1:51 AM Friday26 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ಕ್ರಿಕೆಟ್ ಗೆ ಟೀಂ ಇಂಡಿಯಾ ಆಟಗಾರ ಸುರೇಶ್ ರೈನಾ ವಿದಾಯ: 13 ವರ್ಷ ಅಂತಾರಾಷ್ಟ್ರೀಯ ಪಂದ್ಯ ಆಡಿದ ಹೆಗ್ಗಳಿಕೆ

06/09/2022, 21:26

ಮುಂಬೈ(reporterkarnataka.com):
ಟೀಂ ಇಂಡಿಯಾ ಆಟಗಾರ‌ ಸುರೇಶ್ ರೈನಾ ಎಲ್ಲ ಮಾದರಿಯ ಕ್ರಿಕೆಟ್​​ ಫಾರ್ಮ್ಯಾಟ್​ಗಳಿಗೆ ಗುಡ್​ಬೈ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ನಿವೃತ್ತಿ ಬಗ್ಗೆ ಅವರು ಘೋಷಣೆ ಮಾಡಿದ್ದಾರೆ. ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಾನು ವಿದಾಯ ಹೇಳುತ್ತಿದ್ದೇನೆ. ದೇಶ ಮತ್ತು ನನ್ನ ರಾಜ್ಯ ಉತ್ತರ ಪ್ರದೇಶವನ್ನ ಪ್ರತಿನಿಧಿಸುವುದು ಒಂದು ಸಂಪೂರ್ಣ ಗೌರವವಾಗಿದೆ.

ನನ್ನ ಕ್ರಿಕೆಟ್ ಬದುಕಿನಲ್ಲಿ ಸಹಕಾರ ನೀಡಿದ ಬಿಸಿಸಿಐ, ಉತ್ತರ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್, ಚೆನ್ನೈ ಐಪಿಎಲ್, ರಾಜೀವ್ ಶುಕ್ಲಾ, ನನ್ನ ಕುಟುಂಬ ಹಾಗೂ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದಿದ್ದಾರೆ.

13 ವರ್ಷಗಳ ಕಾಲ ಅಂತಾರಾಷ್ಟ್ರೀಯ ಪಂದ್ಯಗಳನ್ನ ಆಡಿರುವ ಸುರೇಶ್ ರೈನಾ, 18 ಟೆಸ್ಟ್​ ಪಂದ್ಯಗಳು, 226 ಏಕದಿನ ಪಂದ್ಯ ಹಾಗೂ 78 ಟಿ-20 ಪಂದ್ಯಗಳನ್ನ ಆಡಿದ್ದಾರೆ. ಮಾತ್ರವಲ್ಲ, ಟೀಂ ಇಂಡಿಯಾವನ್ನು ಮುನ್ನೆಡಿಸಿ ಕೀರ್ತಿಯೂ ಇವರಿಗೆ ಸಲ್ಲುತ್ತದೆ. ಕಳೆದ ಬಾರಿಯ ಐಪಿಎಲ್​ನಲ್ಲಿ ರೈನಾರನ್ನ ಚೆನ್ನೈ ಸೂಪರ್ ಕಿಂಗ್ಸ್​ ಕೈಬಿಟ್ಟಿತ್ತು. ಹರಾಜು ಪ್ರಕ್ರಿಯೆಯಲ್ಲಿ ಅನ್​ಸೋಲ್ಡ್​ ಆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು