1:15 PM Friday19 - April 2024
ಬ್ರೇಕಿಂಗ್ ನ್ಯೂಸ್
ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ…

ಇತ್ತೀಚಿನ ಸುದ್ದಿ

ಎನ್ನೆಸ್ಸೆಸ್ ನಿಂದ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಮಾಹಿತಿ ಕಾರ್ಯಾಗಾರ

25/09/2022, 19:39

ಪುತ್ತೂರು(reporterkarnataka.com): ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಐಕ್ಯೂಎಸ್‌ಸಿ ಸಹಭಾಗಿತ್ವದಲ್ಲಿ ಮಾಹಿತಿ ಕಾರ್ಯಾಗಾರ ಶುಕ್ರವಾರ ಜರುಗಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ಅರುಣ್ ಪ್ರಕಾಶ್ ಮಾತನಾಡಿ,  ರಾಷ್ಟ್ರೀಯ ಸೇವಾ ಯೋಜನೆಯನ್ನು ಅಂತರ್ಗತಗೊಳಿಸುವ ವಿದ್ಯಾರ್ಥಿಗಳಿಗೆ ಹೊಸ ಹೊಸ ಅನುಭವಗಳು ಲಭಿಸುತ್ತವೆ.  ಹಾಗೂ  ಉತ್ತಮ ಗೌರವ ದೊರಕುತ್ತದೆ. ಉಳಿದ ವಿದ್ಯಾರ್ಥಿಗಳಿಗಿಂತ ಹೆಚ್ಚಿನ ಜ್ಞಾನ ಮತ್ತು ಅನುಭವವನ್ನು ಗಳಿಸಲು ರಾಷ್ಟ್ರೀಯ ಸೇವಾ ಯೋಜನೆಯು ಸಹಕಾರಿಯಾಗುತ್ತದೆ. ಇಲ್ಲಿಂದ ಸಿಗುವಂತಹ ಜ್ಞಾನವನ್ನು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ಅಳವಡಿಸಿಕೊಳ್ಳುವುದು ಒಂದು ಕಲೆ. ಅಂತಹ ಕಲೆ ಒಲಿಯುವುದು ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳಿಗೆ ಮಾತ್ರ. ವಿದ್ಯಾರ್ಥಿಗಳು ಕಾಲೇಜಿನ ಪಾಠವು ಔದ್ಯೋಗಿಕ ಜೀವನಕ್ಕೆ ಪೂರಕವಾಗಿರುತ್ತದೆ. ಆದರೆ ನಮ್ಮ ಜೀವನಕ್ಕೆ ಪೂರಕವಾಗುವಂತಹ ಪಾಠಗಳು ದೊರಕುವುದು ಪುಸ್ತಕದಿಂದಲ್ಲ, ಜೀವನಕ್ಕೆ ಬೇಕಾದಂತಹ  ಮೌಲ್ಯಗಳನ್ನು ನಾವು ಗಳಿಸಿಕೊಳ್ಳಬೇಕಾದರೆ ನಾವು  ಉತ್ತಮ ಚಿಂತಕರಾಗಿ ,ಹಾಗೂ ಉತ್ತಮ ಪ್ರಜೆಯಾಗಿ ಬಾಳಬೇಕಾದರೆ ಅಲ್ಲೂ ಕೂಡ ಜ್ಞಾನ ಬೇಕಾಗುತ್ತದೆ .ಆ ಜ್ಞಾನವು ರಾಷ್ಟ್ರೀಯ ಸೇವಯೋಜನೆಯಿಂದ ದೊರಕುತ್ತದೆ ಎಂದು ಹೇಳಿದರು

ವಿದ್ಯಾರ್ಥಿಗಳ ಮನಸ್ಸಲ್ಲಿ ಸಮಾಜ ಸೇವೆಯ ಮನೋಭಾವವನ್ನು ಬೆಳೆಸುವಲ್ಲಿ ಇದು ಪ್ರಧಾನ ಪಾತ್ರ ವಹಿಸುವುದರೊಂದಿಗೆ ದೇಶಕ್ಕೆ ಬೇಕಾದಂತಹ ಸತ್ಪ್ರಜೆಗಳ ನಿರ್ಮಾಣದಲ್ಲಿ ಕೂಡ ಎನ್ ಎಸ್ ಎಸ್ ಪ್ರಧಾನ ಪಾತ್ರ ವಹಿಸುತ್ತದೆ. ದೇಶವನ್ನು, ಗುರುಗಳನ್ನು ಹೆತ್ತವರನ್ನು, ಹಿರಿಯರನ್ನು, ಗೌರವಿಸುವ ಮನಸ್ಥಿತಿ ಜೀವನಕ್ಕೆ ಮುಖ್ಯವಾಗಿದೆ. ಇದನ್ನು ರಾಷ್ಟ್ರೀಯ ಸೇವಾ ಯೋಜನೆಯಿಂದ ಪಡೆಯಲು ಸಾಧ್ಯ. ಎಂದು ನುಡಿದರು.

ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳಾದ, ಶ್ರೀನಾಥ್. ಬಿ,ವಿದ್ಯಾ ಕೆ. ಎನ್. ಉಪಸ್ಥಿತರಿದ್ದರು.

ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕಿಯರು ಎನ್ಎಸ್ಎಸ್ ಗೀತೆಯನ್ನು ಹಾಡಿದರು. ವಿನುಷಾ ಸ್ವಾಗತಿಸಿದರು. ಮಿಥುನ್ ವಂದಿಸಿದರು ಅನನ್ಯ ಕಮಿಲ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು