10:05 AM Wednesday8 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಪ್ರತಿಷ್ಠಿತ ‘ಪುವೆಂಪು ಸನ್ಮಾನ್’ ಗೆ ರಾಷ್ಟ ಪ್ರಶಸ್ತಿ ವಿಜೇತ ಗಾಯಕ ಡಾ. ರಮೇಶ್ಚಂದ್ರ ಆಯ್ಕೆ

23/09/2022, 20:00

ಕುಂಬಳೆ(reporterkarnataka.com): ತುಳು ಲಿಪಿ ಸಂಶೋಧಕ, ವಿದ್ವಾಂಸ, ಕೇರಳ ತುಳು ಅಕಾಡೆಮಿಯ ಪ್ರಥಮ ಅಧ್ಯಕ್ಷ, ತುಳುರತ್ನ ಪುಂಡೂರು ವೆಂಕಟರಾಜ ಪುಣಿಂಚಿತ್ತಾಯರ ಜಯಂತಿ ಪ್ರಯುಕ್ತ ತುಳುವರ್ಲ್ಡ್ ಮಂಗಳೂರು ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದಲ್ಲಿ ಪುವೆಂಪು ಅಭಿಮಾನಿಗಳು ಆಯೋಜಿಸುವ ‘ಪುವೆಂಪು ನೆಂಪು 2022’ ಕಾರ್ಯಕ್ರಮದಲ್ಲಿ ಪ್ರತಿಷ್ಠಿತ “ಪುವೆಂಪು ಸಮ್ಮಾನ್‌”ಗೆ ಖ್ಯಾತ ಹಿನ್ನಲೆ ಗಾಯಕ, ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ರಮೇಶ್ಚಂದ್ರ ಆವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘಟನಾ ಸಮಿತಿ ತಿಳಿಸಿದೆ.

10 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡ ಪ್ರಶಸ್ತಿ ಸನ್ಮಾನವನ್ನು  ಅಕ್ಟೋಬರ್ 10ಕ್ಕೆ ಅನಂತಪುರದಲ್ಲಿ ಜರಗುವ “ಪುವೆಂಪು- ನೆಂಪು”  ಕಾರ್ಯಕ್ರಮದಲ್ಲಿ ಸಂಸದರು, ಶಾಸಕರು ಹಾಗೂ ವಿವಿಧ ಜನಪ್ರತಿನಿದಿಗಳು, ಸಾಹಿತ್ಯ, ಸಾಂಸ್ಕೃತಿಕ ಗಣ್ಯರ ಉಪಸ್ಥಿತಿಯಲ್ಲಿ ಪ್ರದಾನಿಸಲಾಗುತ್ತದೆ.

ವರ್ಷಂಪ್ರತಿ ನಡೆಯುವ “ಪುವೆಂಪು ನೆಂಪು” ಕಾರ್ಯಕ್ರಮದಲ್ಲಿ ಪುವೆಂಪು ಸಮ್ಮಾನ್ ಪ್ರದಾನಿಸಲಾಗುತ್ತಿದ್ದು, ಕಳೆದ ಬಾರಿ ಗಾಯಕ ಕೃಷ್ಣ ಕಾರಂತ್ ಅವರಿಗೆ ನೀಡಲಾಗಿತ್ತು.

ಪುಣಿಂಚಿತ್ತಾಯರ ಬದುಕು ಬರಹಗಳನ್ನು ಅನಾವರಣಗೊಳಿಸುವುದರೊಂದಿಗೆ ಹೊಸ ತಲೆಮಾರಿಗೆ ಇದನ್ನು ತಿಳಿಯಪಡಿಸುವಲ್ಲಿ ಸಫಲರಾಗುತ್ತಿರುವವರನ್ನು ಪ್ರೋತ್ಸಾಹಿಸಲು ಪುವೆಂಪು ಸಮ್ಮಾನ್ ನೀಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ಖ್ಯಾತ  ಗಾಯಕ, ಮೂರು ಬಾರಿ ರಾಜ್ಯ ಪ್ರಶಸ್ತಿ ವಿಜೇತ ಡಾ.ರಮೇಶ್ಚಂದ್ರ 

ಅವರಿಗೆ ನೀಡಲಾಗುತ್ತಿದೆ. ಮೂಲತಃ ಕಾಸರಗೋಡಿನವರಾಗಿದ್ದ ಅವರು ಇದೀಗ ಬೆಂಗಳೂರಿನಲ್ಲಿ ಚಲನಚಿತ್ರ ಹಿನ್ನಲೆ ಗಾಯಕರಾಗಿ ಪ್ರಸಿದ್ಧರಾಗಿದ್ದಾರೆ. ಕಳೆದ ಬಾರಿ ಮಂಗಳೂರಿನಲ್ಲಿ 101 ಕವಿಗಳ ತುಳು ಕವನ ಪ್ರಕಟಿಸಿ ವೆಂಕಟರಾಜ ಪುಣಿಂಚಿತ್ತಾಯರಿಗೆ ಸಮರ್ಪಿಸಿ ಬರೆಯಲು ಅವಕಾಶ ನೀಡಿದ್ದಲ್ಲದೆ  ರಾಗ ಸಂಯೋಜಿಸಿ ತುಳುವರಿಗೆ ಉತ್ತಮ  ಹಾಡುಗಳ ಕೊರತೆಯನ್ನು ನೀಗಿಸಿ ಈ ಹಾಡುಗಳನ್ನು ಜಗತ್ಪ್ರಸಿದ್ಧಗೊಳಿಸಿದ್ದಾರೆ. ರಮೇಶ್ಚಂದ್ರ ಅವರು ‘ಪುವೆಂಪು ನೂತೊಂಜಿ ನೆಂಪು” ಎಂಬ ವಿಭಿನ್ನ ಕಾರ್ಯಕ್ರಮ ಆಯೋಜಿಸಿ ಅದರಲ್ಲಿ ಪುಸ್ತಕ  ಬಿಡುಗಡೆಗೊಳಿಸಿ ಜನ ಮನ್ನಣೆಗೆ ಪಾತ್ರರಾಗಿದ್ದರು. ನಾಡಿನ ನಾನಾ ತುಳು ಕನ್ನಡ ಸಾಹಿತಿಗಳಿಗೆ, ಗಾಯಕರಿಗೆ, ಸಂಘಟಕರಿಗೆ,   ಅವಕಾಶ ನೀಡಿದ್ದಲ್ಲದೆ. ತನ್ನ “ಟೀಮ್ ಐಲೇಸಾ” ಎಂಬ ತಂಡದ ಮೂಲಕ ದೇಶ -ವಿದೇಶದಲ್ಲಿ ತುಳುರತ್ನ ಪುಂಡೂರು ವೆಂಕಟರಾಜ ಪುಣಿಂಚಿತ್ತಾಯರ ಸಾಹಿತ್ಯಗಳನ್ನು ಪ್ರಸ್ತುತಪಡಿಸುವಲ್ಲಿ ರಮೇಶ್ಚಂದ್ರ ಪ್ರಧಾನ ಪಾತ್ರವಹಿಸಿರುವುದಕ್ಕಾಗಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಶಸ್ತಿ ಆಯ್ಕೆ ಸಮಿತಿ ಹಾಗೂ ಕಾರ್ಯಕ್ರಮ ಸಂಘಟಕರು ಜಂಟಿಯಾಗಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು