3:59 PM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಅಮೃತ ಮಹೋತ್ಸವ: ಮರಿಯ ನಿಲಯದ ವಿಶೇಷ ಸಾಮರ್ಥ್ಯವುಳ್ಳ ನಿವಾಸಿಗಳಿಗೆ ಸೋಲಾಪುರ ಚಾದರ, ಸಿಹಿ ತಿಂಡಿ ವಿತರಣೆ

21/08/2022, 19:49

ಮಂಗಳೂರು(reporterkarnataka.com):ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಸೊಸೈಟಿ, ವಲೆನ್ಸಿಯಾ ಶಾಖೆಯ ವತಿಯಿಂದ ಸ್ವಾತಂತ್ರ್ಯ ದಿವಸದ ಅಮೃತ ಮಹೋತ್ಸವದ ಅಂಗವಾಗಿ ಇನ್ಫೆಂಟ್ ಮೇರಿ ಕಾನ್ವೆಂಟಿನ ಮರಿಯ ನಿಲಯದ ವಿಶೇಷ ಸಾಮರ್ಥ್ಯವುಳ್ಳ ನಿವಾಸಿಗಳಿಗೆ ಆಗಸ್ಟ್ 17ರಂದು ಆಯೋಜಿಸಿದ ಕಾರ್ಯಕ್ರಮದಲ್ಲಿ ಸೋಲಾಪುರ ಚಾದರ ಮತ್ತು ಸಿಹಿ ತಿಂಡಿ ವಿತರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿ ಸೋಜ ಮಾತನಾಡಿ, “ಸಮಾಜ ಸೇವೆ ಮಾಡುವಲ್ಲಿ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಸೊಸೈಟಿ ಯಶಸ್ವಿಯಾಗಿದೆ”, ಗಳಿಸಿದ್ದಲ್ಲಿ ಒಂದು ಪಾಲನ್ನು ಸಮಾಜಕ್ಕೆ ನೀಡಬೇಕು ಎನ್ನುವ ವ್ಯವಸ್ಥಾಪಕ ನಿರ್ದೇಶಕರಾದ ಜಾರ್ಜ್ ಫೆರ್ನಾಂಡಿಸ್‌ರವರ ಕಲ್ಪನೆಯನ್ನು ಶ್ಲಾಘಿಸಿದರು. 

ಅತಿಥಿ ನಿವೃತ್ತ ಹಿರಿಯ ಶ್ರೇಣಿ ಅಧಿಕಾರಿ ಸಿಪ್ರಿಯನ್ ಪಿಂಟೋ ಅವರು ಮಾತನಾಡಿ, ಮುಂದೆಯೂ ಸಹಕಾರಿಯಿಂದ ಹಲವಾರು ಸಮಾಜಮುಖಿ ಕಾರ್ಯಗಳು ನಡೆಯಲಿ ಎಂದು ಆಶಿಸಿದರು. 

ಇನ್ಫೆಂಟ್ ಮೇರಿ ಕಾನ್ವೆಂಟಿನ ಸುಪೀರಿಯರ್ ಸಿ| ಸಿಲ್ವಿಯಾರವರು ಸಹಕಾರಿಯ ಬೆಳವಣಿಗೆಗೆ ಶುಭ ಹಾರೈಸಿದರು.  

ಅಭಿವೃದ್ಧಿ ವ್ಯವಸ್ಥಾಪಕರಾದ ಜೀವನ್ ಡಿ ಸೋಜ ಅವರು ಮಾತನಾಡುತ್ತಾ, ನಮ್ಮ ಸಹಕಾರಿ 9 ಜಿಲ್ಲೆಗಳಲ್ಲಿ, 111 ಶಾಖೆಗಳ ಮೂಲಕ ಕರ್ತವ್ಯ ನಿರ್ವಹಿಸಿದ್ದು ಇಂತಹ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವುದು ನಮಗೆಲ್ಲರಿಗೂ ಸಂತಸದ ವಿಚಾರ, ಇದಕ್ಕೆಲ್ಲಾ ಮೂಲ ಕಾರಣ ನಮ್ಮ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಜಾರ್ಜ್ ಫೆರ್ನಾಂಡಿಸ್‌ರವರು, ಅವರ ಸಹಕಾರವಿಲ್ಲದೆ ಸಂಸ್ಥೆ ಇಂತಹ ತೀರ್ಮಾನ ಕೈಗೊಳ್ಳಲು ಅಸಾಧ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 


ಶಾಖಾ ವ್ಯವಸ್ಥಾಪಕರಾದ ಪ್ರಜ್ವಲ್ ಜೆರೋಮ್ ಫ್ರೊಂಟೇರೊ, ಸಮಾಜ ಸೇವಕರಾದ ಆಸ್ಟನ್ ಡಿ ಕ್ಹುನಾ, ಹುಸೈನ್, ಹಬೀಬುಲ್ಲಾ ಹಾಗೂ ವಲೆನ್ಸಿಯಾ ಶಾಖೆಯ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಮರಿಯ ನಿಲಯದ ನಿವಾಸಿಗಳು ಪ್ರಾರ್ಥನಾ ಗೀತೆಯನ್ನು ಹಾಡಿದರು. ದೀಪವನ್ನು ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಪೂರ್ಣಶ್ರೀ ಸ್ವಾಗತಿಸಿದರು.

ರೀಮಾ ಲೂವಿಸ್ ವಂದಿಸಿದರು. ಎಲ್ವಿಟಾ ರೀಮಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು