5:09 PM Friday26 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’…

ಇತ್ತೀಚಿನ ಸುದ್ದಿ

19.85 ಕೋಟಿ ವೆಚ್ಚದಲ್ಲಿ ಕಾನಾ- ಬಾಳ ರಸ್ತೆ ಚತುಷ್ಪಥ ಕಾಮಗಾರಿ: ಶಾಸಕ ಡಾ.ಭರತ್ ಶೆಟ್ಟಿ ಗುದ್ದಲಿ ಪೂಜೆ

27/09/2022, 00:14

ಸುರತ್ಕಲ್(reporterkarnataka.com);
ಕಾಂಗ್ರೆಸ್ ಇದ್ದಾಗ ಚುನಾವಣಾ ರಣತಂತ್ರದ ಭಾಗವಾಗಿ ಮಾಡಿದ ಹಲವು ಕಾಮಗಾರಿಗಳಲ್ಲಿ ಎಡವಟ್ಟು ಅಗಿರುವುದರಿಂದ ಇದಕ್ಕೆಲ್ಲಾ ನಾನು ಇಂದು ಜನರಿಗೆ ಉತ್ತರ ಕೊಡುವ ಜವಾಬ್ದಾರಿ ಹೊಂದಿದ್ದೇನೆ ಎಂದು ಶಾಸಕರಾದ ಡಾ.ಭರತ್ ಶೆಟ್ಟಿ ವೈ. ಹೇಳಿದರು.

ಸುರತ್ಕಲ್ ನಲ್ಲಿ ಈ ಹಿಂದೆ ಕಾಂಗ್ರೆಸ್ ಅವಧಿಯಲ್ಲಿ ಆರಂಭ ಮಾಡಲಾದ ಹಲವು ಅಭಿವೃದ್ಧಿ ಕಾಮಗಾರಿಗಳು ಯಾಕಾಗಿ ವಿಳಂಬವಾದವು ಹಾಗೂ ಕೆಲವು ಬಹುಕೋಟಿಯ ಕಾಮಗಾರಿ ವಿಫಲವಾದ ಬಗ್ಗೆ ವಿವರವಾದ ಮಾಹಿತಿ ನೀಡಿದರು.

ಕಾನಾ ಬಾಳಾ ರಸ್ತೆ ನಿರ್ಮಾಣಕ್ಕೆ ಈ ಹಿಂದೆ ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರಕಾರವಿದ್ದಾಗ ಅಡ್ಡಿ ಪಡಿಸಿದ ಬಗ್ಗೆ ಮೊದಲ ಬಾರಿಗೆ ಬಹಿರಂಗ ಹೇಳಿಕೆ ನೀಡಿದ ಶಾಸಕರು ನನ್ನ ಅವಧಿಯಲ್ಲಿ ಈ ಕೆಲಸ ಆಗಬಾರದೆಂದು  ಸಮ್ಮಿಶ್ರ ಸರಕಾರದ ಪ್ರಭಾವಿಗಳು ಅಡ್ಡಿಪಡಿಸಿದ್ದರು.

ಬಳಿಕ ಕೊರೊನಾ ಹೊಡೆತದಿಂದ ಚೇತರಿಸಿಕೊಂಡ ಬಳಿಕ ಇದೀಗ  ಲೋಕೋಪಯೋಗಿ ಮತ್ತು ರಾಜ್ಯ ಹೆದ್ದಾರಿ  ಅಭಿವೃದ್ಧಿ ಅನುದಾನದ ಒಟ್ಟು 19.85 ಕೋಟಿ ವೆಚ್ಚದಲ್ಲಿ ಅಧಿಕೃತವಾಗಿ ಕಾನಾ ಬಾಳ ರಸ್ತೆ ಚತುಷ್ಪಥವಾಗಲಿದ್ದು ,ಗುದ್ದಲಿ ಪೂಜೆ ನೆರವೇರಿಲಾಗಿದೆ. ಶೀಘ್ರ ಬಹು ನಿರೀಕ್ಷೆಯ ರಸ್ತೆ ಜನರ ಬಳಕೆಗೆ ಸಿಗಲಿದೆ ಎಂದರು.

ಮಾರುಕಟ್ಟೆ ನಿರ್ಮಾಣ ಕಾಮಗಾರಿಯೂ ಯಾಕಾಗಿ ವಿಳಂಬವಾಯಿತು ಎನ್ನುವುದು ಸರಕಾರವೇ ಅಧಿಕೃತ ಮಾಹಿತಿ ನೀಡಿದೆ.

ಸರಿಯಾಗಿ ಭೂಮಿ ಬಿಟ್ಟು ಕೊಡದೆ ಹಾಗೂ ಒಳಚರಂಡಿ ಸ್ಥಳಾಂತರ ಸಹಿತ ವಿವಿಧ ಕಾರಣಗಳಿಂದ ನಷ್ಟವಾಗಿ ಕಾಮಗಾರಿ ಮಾಡಲು ಹಿಂದೇಟು ಈ ಎಲ್ಲಾ ಕಾರಣದಿಂದ ವಿಳಂಬವಾಗಿದ್ದು ಇದೀಗ ಅಂತಿಮ  ಗ್ಲೋಬಲ್ ಟೆಂಡರ್ ಕರೆಯಲಾಗಿದೆ ಎಂದರು.

ಈ ಹಿಂದೆ ಮಾಡಲಾದ ಒಳಚರಂಡಿ ವ್ಯವಸ್ಥೆ ಚುನಾವಣೆಯ ನಿದರ್ಶನವಾಗಿದೆ. ಕಳಪೆ ಕಾಮಗಾರಿಯನ್ನು ಪಾಲಿಕೆಯಿಂದ ಪರೀಕ್ಷೆಗೆ ಒಳಪಡಿಸದೆ ಸ್ವಾಧೀನಕ್ಕೆ ತೆಗೆದುಕೊಳ್ಳಲು ಅಂದಿನ ಆಯುಕ್ತರಿಗೆ ಒತ್ತಡ ಹೇರಲಾಯಿತು. ಇದರ ಪರಿಣಾಮವೇ ಸೋರಿಕೆ, ಅಂತರ್ಜಲ ಮಲೀನಕ್ಕೆ ಕಾರಣವಾಯಿತು ಎಂದು ಬಹಿರಂಗ ಪಡಿಸಿದರು.

ನನ್ನ ಅಧಿಕಾರದ ಅವಧಿ ಚುನಾವಣೆಯನ್ನು ಮುಂದಿಟ್ಟುಕೊಂಡು ಅರೆಬರೆ ಕಾಮಗಾರಿ ನಡೆಸುವುದಿಲ್ಲ. ಜನರಿಗೆ ಅಗತ್ಯವಾದ ಕೆಲಸಗಳನ್ನು ದೀರ್ಘಾವಧಿ ಮುಂದಾಲೋಚನೆಯಿಂದ ಮಾಡಲಾಗುವುದು. ಒಂದೆರಡು ತಿಂಗಳು ವಿಳಂಬವಾದರೂ ಸಮರ್ಪಕವಾಗಿ ಮಾಡಿ, ಜನರ ತೆರಿಗೆ ಹಣ ಪೋಲಾಗದಂತೆ ಮಾಡಿ  ಎಂದು ಅಧಿಕಾರಿಗಳಿಗೆ  ಸೂಚಿಸಲಾಗಿದೆ ಎಂದರು.

ಇದೇ ವೇಳೆ ಸುರತ್ಕಲ್ ನ ಬಹು ಉಪಯೋಗಿ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ, ಸುರತ್ಕಲ್ ಜಂಕ್ಷನ್ ಅಭಿವೃದ್ಧಿ, ಸರ್ವಿಸ್ ರಸ್ತೆ ಕಾಂಕ್ರೀಟಿ ಕರಣ, ಸುರತ್ಕಲ್ , ಕೂಳೂರು, ಕೊಟ್ಟಾರಚೌಕಿ ಮೇಲ್ಸೇತುವೆ ಚತುಷ್ಪಥ, ಮತ್ತಿತರ  ನಡೆಯಲಿರುವ ಅಭಿವೃದ್ಧಿ ಕಾಮಗಾರಿಗಳ ಮಾಹಿತಿ ನೀಡಿದರು.

ಬಿಜೆಪಿ ಉತ್ತರ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ, ಹಿರಿಯರಾದ ಮಹಾಬಲ ಪೂಜಾರಿ ಕಡಂಬೋಡಿ, ಪಾಲಿಕೆ ಸದಸ್ಯರಾದ ಸರಿತ ಶಶಿಧರ್, ವರುಣ್ ಚೌಟ, ವೇದಾವತಿ, ಲೋಕೇಶ್ ಬೊಳ್ಳಾಜೆ, ಶ್ವೇತ ಎ,ಶೋಭಾ ರಾಜೇಶ್,ನಯನ ಕೋಟ್ಯಾನ್, ಲಕ್ಷ್ಮೀಶೇಖರ್ ದೇವಾಡಿಗ, ಪ್ರಶಾಂತ್ ಮೂಡಾಯಿ ಕೋಡಿ,ಪ್ರಮುಖರಾದ ಗಣೇಶ್ ಹೊಸಬೆಟ್ಟು,ವಿಠಲ ಸಾಲ್ಯಾನ್, ಯುವ ಮೋರ್ಚಾದ ಭರತ್ ರಾಜ್ ಕೃಷ್ಣಾಪುರ, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು