2:30 AM Friday26 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ಭಾರತ್ ಜೋಡೋ ಯಾತ್ರೆ ಕರ್ನಾಟಕಕ್ಕೆ ಪ್ರವೇಶ:  ಗುಂಡ್ಲುಪೇಟೆಯಲ್ಲಿ ರಾಹುಲ್ ಗಾಂಧಿಗೆ ಭಾರಿ ಸ್ವಾಗತ

01/10/2022, 01:01

ಚಾಮರಾಜನಗರ(reporterkarnataka.com): ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು ದೇಶವ್ಯಾಪಿ ನಡೆಸಲು ಉದ್ದೇಶಿಸಿರುವ ಭಾರತ್ ಜೋಡೋ ಯಾತ್ರೆ ಶುಕ್ರವಾರ ಮುಂಜಾನೆ ಕರ್ನಾಟಕವನ್ನು ಪ್ರವೇಶಿಸಿತು. ಹುಲಿ ಸಂರಕ್ಷಿತ ಅರಣ್ಯದಲ್ಲಿ ಪಾದಯಾತ್ರೆಗೆ ಅರಣ್ಯ ಇಲಾಖೆ ಅನುಮತಿ ನಿರಾಕರಿಸಿದ್ದ ಹಿನ್ನೆಲೆಯಲ್ಲಿ ತಮಿಳುನಾಡಿನ ಗುಡಲೂರಿನಿಂದ ಕರ್ನಾಟಕದ ಗುಂಡ್ಲುಪೇಟೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಹನದಲ್ಲಿ ಬಂದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಹುಲ್​ ಗಾಂಧಿ ಅವರಿಗೆ ಸ್ವಾಗತಿಸಲಾಯಿತು.

ಕಾಂಗ್ರೆಸ್ ನಾಯಕರಿಗೆ ಅರಣ್ಯ ಇಲಾಖೆಯು ಕಾರಿನಲ್ಲಿ ತೆರಳಲು ಅವಕಾಶ ನೀಡಿತ್ತು. ರಾಹುಲ್​ ಗಾಂಧಿ ಮತ್ತು ಸಿದ್ದರಾಮಯ್ಯ ಒಂದೇ ಕಾರಿನಲ್ಲಿ ಗುಂಡ್ಲುಪೇಟೆಗೆ ಬಂದರು.

ರಾಹುಲ್ ಗಾಂಧಿ ಅವರನ್ನು ಕೆಕ್ಕೆನಹಳ್ಳಿಯ ಕರ್ನಾಟಕ ಗಡಿಯಲ್ಲೇ ಸಿದ್ದರಾಮಯ್ಯ ತಮ್ಮ ಬೆಂಬಲಿಗರೊಂದಿಗೆ ಸ್ವಾಗತಿಸಿದರು. ಈ ವೇಳೆ ಮಹದೇವಪ್ಪ, ಜಾರ್ಜ್, ಪ್ರಕಾಶ್ ರಾಥೋಡ್ ಉಪಸ್ಥಿತರಿದ್ದರು. ಮತ್ತೊಂದೆಡೆ ರಾಹುಲ್ ಗಾಂಧಿ ಸ್ವಾಗತಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವೇದಿಕೆಯ ಬಳಿಯೇ ಕಾಯುತ್ತಿದ್ದರು. ಗುಂಡ್ಲುಪೇಟೆಯಿಂದ ಕೆಕ್ಕೇನಹಳ್ಳಿ ಸುಮಾರು 25 ಕಿಮೀ ದೂರವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು