11:00 AM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಆನೆ ದಾಳಿಗೆ ರೈತ ಬಲಿ; ಮೃತದೇಹವನ್ನು ಕಾಡಿನಲ್ಲಿ ಎಳೆದಾಡಿದ ಒಂಟಿ ಸಲಗ

15/08/2022, 23:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಡಾನೆ ದಾಳಿಯಿಂದ ವ್ಯಕ್ತಿ ಸಾವನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾರ್ಗೋಡು ಗ್ರಾಮದಲ್ಲಿ ನಡೆದಿದೆ. ಮೃತರನ್ನ ಆನಂದ್ ದೇವಾಡಿಗ(52) ಎಂದು ಗುರುತಿಸಲಾಗಿದೆ. 

ಮೃತ ಆನಂದ್ ದೇವಾಡಿಗ ಮನೆಯ ಹಿಂಭಾಗದಲ್ಲಿ ಹಸುವನ್ನು ಹುಡುಕಿಕೊಂಡು ಹೋದಾಗ ಈ ದುರ್ಘಟನೆ ಸಂಭವಿಸಿದೆ. ದಾಳಿ ಮಾಡಿದ ಕಾಡಾನೆ ಸುಮಾರು ಅರ್ಧ ಕಿ.ಮೀ ಗಿಂತಲೂ ಹೆಚ್ಚು ದೂರ ಮೃತ ದೇಹವನ್ನು ಎಳೆದೊಯ್ದಿದೆ. ಕಾಡಿನ ಒಳಗೆ ಮೃತ ಆನಂದ್ ಅವರ ದೇಹದ ಅಂಗಾಗಗಳು ಕಾಡಿನ ಸುಮಾರು ಅರ್ಧ ಕಿ.ಮೀ. ವ್ಯಾಪ್ತಿಯಲ್ಲಿ ಅಲ್ಲಲ್ಲೆ ಬಿದ್ದಿವೆ. ಮೃತದೇಹ ಇರುವ ಜಾಗಕ್ಕೂ ಚಪ್ಪಲಿ ಇರುವ ಜಾಗಕ್ಕೂ ಸುಮಾರು ಅರ್ಧ ಕಿ.ಮೀ ದೂರವಿದೆ. ಅಷ್ಟೆ ಅಲ್ಲದೆ ತಲೆ ಮೆದುಳು, ಮೂಳೆಯೂ ಒಂದೊಂದು ಜಾಗದಲ್ಲಿ ಬಿದ್ದಿದೆ.  ಮೃತದೇಹವನ್ನ ಕಾಡಿನಲ್ಲಿ ಎಳೆದು ತಂದಿರುವುದರಿಂದ ಕಾಡಿನ ಮರಗಿಡಿಗಳಿಗೆ ಸಿಲುಕಿ ಮೃತದೇಹದ ಮೇಲೆ ಯಾವುದೇ ಬಟ್ಟೆ ಇಲ್ಲದಂತಾಗಿದೆ. ಛಿದ್ರವಾಗಿರುವ  ಮೃತದೇಹವನ್ನ ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ನಿನ್ನೆ ಸಂಜೆಯೂ ನಡೆದರೂ ಬೆಳಗ್ಗೆವರೆಗೂ ಯಾರಿಗೂ ಮಾಹಿತಿ ಇರಲಿಲ್ಲ. ಮನೆಯವರು ಆನಂದ್ ಎಲ್ಲೋ ಹೋಗಿದ್ದಾರೆ. ಬರುತ್ತಾರೆ ಎಂದು ಸುಮ್ಮನಾಗಿದ್ದಾರೆ. ಆದರೆ, ಬೆಳಗ್ಗೆ ಎಲ್ಲೂ ಇಲ್ಲದಾಗ ಸ್ಥಳಿಯರು ಎರಡು ಗುಂಪುಗಳಾಗಿ ಮನೆ ಹಿಂದಿನ ಕಾಡಿನಲ್ಲಿ ಹುಡುಕಾಡಿದ್ದಾರೆ. ಆಗ ಮೃತದೇಹ ಪತ್ತೆಯಾಗಿದೆ.


ಬೆಳಗ್ಗೆ ಸ್ಥಳಿಯರು ಸ್ಥಳಕ್ಕೆ ಬರುವವರೆಗೂ ಆನೆ ಮೃತದೇಹವಿದ್ದ ಸ್ಥಳದಲ್ಲೇ ಇತ್ತಂತೆ. ಸ್ಥಳಿಯರು ಬಂದ ಬಳಿಕ ಆನೆ ಹೋಗಿದೆ.ಮೂಡಿಗೆರೆ ತಾಲೂಕಿನ ಮಲೆನಾಡು ಭಾಗದಲ್ಲಿ ಕಾಡಾನೆ ಹಾವಾಳಿ ಮಿತಿಮೀರಿದೆ. ಕಳೆದೊಂದು ವಾರದಿಂದ 13 ಕಾಡಾನೆಗಳ ಹಿಂಡು ತಾಲೂಕಿನಾದ್ಯಂತ ಅಲ್ಲಲ್ಲೇ ದಾಂದಲೆ ನಡೆಸುತ್ತಿವೆ. ಈ ಬಗ್ಗೆ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ಇದ್ದರೂ ಕೂಡ ಪಟಾಕಿ ಸಿಡಿಸುವುದ ಬಿಟ್ಟು ಅಧಿಕಾರಿಗಳು ಏನೂ ಮಾಡುವುದಿಲ್ಲ ಎಂದು ಸ್ಥಳಿಯರು ಅರಣ್ಯ ಇಲಾಖೆ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು