3:25 AM Friday19 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ದಕ್ಷಿಣಕನ್ನಡ ಜಿಲ್ಲಾದ್ಯಂತ ಪಿಎಫ್ ಐ ನಾಯಕರ ಮನೆಗಳಿಗೆ ಎನ್ ಐಎ ದಾಳಿ: ಭಾರಿ ಪ್ರತಿಭಟನೆ

22/09/2022, 10:51

ಮಂಗಳೂರು(reporterkarnataka.com): ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ದ.ಕ. ಜಿಲ್ಲಾ ಕಚೇರಿ ಸೇರಿದಂತೆ ಪಿಎಫ್ಐ ನಾಯಕರ ಮನೆ ಮೇಲೆ ಇಂದು ಬೆಳ್ಳಂಬೆಳಗ್ಗೆ ಎನ್ಐಎ ಅಧಿಕಾರಿಗಳು
ದಾಳಿ ನಡೆಸಿದ್ದಾರೆ.
ರಾಜ್ಯ ಪಿಎಫ್ ಐ ನಾಯಕರ ಮನೆ ಮೇಲೆ ಕೆಲವು ದಿನಗಳಿಂದ ದಾಳಿ ನಡೆಸುತ್ತಿರುವ ಎನ್ಐಎ ಗುರುವಾರ ಬೆಳಗ್ಗೆ ಮಂಗಳೂರು ಹೊರವಲಯದ ಕಾವೂರು, ಬಜ್ಪೆ, ಜೋಕಟ್ಟೆ, ಸ್ಟೇಟ್ ಬ್ಯಾಂಕ್, ಕುಳಾಯಿ ಸೇರಿದಂತೆ ಕೆಲವೆಡೆ ರಾಜ್ಯ ಪಿಎಫ್ಐ ನಾಯಕರ ಮನೆ ಮೇಲೆ ದಾಳಿ ನಡೆಸಿದೆ.
ನಾಯಕರ ಮನೆ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ನಡೆಸುತ್ತಿರುವ ಸುದ್ದಿ ತಿಳಿಯುತ್ತಿದ್ದಂತೆ ಮನೆ ಮುಂಭಾಗ ಪಿಎಫ್ಐ ಕಾರ್ಯಕರ್ತರು ಜಮಾಯಿಸಿದ್ದು, ಗೋ ಬ್ಯಾಕ್ ಎನ್ಐಎ ಘೋಷಣೆ ಕೂಗಿ, ಇದು ಸರಕಾರಿ ದಾಳಿ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಉಪ್ಪಿನಂಗಡಿ, ಬೋಳಂತೂರುನಲ್ಲಿಯೂ ದಾಳಿ ನಡೆದ ಬಗ್ಗೆ ವರದಿಯಾಗಿದ್ದು, ಪಿಎಫ್ಐ ನಾಯಕರ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಏಕಕಾಲಕ್ಕೆ ವಿವಿಧ ವಾಹನಗಳಲ್ಲಿ ಆಗಮಿಸಿ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದು, ವಿಷಯ ತಿಳಿಯುತ್ತಿದ್ದಂತೆ ಪಕ್ಷದ ಕಾರ್ಯಕರ್ತರು ಜಮಾಯಿಸಿ ಎನ್ ಐಎ ವಿರುದ್ಧ ಗೋ ಬ್ಯಾಕ್ ಘೋಷಣೆ ಕೂಗುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು