9:33 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ರಾಜ್ಯದ ಹಲವೆಡೆ ಆರ್ ಟಿಒ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ: ಹಲವು ಅಧಿಕಾರಿಗಳು  ಬಲೆಗೆ?

30/09/2022, 12:27

ಬೆಂಗಳೂರು(reporterkarnataka.com): ಲೋಕಾಯುಕ್ತ ಅಧಿಕಾರಿಗಳ ತಂಡ ರಾಜ್ಯದ ಹಲವೆಡೆ ಚೆಕ್ ಪೋಸ್ಟ್ ಗಳ ಮೇಲೆ ಏಕಕಾಲದಲ್ಲಿ ಇಂದು ಧಿಡೀರ್ ದಾಳಿ ನಡೆಸಿದ್ದು, ಬೆಳ್ಳಂಬೆಳಗ್ಗೆ ಸಾರಿಗೆ ಇಲಾಖಾಧಿಕಾರಿಗಳಿಗೆ ಶಾಕ್ ನೀಡಿದೆ.

ಬೀದರ್ ನ ಹುಮ್ನಾಬಾದ್, ಚೆಕ್ ಪೋಸ್ಟ್, ಬಳ್ಳಾರಿಯ ಹಗರಿ ಚೆಕ್ ಪೋಸ್ಟ್, ಅತ್ತಿಬೆಲೆಯ ಆರ್.ಟಿ.ಒ. ಚೆಕ್ ಪೋಸ್ಟ್ ಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಬೀದರ್ -ಕಲಬುರ್ಗಿ ಲೋಕಾಯುಕ್ತ ಎಸ್.ಪಿ. ನೇತೃತ್ವದ ತಂಡ ಬೆಳಗಿನ ಜಾವ ನಾಲ್ಕು ಗಂಟೆಗೆ ದಾಳಿ ನಡೆಸಿದ್ದು, ಚೆಕ್ ಪೋಸ್ಟ್ ನಲ್ಲಿ ಒಂದೂವರೆ ಲಕ್ಷ ರೂಪಾಯಿ ಪತ್ತೆಯಾಗಿದೆ. ಇದು ದಂಡದ ಹಣವೇ ಅಥವಾ ಲಂಚದ ಹಣವೇ ಎಂಬುದರ ಪರಿಶೀಲನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿಯಲ್ಲಿ ಬೆಂಗಳೂರು -ಮುಂಬೈ ರಾಷ್ಟ್ರೀಯ ಹೆದ್ದಾರಿ 4 ರಲ್ಲಿರುವ ಚೆಕ್ಪೋಸ್ಟ್ ಮೇಲೆ ದಾಳಿ ನಡೆಸಲಾಗಿದೆ. ವಿಜಯಪುರ ಹೊರವಲಯದ ಚೆಕ್ಪೋಸ್ಟ್ ಮೇಲೆಯೂ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು