1:48 PM Thursday25 - April 2024
ಬ್ರೇಕಿಂಗ್ ನ್ಯೂಸ್
ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ…

ಇತ್ತೀಚಿನ ಸುದ್ದಿ

ಬಿಗ್​ ಬಾಸ್​ ಕನ್ನಡ ಒಟಿಟಿ: ಸೋನು​ ಗೌಡಗೆ  ಸಿಕ್ಕಾಪಟ್ಟೆ ಜನಬೆಂಬಲ; ಎಲಿಮಿನೇಷನ್​ನಿಂದ ಬಚಾವ್

14/08/2022, 19:30

ಬೆಂಗಳೂರು(Reporterkarnataka.com):ರೀಲ್ಸ್​ ಹಾಗೂ ವಿವಾದ ಮೂಲಕ ಫೇಮಸ್​ ಆಗಿದ್ದ ಸೋನು ಶ್ರೀನಿವಾಸ್​ ಗೌಡ ಅವರನ್ನು ಜನರು ಸಿಕ್ಕಾಪಟ್ಟೆ ಟ್ರೋಲ್​ ಮಾಡುತ್ತಿದ್ದರೂ‘ಬಿಗ್​ ಬಾಸ್​ ಕನ್ನಡ ಒಟಿಟಿ ಶೋನಲ್ಲಿ ಅವರನ್ನು ಸಪೋರ್ಟ್​ ಮಾಡುವವರ ಸಂಖ್ಯೆ ದೊಡ್ಡದಿದೆ.

ಬಿಗ್​ ಬಾಸ್​ ಕನ್ನಡ ಒಟಿಟಿ ಶೋನ ಮೊದಲ ವಾರದಲ್ಲಿ ಸೋನು​ ಗೌಡ ನಾಮಿನೇಟ್​ ಆಗಿದ್ದರು. ಆದರೆ ಜನರಿಂದ ವೋಟ್​ ಪಡೆಯುವ ಮೂಲಕ ಅವರು ಸೇಫ್​ ಆಗಿ ಬಿಗ್ ಬಾಸ್ ಮನೆಯಲ್ಲಿ ಉಳಿದಿದ್ದಾರೆ. 

ಮೊದಲ ವಾರದ ಎಲಿಮಿನೇಷನ್​ನಿಂದ ಬಚಾವ್​ ಆಗಿರುವ ಸೋನು ಶ್ರೀನಿವಾಸ್​ ಗೌಡ ಕುಣಿದು ಕುಪ್ಪಳಿಸಿದ್ದಾರೆ. ಇನ್ನೋರ್ವ ಸ್ಪರ್ಧಿ ಕಿರಣ್​ ಯೋಗೇಶ್ವರ್​ ಎಲಿಮಿನೇಟ್​ ಆಗಿದ್ದಾರೆ.

ಈ ಹಿಂದೆ ಸೋನು ಶ್ರೀನಿವಾಸ್​ ಗೌಡ ಅವರ ಖಾಸಗಿ ವಿಡಿಯೋ ವೈರಲ್​ ಆಗಿ ಆ ಬಳಿಕ ಟ್ರೋಲಿಗರ ಕೆಂಗಣ್ಣಿಗೆ ಗುರಿ ಆಗಿದ್ದರು. ಆ ಕಹಿ ಘಟನೆ ನಡೆದಿದ್ದು ಹೇಗೆ ಎಂಬ ಬಗ್ಗೆ ಮೊದಲ ವಾರವೇ ಸೋನು ಗೌಡ ಬಿಗ್​ ಬಾಸ್​ ಮನೆಯಲ್ಲಿ ಬಾಯ್ಬಿಟ್ಟಿದ್ದಾರೆ. ಅಲ್ಲದೇ, ‘ನನ್ನದು ಇನ್ನೊಂದು ವಿಡಿಯೋ ಇದ್ದು, ಅದು ಯಾವಾಗ ಹೊರಬರುತ್ತೋ ಗೊತ್ತಿಲ್ಲ’ ಎಂದು ಅಳಲು ತೋಡಿಕೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು