9:04 AM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ಮಂಗಳೂರು ವಿಶ್ವವಿದ್ಯಾನಿಲಯ ವಿಭಜನೆ: ಶೀಘ್ರದಲ್ಲೇ ಕೊಡಗು ವಿವಿ ಅಸ್ತಿತ್ವಕ್ಕೆ

26/09/2022, 23:18

ಮಂಗಳೂರು(reporterkarnataka.com):ಮಂಗಳೂರು ವಿಶ್ವವಿದ್ಯಾನಿಲಯ ಶೀಘ್ರದಲ್ಲೇ ವಿಭಜನೆಯಾಗಲಿದೆ. ಕೊಡಗು ಜಿಲ್ಲೆಯ ಮಂಗಳೂರು ವಿವಿ ವ್ಯಾಪ್ತಿಯಿಂದ ಹೊರಗುಳಿಯಲಿದೆ. ಕೊಡಗು ಜಿಲ್ಲೆಗೆ ಸಂಬಂಧಿಸಿದ 24 ಕಾಲೇಜುಗಳು ಹೊಸದಾಗಿ ನಿರ್ಮಾಣವಾಗಲಿರುವ ಕೊಡಗು ವಿವಿಗೆ ಸೇರ್ಪಡೆಯಾಗಲಿದೆ.

ಇದೀಗ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳನ್ನು ಒಳಗೊಂಡಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಅಸ್ತಿತ್ವದಲ್ಲಿದೆ.

ಇನ್ನು ಮುಂದೆ ಕೊಡಗು ಜಿಲ್ಲೆಯ ಶೈಕ್ಷಣಿಕ ಚಟುವಟಿಕೆಯ ಅಧಿಕಾರವನ್ನು ಕಳೆದುಕೊಳ್ಳಲಿದೆ. ಕೊಡಗು ಜಿಲ್ಲೆಗೆ ಸಂಬಂಧಿಸಿದ 24 ಕಾಲೇಜುಗಳು ಹೊಸದಾಗಿ ನಿರ್ಮಾಣವಾಗಲಿರುವ ಕೊಡಗು ವಿವಿಗೆ ಸೇರಲಿದೆ.

ಮಂಗಳೂರು ವಿವಿಯಲ್ಲಿ 215 ಕಾಲೇಜುಗಳು ಸಂಯೋಜಿತಗೊಂಡಿದೆ. ಅವುಗಳಲ್ಲಿ 24 ಕಾಲೇಜುಗಳು ಕೊಡಗು ವಿವಿಯ ಪಾಲಾಗಲಿವೆ. ಮಡಿಕೇರಿಯ ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ಕಾಲೇಜು, ಚಿಕ್ಕಳುವಾರದಲ್ಲಿರುವ ಮಂಗಳೂರು ವಿವಿ ಸ್ನಾತಕೊಕೋತ್ತರ ಹಾಗೂ ಸಂಶೋಧನ ಕೇಂದ್ರ ಸೇರಿದಂತೆ ಅಲ್ಲಿನ ಸರಕಾರಿ ಕಾಲೇಜು, ಸಂಯೋಜಿತ ಕಾಲೇಜು, ಸ್ನಾತಕೋತ್ತರ, ಸಂಶೋಧನ ಕೇಂದ್ರವು ಮಂಗಳೂರು ವಿವಿಯಿಂದ ಹೊರಗುಳಿಯಲಿವೆ.

ಕೊಡಗು ಜಿಲ್ಲೆಯಲ್ಲಿರುವ ಕಾಲೇಜುಗಳವರು ವಿಶ್ವವಿದ್ಯಾನಿಲಯಕ್ಕೆ ಹೋಗ ಬೇಕೆಂದರೆ 100 ಕಿ.ಮೀ.ಗೂ ಅಧಿಕ ದೂರದಲ್ಲಿರುವ ಮಂಗಳೂರಿಗೆ ಆಗಮಿಸಬೇಕು. ಪರೀಕ್ಷೆ-ಮೌಲ್ಯಮಾಪನಕ್ಕೂ ಉಪನ್ಯಾಸಕರು ಅತ್ತಿಂದಿತ್ತ ತೆರಳಬೇಕು. ಆ ಹಿನ್ನೆಲೆಯಲ್ಲಿ ಮಡಿಕೇರಿ ಭಾಗಕ್ಕೆ ಪ್ರತ್ಯೇಕವಿ.ವಿ. ಬೇಕೆಂದು ಶಾಸಕ ಅಪ್ಪಚ್ಚು ರಂಜನ್‌ ಆಗ್ರಹಿಸಿದ್ದರಿಂದ 2 ವರ್ಷದ ಹಿಂದೆ ಕೊಡಗು ವಿವಿ ಎಂಬ ಹೊಸ ವಿವಿ ಸ್ಥಾಪನೆಗೆ ಚಿಂತಿಸಲಾಗಿತ್ತು.

ವಿಶಾಲ ವ್ಯಾಪ್ತಿ ಹಾಗೂ ಯೋಗ್ಯ ನಿವೇಶನವಿರುವುದರಿಂದ ಚಿಕ್ಕಳುವಾರದ ಲ್ಲಿರುವ ಮಂಗಳೂರು ವಿವಿ ಸ್ನಾತಕೋತ್ತರ ಹಾಗೂ ಸಂಶೋಧನ ಕೇಂದ್ರವು ಇನ್ನು ಮುಂದೆ ಕೊಡಗು ವಿವಿ ಕ್ಯಾಂಪಸ್‌ ಆಗುವ ಎಲ್ಲ ಸಾಧ್ಯತೆಗಳಿವೆ. ವಿಧಾನಸಭಾ ಅಧಿವೇಶನ ಮುಗಿದ ಅನಂತರ ಉನ್ನತ ಶಿಕ್ಷಣ ಇಲಾಖೆಯು ವಿಶೇಷ ಅಧಿಕಾರಿಯನ್ನು ಇಲ್ಲಿಗೆ ನಿಯೋಜಿಸುವ ಮೂಲಕ ಹೊಸ ವಿವಿ ಸ್ಥಾಪನೆಗೆ ಎಲ್ಲ ಸಿದ್ಧತೆ ಆರಂಭಿಸುವ ಬಗ್ಗೆ ಮಾಹಿತಿ ಲಯಿದೆ. ಈ ಮಧ್ಯೆ ಮಂಗಳೂರು ವಿವಿ ಅಧೀನದಲ್ಲಿರುವ ವಿವಿಧ ಅಧ್ಯಯನ ಪೀಠ ಹಾಗೂ ಕೊಡಗಿನಲ್ಲಿ ಕರ್ತವ್ಯ ನಿರ್ವಹಿಸುವ ಸಿಬಂದಿಯ ಕಾರ್ಯನಿರ್ವಹಣೆ ಬಗ್ಗೆ ಇನ್ನಷ್ಟೇ ಪ್ರಕ್ರಿಯೆ ನಡೆಯಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು