1:00 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ನಡಿಗೆ ತಾಲೀಮು ಆರಂಭ; ಕ್ಯಾಪ್ಟನ್ ಅಭಿಮನ್ಯು ನೇತೃತ್ವ

14/08/2022, 20:16

ಮೈಸೂರು(reporterkarnataka.com): ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಹಿನ್ನಲೆಯಲ್ಲಿ ಭಾನುವಾರದಿಂದ ದಸರಾ ಗಜಪಡೆಗೆ ತಾಲೀಮು ಆರಂಭಿಸಲಾಯಿತು. ಮೈಸೂರು ಅರಮನೆ ಆವರಣದಿಂದ ಬನ್ನಿಮಂಟಪದವರೆಗೂ ಪ್ರತಿದಿನ ಬೆಳಗ್ಗೆ – ಸಂಜೆ ತಾಲೀಮು ನಡೆಸುವುದು ವಾಡಿಕೆ. ಅಂತೆಯೇ ಇಂದು ತಾಲೀಮು ಆರಂಭಕ್ಕೂ ಮುನ್ನ ಅರಮನೆ ಅವರಣದಲ್ಲಿ ಆನೆಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಕೋರೋನಾ ಹಿನ್ನೆಲೆ ಕಳೆದ ಎರಡು ವರ್ಷಗಳಿಂದ ಆನೆಗಳು ಅರಮನೆ ಆವರಣದಲ್ಲಿಯೇ ತಾಲೀಮು ನಡೆಸಲಾಗಿತ್ತು. ಎರಡು ವರ್ಷಗಳ ನಂತರ ಮತ್ತೆ ಎಂದಿನಂತೆ ಅರಮನೆಯಿಂದ ಬನ್ನಿ ಮಂಟಪದವರೆಗೆ ಗಜಪಡೆಗಳು ವಾಯುವಿಹಾರಕ್ಕೆ ತೆರಳುತ್ತಿವೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ 9 ಆನೆಗಳು ಅರಮನೆಯಿಂದ ಹೊರಟು ಕೆ.ಆರ್. ಸರ್ಕಲ್, ಸಯ್ಯಾಜಿ ರಾವ್ ರಸ್ತೆ, ಆಯುರ್ವೇದಿಕ್ ಸರ್ಕಲ್, ಬಂಬೂ ಬಜಾರ್ ರಸ್ತೆ ಮೂಲಕ ಬನ್ನಿ ಮಂಟಪ ತಲುಪುತ್ತದೆ. ಮತ್ತೆ ಬನ್ನಿ ಮಂಟಪದಿಂದ ಅರಮನೆಗೆ ವಾಪಾಸ್ ಆಗಲಿವೆ.

ಈ ವೇಳೆ ಡಿಸಿಎಫ್ ಕರಿಕಾಳನ್ ಮಾತನಾಡಿ, ದಸರಾ ಮಹೋತ್ಸವ ಹಿನ್ನಲೆಯಲ್ಲಿ ಆನೆಗಳಿಗೆ ಇಂದಿನಿಂದ ತಾಲೀಮು ಪ್ರಾರಂಭ ಮಾಡಲಾಗಿದೆ. ಆನೆಗಳನ್ನು ತೂಕ ಮಾಡಲಾಗಿದೆ, ಎಲ್ಲ ಆನೆಗಳು ಅರೋಗ್ಯವಾಗಿದೆ. ಮತ್ತೊಂದು ವಿಶೇಷವೆನೆಂದರೆ ನಗರ ವಾತಾವರಣಕ್ಕೆ ಆನೆಗಳು ಹೊಂದಿಕೊಂಡಿದೆ. ಒಂದು ವಾರದ ನಂತರ ಭಾರ ಹೊರುವ ತಾಲೀಮು ಪ್ರಾರಂಭ ಮಾಡಲಾಗುತ್ತೆ ಎಂದು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು