8:31 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ಯುವವಾಹಿನಿ ಕಂಕನಾಡಿ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರು ನಮನ

16/09/2022, 08:55

ಮಂಗಳೂರು(reporterkarnataka.com):ಯುವವಾಹಿನಿ ಕಂಕನಾಡಿ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುನಮನ ಕಾರ್ಯಕ್ರಮ ಘಟಕದ ಕಚೇರಿಯಲ್ಲಿ ಘಟಕದ ಸಾಪ್ತಾಹಿಕ ಸಭೆಯಲ್ಲಿ ಆಚರಿಸಲಾಯಿತು. 

ಘಟಕದ ಅಧ್ಯಕ್ಷ ಪೃಥ್ವಿರಾಜ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಘಟಕದ ಮಾಜಿ ಅಧ್ಯಕ್ಷರು ಗಳಾದ ಶೇಖರ್ ಅಮೀನ್, ಹರೀಶ್ ಸನಿಲ್, ಗೋಪಾಲ ಎಂ.ಪೂಜಾರಿ, ಭವಿತ್ ರಾಜ್, ಸುರೇಶ್.ಎಂ.ಎಸ್. ಹಾಗೂ ಸುಮಾ ವಸಂತ್, ನಯನ ಸುರೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಅಧ್ಯಕ್ಷರು ಅತಿಥಿಗಳನ್ನು, ಶಿಕ್ಷಕರನ್ನು ಹಾಗೂ ಸದಸ್ಯರನ್ನು ಸ್ವಾಗತಿಸಿದರು. ಕಾರ್ಯದರ್ಶಿ ಸುರೇಖಾ ಮೋಹನ್ ಪದಗ್ರಹಣ ಹಾಗೂ ಜಂಟಿ ಸಭೆಯ ವರದಿ ಮಂಡಿಸಿ ಅನುಮೋದನೆ ಪಡೆದರು. ನಂತರ ಪರಿಸರದ ನಿವೃತ್ತ ಶಿಕ್ಷಕರಾದ ಯು.ಸದಾಶಿವ ರಾವ್, 

ಪುಷ್ಪ, ಜಯಶ್ರೀ ಹಾಗೂ ಕೇಂದ್ರ ಸಮಿತಿಯ ಸಾರಥ್ಯದಲ್ಲಿ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಡೆನ್ನಾನ ಡೆನ್ನಾನ ಸ್ಪರ್ಧಾ ಕಾರ್ಯಕ್ರಮಕ್ಕೆ ನಮ್ಮ ಘಟಕದ ಸದಸ್ಯರಿಗೆ ನೃತ್ಯರೂಪಕ ನಿರ್ದೇಶನ ಮಾಡಿದ ಪ್ರವೀಣ್ ಬಜಾಲ್ ಹಾಗೂ

ದಿನಕರ್ ಪೂಜಾರಿ  ಅವರುಗಳನ್ನು ಶಾಲು ಹೊದಿಸಿ, ಫಲಪುಷ್ಪ, ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು. 

ಗೌರವ ಸ್ವೀಕರಿಸಿದ ಶಿಕ್ಷಕರಾದ ಯು. ಸದಾಶಿವ ರಾವ್ ಮಾತನಾಡಿ, ನಮ್ಮಲ್ಲಿರುವ ಮೆಕಾಲೆ ಶಿಕ್ಷಣ ಪದ್ಧತಿಯ ಬದಲು ಮೌಲ್ಯಯುತ ಶಿಕ್ಷಣ ನೀಡಬೇಕು. ಮೊದಲ ಗುರುವಾಗಿರುವ ಜನನಿ ನಮ್ಮ ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ತಿಳುವಳಿಕೆ ನೀಡಬೇಕು. ಮೊಬೈಲ್ ಬಳಕೆಯನ್ನು ವಿದ್ಯಾರ್ಜನೆಗೆ ಅನುಕೂಲವಾಗುವಂತೆ ಬಳಸಬೇಕು ಎಂದು ತಿಳಿ ಹೇಳಿ ಕಂಕನಾಡಿ ಘಟಕದ ಕಾರ್ಯವೈಖರಿಯನ್ನು ಶ್ಲಾಘಿಸಿ ನೂತನ ಅಧ್ಯಕ್ಷರನ್ನು ಅಭಿನಂದಿಸಿ ಘಟಕದ ವತಿಯಿಂದ ಇನ್ನಷ್ಟು ಸಮಾಜಮುಖಿ ಕೆಲಸಗಳಾಗಲಿ ಎಂದು ಹಾರೈಸಿದರು.

 ಸನ್ಮಾನ ಪಡೆದ ಮತ್ತೊಬ್ಬ ಅಂಗನವಾಡಿ ಶಿಕ್ಷಕಿ ಪುಷ್ಪರವರು ಸದುದ್ದೇಶದಿಂದ ಸಾರ್ವತ್ರಿಕವಾಗಿ ಉಪಯೋಗಕ್ಕೆ ಬರುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಹಿರಿಯ ಕಿರಿಯರೆಲ್ಲರ ಅಭಿಪ್ರಾಯಗಳಿಗೆ ಮನ್ನಣೆ ನೀಡಿ ದಿಟ್ಟ ಹೆಜ್ಜೆಯೊಂದಿಗೆ ಕಾರ್ಯಕ್ರಮ ನಡೆಸಬೇಕೆಂದು ಸದಸ್ಯರೆಲ್ಲರಿಗೂ ಕಿವಿ ಮಾತು ನೀಡಿದರು.

ನಮಗೆ ತಿಳುವಳಿಕೆ ನೀಡುವ ಪ್ರತಿಯೊಬ್ಬರೂ ಕೂಡಾ ಶಿಕ್ಷಕರು ಎಂಬ ಶ್ರೇಷ್ಠ ಮನೋಭಾವದೊಂದಿಗೆ  ಘಟಕದ ಅಧ್ಯಕ್ಷರಾದ ಪೃಥ್ವಿರಾಜ್ ನಮ್ಮ ಘಟಕದ ಎಲ್ಲಾ ಮಾಜಿ ಅಧ್ಯಕ್ಷರುಗಳನ್ನು, ಘಟಕದ ಶಿಕ್ಷಕರನ್ನು ಹಾಗೂ ಮಂಗಳೂರು ಘಟಕದ ಮಾಜಿ ಅಧ್ಯಕ್ಷರಾದ ಡಾ. ರಾಕೇಶ್ ಕುಮಾರ್ ಇವರಿಗೆ ಹೂ ನೀಡಿ ಗೌರವಿಸಲಾಯಿತು.

ನಂತರ ಘಟಕದ ಹೊಸ ಸದಸ್ಯರನ್ನು ಹೂ ನೀಡಿ ಅಭಿನಂದಿಸಲಾಯಿತು.ಕಾರ್ಯಕ್ರಮದ ನಿರೂಪಣೆಯನ್ನು  ರಚನಾ ಶೇಖರ್ ನೆರವೇರಿಸಿದರು. ಘಟಕದ ಕಾರ್ಯದರ್ಶಿ ಸುರೇಖಾ ಮೋಹನ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು