11:01 AM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಸಾವರ್ಕರ್ ಭಾವಚಿತ್ರ ಅಳವಡಿಸಲು ಸಿದ್ಧರಾಮಯ್ಯರ ಅನುಮತಿ ಬೇಕಾಗಿಲ್ಲ: ಶಾಸಕ ವೇದವ್ಯಾಸ್ ಕಾಮತ್ 

18/08/2022, 18:26

ಮಂಗಳೂರು(reporterkarnataka.com): ಮುಸಲ್ಮಾನರ ಏರಿಯಾದಲ್ಲಿ ಸಾವರ್ಕರ್ ಭಾವಚಿತ್ರ ಏಕೆ ಎಂಬ ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಶಾಸಕ ವೇದವ್ಯಾಸ 

ಕಾಮತ್, ಮುಸಲ್ಮಾನರ ಏರಿಯಾಗಳಲ್ಲಿ ಸಾವರ್ಕರ್ ಚಿತ್ರ ಯಾಕೆ ಎನ್ನುವ ಸಿದ್ಧರಾಮಯ್ಯನವರೇ ಮುಸಲ್ಮಾರ ಏರಿಯಾಗಳು ಪಾಕಿಸ್ಥಾನದಲ್ಲಿವೆಯಾ ? ಭಾರತದಲ್ಲಿ ಸ್ವಾತಂತ್ರ್ಯ ವೀರ ಸಾವರ್ಕರ್ ಅವರ ಭಾವಚಿತ್ರ ಬಳಸುವುದಕ್ಕೆ ಸಿದ್ಧರಾಮಯ್ಯ ಅಥವ ಕಾಂಗ್ರೇಸಿಗರ ಅನುಮತಿ ಬೇಕಿಲ್ಲ ಎಂದು ಹೇಳಿದ್ದಾರೆ.

ಸುಮ್ಮನೆ ಎರಡೆರಡು ಜೀವಾವಧಿ ಶಿಕ್ಷೆಯ ಬಿರುದು ಪಡೆದವರಲ್ಲ‌ ಸಾವರ್ಕರ್. ಅಂಡಮಾನಿನ ಕಡು ಕತ್ತಲೆ ಕೋಣೆಯೊಳಗೂ ಸ್ವಾತಂತ್ರ್ಯದ ಕುರಿತು ಚಿಂತಿಸುತ್ತಿದ್ದ ಅವರನ್ನು ವಿರೋಧಿಸುವ ಹಕ್ಕು ಯಾರಿಗೂ ಇಲ್ಲ. ಈ ದೇಶದ ಸ್ವಾತಂತ್ರ್ಯಕ್ಕಾಗಿ ಜೀವ ಸವೆಸಿದ ಕಾರಣಕ್ಕಾಗಿ ಅವರನ್ನು ಸ್ವಾತಂತ್ರ್ಯ ವೀರ ಎಂದು ಕರೆಯುತ್ತಾರೆಯೇ ವಿನಃ ತಮಗೆ ತಾವೇ ಭಾರತ ರತ್ನ ಕೊಟ್ಟಂತೆ ಪಡೆದ ಬಿರುದಲ್ಲ ಅದು. ಕರಿನೀರ ಶಿಕ್ಷೆ ದೂರದ ಮಾತು, ಐಷಾರಾಮಿ ವ್ಯವಸ್ಥೆಗಳಿದ್ದ ಜೈಲಿನೊಳಗೆ ರಾಜಕೀಯ ಖೈದಿಯಾಗಿ ಸೇರಿ ಅನಾರೋಗ್ಯದ ಕಾರಣ ನೀಡಿ ಕ್ಷಮಾರ್ಪಣೆ ಪತ್ರ ಬರೆದವರು ವೀರ ಸಾವರ್ಕರ್ ಕುರಿತು ಆಡಿಕೊಳ್ಳುವುದು ಹಾಸಾಸ್ಪದ ಎಂದು ಶಾಸಕ ಕಾಮತ್ ಕಿಡಿ ಕಾರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು