9:33 PM Saturday20 - April 2024
ಬ್ರೇಕಿಂಗ್ ನ್ಯೂಸ್
91ರ ಹರೆಯದ ಮಾಜಿ ಪ್ರಧಾನಿ ದೇವೇಗೌಡರು ಮೋದಿ ಗೆಲ್ಲಿಸಿ ಎನ್ನುತ್ತಿದ್ದಾರೆ; ದಿನಬಳಕೆ ವಸ್ತುಗಳ… ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿ ಸೇರ್ಪಡೆ: ಪಕ್ಷದ ಧ್ವಜ ನೀಡಿ… ಮಂಗಳೂರಿನಲ್ಲಿ ಕರ್ಕಶ ಹಾರ್ನ್ ಗಳ ಕಿರಿಕಿರಿ ತಪ್ಪಿಸಲು ಪೊಲೀಸ್ ಕಾರ್ಯಾಚರಣೆ: ಹಾರ್ನ್ ಕಿತ್ತೆಸೆದು… ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ ಭಾಷಣ:  ಕೆಂಪುಕೋಟೆಯಲ್ಲಿ ಪೊಲೀಸ್ ಭದ್ರತೆ ಹೇಗಿದೆ..?

14/08/2022, 12:39

ಹೊಸದಿಲ್ಲಿ(reporterkarnataka.com)
ದೇಶದ 75ನೇ ಸ್ವಾತಂತ್ರ್ಯೋತ್ಸವ ಆಚರಣೆಗೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಕೆಂಪುಕೋಟೆಯಲ್ಲಿ ಹಮ್ಮಿಕೊಳ್ಳಲಾದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡಲಿದ್ದಾರೆ.

ಈ ಸಮಾರಂಭದಲ್ಲಿ 7000 ಮಂದಿ ಅತಿಥಿಗಳು ಭಾಗವಹಿಸುವ ನಿರೀಕ್ಷೆಯಿದೆ. ಇದೇ ವೇಳೆ, 10 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದ್ದು, ಬಹುಹಂತಗಳ ಭದ್ರತೆಯನ್ನು ಕೈಗೊಳ್ಳಲಾಗಿದೆ.

ಈ ಬಾರಿ ಮುಖ ಗುರುತಿಸುವ ವ್ಯವಸ್ಥೆ (ಎಫ್‌ಆರ್‌ಎಸ್) ಕ್ಯಾಮರಾಗಳನ್ನು ಕೂಡಾ ಕೆಂಪುಕೋಟೆ ಪ್ರವೇಶಿಸುವ ದ್ವಾರದ ಬಳಿ ಸ್ಥಾಪಿಸಲಾಗಿದೆ. ಪ್ರದೇಶದಲ್ಲಿ ರಾಡಾರ್‌ಗಳನ್ನು ನಿಯೋಜಿಸಲಾಗಿದೆ ಎಂದು ವಿಶೇಷ ಪೊಲೀಸ್ ಆಯುಕ್ತ ದೀಪೇಂದ್ರ ಪಾಠಕ್ ತಿಳಿಸಿದ್ದಾರೆ. 

ನಾವು ಅತ್ಯಂತ ನಿಖರತೆಯ ಭದ್ರತಾ ಕ್ಯಾಮರಾಗಳನ್ನು ಕೆಂಪುಕೋಟೆಯ ಸುತ್ತ ಸ್ಥಾಪಿಸಿದ್ದೇವೆ. ಇದರ ದಿನದ 24 ಗಂಟೆಗಳ ಕಾಲವೂ ನಿಗಾ ಇಟ್ಟಿದ್ದೇವೆ. ಈ ಬಾರಿ ಅತಿಥಿಗಳ ಸಂಖ್ಯೆ 7000 ಕ್ಕೇರಿದೆ. ಪ್ರವೇಶ ದ್ವಾರದಲ್ಲಿ ಎಫ್‌ಆರ್‌ಎಸ್ ಕ್ಯಾಮರಾಗಳನ್ನು ಸ್ಥಾಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

*ಏನೆಲ್ಲ ನಿಷೇಧ..?

ಬುತ್ತಿ, ನೀರಿನ ಬಾಟಲಿ, ರಿಮೋಟ್ ಕಂಟ್ರೋಲ್ ಕಾರ್ ಕೀ, ಸಿಗರೇಟ್ ಲೈಟರ್, ಬ್ರೀಫ್‌ಕೇಸು, ಕೈ ಚೀಲ, ಕ್ಯಾಮರಾ, ಬೈನಾಕ್ಯುಲರ್, ಕೊಡೆಗಳು ಮತ್ತು ಇತರ ವಸ್ತುಗಳನ್ನು ಕೆಂಪುಕೋಟೆಯ ಆವರಣದೊಳಗೆ ತರುವುದನ್ನು ನಿಷೇಧಿಸಲಾಗಿದೆ . ಗಾಳಿಪಟ. ಬಲೂನ್, ಚೀನಾ ಲಾಂದ್ರಗಳನ್ನು ಆ.13ರಿಂದ 15ರಂದು ಕಾರ್ಯಕ್ರಮ ಮುಗಿಯುವವರೆಗೆ ಹಾರಿಸುವಂತಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು