ಇತ್ತೀಚಿನ ಸುದ್ದಿ
ಕೊಟ್ಟಿಗೆಹಾರ: ಕಾಡಾನೆ ದಾಳಿಯಿಂದ ತೀವ್ರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು
22/08/2022, 00:44
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಮೂಲರ ಹಳ್ಳಿ ಗ್ರಾಮದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ್ದು, ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಎಂ.ಬಿ. ಶಿವಣ್ಣ( 52) ಎಂಬವರು ಆನೆಯ ದಾಳಿಗೊಳಗಾದವರು. ಗಾಯಾಳು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಮೂಲರಹಳ್ಳಿಯಲ್ಲಿ ಘಟನೆ ನಡೆದಿದೆ.