ಶೆಟ್ಟಿ, ಕಾರ್ಯದರ್ಶಿ ನವಾನಂದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ವೆಂಕಟರಮಣ ಪ್ರಕಾಶ್ ಕೆ., ವಾಲ್ಪಾಡಿಯ ರಮೇಶ್ ರಾಥೋಡ್, ವಾಲ್ಪಾಡಿ ಪಂಚಾಯತ್ ಅಧ್ಯಕ್ಷ ಪ್ರದೀಪ್ ಕುಮಾರ್, ಪಂಚಾಯತ್ ಸದಸ್ಯರುಗಳು, ಆಸುಪಾಸಿನ ಪಂಚಾಯತಿನ ಸದಸ್ಯರುಗಳು, ವಿವಿಧ ಸಂಘಟನೆಗಳ ಮುಖಂಡರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಅಗ್ನಿಶಾಮಕ ದಳದ ನಿವೃತ್ತ ಅಧಿಕಾರಿ ಯೋಗೀಶ್ ಬಂಗೇರ, ಪಂಚಾಯತ್ ಸದಸ್ಯ ಸೌಹಾರ್ದ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷ ಪ್ರವೀಣ್ ಕುಮಾರ್ ಜೈನ್‌ರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸೌಹಾರ್ದ ಫ್ರೆಂಡ್ಸ್ ಕ್ಲಬ್‌ನಿಂದ ಉಚಿತವಾಗಿ ನೀಡಿದ  ಆಂಬ್ಯುಲೆನ್ಸ್ ನಿರ್ವಹಣೆಗಾಗಿ ಪಂಚಾಯತ್ ಅಧ್ಯಕ್ಷ ಸಂತೋಷ್ ಕೋಟ್ಯಾನ್ ವೈಯಕ್ತಿಕವಾಗಿ 10 ಸಾವಿರ ನಗದು ನೀಡಿದರು.

ಪಂಚಾಯತ್ ಸಿಬ್ಬಂದಿಗಳಿಗೆ ಸಮವಸ್ತ್ರ ವಿತರಣೆ, ಹರ್ ಘರ್ ತಿರಂಗ ಪ್ರದರ್ಶನ, ವಿಕಲಚೇತನರಿಗೆ ಚೆಕ್ ವಿತರಣೆ, ಹಳೆ ಮನೆ ದುರಸ್ಥಿಗಾಗಿ ಕಮಲ ಹಾಗೂ ಶಾಂತಾರಿಗೆ ಸಹಾಯಧನ, ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ, ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಬಿಸಿ ನೀರಿನ ಬಾಟಲ್ ವಿತರಣೆ ನೆರವೇರಿತು.

ಗಣೇಶ್ ಅಳಿಯೂರು ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮಕ್ಕೆ ಗೈರಾದ  ಪಂಚಾಯಿತಿ ಸದಸ್ಯರು- ಪಂಚಾಯತ್ ಅಭಿವೃದ್ಧಿಯನ್ನೇ ಗಮನದಲ್ಲಿಟ್ಟುಕೊಂಡು ಆಯ್ಕೆಯಾದ ಶಿರ್ತಾಡಿ ಪಂಚಾಯತ್ ವ್ಯಾಪ್ತಿಯ ಹಲವು ಸದಸ್ಯರು ಇಂದಿನ ಕಾರ್ಯಕ್ರಮಕ್ಕೆ ಗೈರಾಗಿದ್ದರು, ರಾಜಕಾರಣವನ್ನು ಹೊರತುಪಡಿಸಿ ಪಂಚಾಯತ್ ಸದಸ್ಯರ ನೇಮಕವಾಗುತ್ತದೆ ಎಂಬುದನ್ನು ಮರೆತ ಹಲವು ಸದಸ್ಯರು, ಶಾಸಕರು ಮತ್ತು ನಿಕಟ ಪೂರ್ವ ಶಾಸಕರು ಭಾಗವಹಿಸಿದ ಅಭಿವೃದ್ಧಿ  ಮತ್ತು ಸವಲತ್ತು ವಿತರಣ  ಕಾರ್ಯಕ್ರಮದಲ್ಲಿ ಹಲವು ಸದಸ್ಯರು ಭಾಗವಹಿಸದೆ ಇರುವುದು ಜನರಿಗೆ ಮಾಡಿದ ಅವಮಾನ ಎಂಬುದು ಹಲವು ನಾಗರೀಕರ ಅಭಿಪ್ರಾಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು