7:54 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಮುಂದಿನ ವರ್ಷ ಭೀಕರ ಜಾಗತಿಕ ಆರ್ಥಿಕ ಹಿಂಜರಿತ : ವಿಶ್ವ ಬ್ಯಾಂಕ್‌ ಎಚ್ಚರಿಕೆ

17/09/2022, 20:03

ಹೊಸದಿಲ್ಲಿ(reporterkarnataka.com): ಮುಂದಿನ ವರ್ಷ ಜಾಗತಿಕ ಆರ್ಥಿಕ ಹಿಂಜರಿತ ಕಾಣಿಸಿಕೊಳ್ಳಲಿದೆ ಎಂದು ವಿಶ್ವ ಬ್ಯಾಂಕ್‌ ಮುಖ್ಯಸ್ಥ ಡೇವಿಡ್‌ ಮಾಲ್ಪಾಸ್‌ ಹೇಳಿದ್ದಾರೆ. ಒಂದುಕಡೆ ಜಗತ್ತಿನ ಎಲ್ಲ ದೇಶಗಳ ಕೇಂದ್ರ ಬ್ಯಾಂಕ್‌ಗಳು ಹಣದುಬ್ಬರ ನಿಯಂತ್ರಿಸಲು ಸಾಲದ ಮೇಲಿನ ಬಡ್ಡಿದರವನ್ನು ಹೆಚ್ಚಿಸಿವೆ.

ಇದರ ಅಡ್ಡ ಪರಿಣಾಮವೆಂಬಂತೆ ಹೂಡಿಕೆ ಮೇಲೆ ಹೊಡೆತವುಂಟಾಗಿದೆ. ಉದ್ಯೋಗನಷ್ಟ ಸಂಭವಿಸಿದೆ, ಬೆಳವಣಿಗೆ ಕುಸಿದಿದೆ, ವ್ಯಾಪಾರ ಕಡಿಮೆಯಾಗಿದೆ ಎಂದು ವಿಶ್ವ ಬ್ಯಾಂಕ್‌ ಕಳವಳ ವ್ಯಕ್ತಪಡಿಸಿದೆ.

ಈಗಿನ ಲೆಕ್ಕಾಚಾರದ ಪ್ರಕಾರ 1970ರ ನಂತರ ಜಾಗತಿಕವಾಗಿ ಅತ್ಯಂತ ಕಷ್ಟಕರವಾದ ಆರ್ಥಿಕ ಹಿಂಜರಿತ ಸಂಭವಿಸುವುದು ಸ್ಪಷ್ಟ ಎನ್ನುವುದು ಡೇವಿಡ್‌ ಮಾಲ್ಪಾಸ್‌ ವಿಶ್ಲೇಷಣೆ. ಇದನ್ನು ಸರಿಪಡಿಸಲಿಕ್ಕಾಗಿ ಉತ್ಪಾದನೆ ಹೆಚ್ಚಿಸುವುದು, ಪೂರೈಕೆಗೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳುವುದು ಒಂದು ದಾರಿಯಾಗಿದೆ.

34.5 ಕೋಟಿ ಜನ ಉಪವಾಸದತ್ತ: ರಷ್ಯಾ-ಉಕ್ರೇನ್‌ ಯುದ್ಧ ಶುರುವಾದ ನಂತರ ಜಾಗತಿಕವಾಗಿ ಆಹಾರ ಪೂರೈಕೆ ಮೇಲೆ ಭಾರೀ ಹೊಡೆತ ಬಿದ್ದಿದೆ. ಹಾಗಾಗಿ ಜಗತ್ತಿನ 82 ದೇಶಗಳಲ್ಲಿ 34.5 ಕೋಟಿ ಮಂದಿ ಉಪವಾಸ ಬೀಳುವುದಕ್ಕೆ ಹತ್ತಿರವಾಗುತ್ತಿದ್ದಾರೆ. ಈಗಾಗಲೇ 7 ಕೋಟಿ ಮಂದಿ ಆ ಸ್ಥಿತಿಗೆ ಸಮೀಪಿಸಿದ್ದಾರೆ ಎಂದು ವಿಶ್ವ ಆಹಾರ ಸಂಸ್ಥೆ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು