12:09 PM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ ಅರ್ಧಂಬರ್ಧ ಕಾಮಗಾರಿ!: ಜನರಿಗೆ ತಪ್ಪದ ಕಿರಿಕಿರಿ!!: ಅಭಿವೃದ್ಧಿ ಹೆಸರಿನಲ್ಲಿ ನಿತ್ಯ ನರಕ!

25/09/2022, 19:13

ಅನುಷ್ ಪಂಡಿತ್ ಮಂಗಳೂರು /ಗಣೇಶ್ ಅದ್ಯಪಾಡಿ

info.reporterkarnataka@gmail.com

ಸ್ಮಾರ್ಟ್ ಸಿಟಿ ಆಗುವ ಕನಸು ಕಾಣುತ್ತಿರುವ ಮಂಗಳೂರು ಮಹಾನಗರ ಇನ್ನೂ ಹಲವಾರು ಮೂಲ ಸೌಕರ್ಯಗಳ ಸಮರ್ಪಕ ನಿರ್ವಹಣೆಯಲ್ಲಿ ಹಿಂದೆ ಉಳಿದಿದೆ ಎಂದರೆ ತಪ್ಪಾಗಲಾರದು.

ಹೌದು, ನಗರದ ಮುಖ್ಯ ಸಮಸ್ಯೆಯಾದ ಚರಂಡಿಗಳ ನಿರ್ಮಾಣ ಹಾಗೂ ನಿರ್ವಹಣೆ ಸರಿಯಾದ ರೀತಿಯಲ್ಲಿ ಆಗದೆ ಇರುವುದರಿಂದ ಹಲವಾರು ರೀತಿಯ ಸಮಸ್ಯೆಗಳು ಎದುರಾಗುತ್ತಿವೆ.


ವೇದವ್ಯಾಸ ಕಾಮತರು ಶಾಸಕರಾದ ಮೇಲೆ ಹಲವಾರು ಅನುದಾನಗಳು ಮಹಾನಗರ ಪಾಲಿಕೆ ವ್ಯಾಪ್ತಿಗೆ ಸಿಕ್ಕಿದರೂ ಕೂಡ ಕಾಮಗಾರಿಗಳು ಸಮಯಕ್ಕೆ ಮುಕ್ತಾಯಗೊಳ್ಳದೆ ಜನರು ಕಿರಿಕಿರಿ ಅನುಭವಿಸುವಂತಾಗಿದೆ.

ನಗರದ ಹಲವು ಭಾಗಗಳಲ್ಲಿ ಒಳಚರಂಡಿ ದುರಸ್ತಿಗಾಗಿ ರಸ್ತೆಯನ್ನು ಅಗೆದು ಹಾಗೆಯೆ ಬಿಡಲಾಗಿದೆ. ಜ್ಯೋತಿ ಬಲ್ಮಠದ ಸುತ್ತಾ ಈ ರೀತಿಯ ಸಮಸ್ಯೆಗಳನ್ನು ಕಾಣಬಹುದು.

ಅದೇ ರೀತಿ ಹಲವು ಕಡೆ ಫುಟ್ ಪಾತ್ ಚರಂಡಿ ಸ್ಲ್ಯಾಬ್‌ಗಳು ಕಳಚಿ ಹೋಗಿದ್ದರೂ ಇನ್ನೂ ರಿಪೇರಿ ನಡೆದಿಲ್ಲ. ಕಲೆಕ್ಟರ್‌ಸ್ ಗೇಟ್ ಹಾಗೂ ಬಲ್ಲಾಳ್ ಭಾಗ್‌ನ ಮಣ್ಣಗುಡ್ಡೆ ರಸ್ತೆಯಲ್ಲಿ ಈ ಸಮಸ್ಯೆಯನ್ನು ಕಾಣಬಹುದು. ಅದೇ ರೀತಿ ನಗರದ ಮುಖ್ಯ ಭಾಗದ ಹಲವಾರು ರಸ್ತೆಗಳ ರಿಪೇರಿ ಕೂಡ ಸಮರ್ಪಕವಾಗಿ ಮಾಡಲಿಲ್ಲ..

ಮಂಗಳೂರು ಮಹಾನಗರ ಪಾಲಿಕೆ ಸಮೀಪದಲ್ಲಿ ಹಾಗೂ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಹೋಗುವ ದಾರಿಯಲ್ಲಿ ಇ-ಟಾಯ್ಲೆಟ್ ಸ್ಥಾಪಿಸಲಾಗಿತ್ತು ಆದರೆ ಇದೀಗ ಸಮರ್ಪಕ ನಿರ್ವಹಣೆ ಇರದೆ ಮೂಲೆಗೆ ಸೇರಿಬಿಟ್ಟಿದೆ. ಇದರ ಬಗ್ಗೆಯೂ ಮಾರ್ವಲೆಸ್ ಮಂಗಳೂರು, ಗ್ರೀನ್ ಮಂಗಳೂರು ಅಭಿಯಾನಗಳನ್ನು ಆರಂಭಿಸಿದ ಮಾನನೀಯ ಶಾಸಕರು ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು