10:38 AM Tuesday3 - October 2023
ಬ್ರೇಕಿಂಗ್ ನ್ಯೂಸ್
ಅನಧಿಕೃತ ಕೃಷಿ ಕೀಟ ನಾಶಕ ಮಾರಾಟ: ಕೆಮಿಕಲ್ ಮಳಿಗೆಗೆ ಕೃಷಿ ಅಧಿಕಾರಿಗಳ ದಿಢೀರ್… ಹೈಕೋರ್ಟ್ ಆದೇಶ ಉಲ್ಲಂಘಿಸಿ ವಿದ್ಯಾರ್ಥಿಗಳ ಮರುಹಂಚಿಕೆಗೆ ಕ್ರಮ? ವೈದ್ಯಕೀಯ ಶಿಕ್ಷಣ ಸಚಿವ ಶರಣ್… ಕೆಜೆ ಹಳ್ಳಿ-ಡಿಜೆಹಳ್ಳಿ-ಹುಬ್ಬಳ್ಳಿ ಕೇಸ್ ಸಂದರ್ಭದಲ್ಲಿ ಕಾಂಗ್ರೆಸ್ ದೇಶದ್ರೋಹಿಗಳ ಪರ ನಿಂತಿತ್ತು: ಕೇಂದ್ರ ಸಚಿವೆ… ಜೆಡಿಎಸ್- ಬಿಜೆಪಿ ಸಖ್ಯ: ಕೇಸರಿ ಪಾಳಯ ತೊರೆದು ದಳ ಸೇರಿದ್ದ ಮೂಡಿಗೆರೆ ಮಾಜಿ… ಕೊಟ್ಟಿಗೆಹಾರ ಸುತ್ತಮುತ್ತ 3 ದಿನಗಳಿಂದ ನಿರಂತರ ಧಾರಾಕಾರ ಮಳೆ: ಆತಂಕಕ್ಕೀಡಾದ ಕಾಫಿ ಬೆಳೆಗಾರರು ಮೆಸ್ಕಾಂ ನಿರ್ಲಕ್ಷ್ಯ: ಹೆಮ್ಮಾಡಿ ಕಾಲು ದಾರಿಯಲ್ಲಿ ವಿದ್ಯುತ್ ಶಾಕ್ ತಗುಲಿ ದಂಪತಿ ದಾರುಣ… ಬೆಳಗಾವಿಯಲ್ಲಿ 2 ದಿನಗಳ ಮೋಡ ಬಿತ್ತನೆಗೆ ಚಾಲನೆ: 20 ಸಾವಿರ ಅಡಿ ಎತ್ತದರದಲ್ಲಿರುವ… ಶೃಂಗೇರಿ: ತುಂಗಾ ನದಿಯ ನಡುಗಡ್ಡೆಯಲ್ಲಿ ಪ್ರವಾಹಕ್ಕೆ ಸಿಲುಕಿದ ಇಬ್ಬರ ರಕ್ಷಣೆ; ಅಗ್ನಿ ಶಾಮಕ… ಕಾವೇರಿ ನದಿ ನೀರು ಹಂಚಿಕೆ ವಿವಾದ: ಅಥಣಿಯಲ್ಲಿ ಪ್ರತಿಭಟನೆ; ಮಾನವ ಸರಪಳಿ ಮಂಗಳೂರಿನಲ್ಲಿ 50ಕ್ಕೂ ಹೆಚ್ಚು ಸ್ಥಳಗಳಲ್ಲಿ ಬಸ್ ಶೆಲ್ಟರ್ ಇಲ್ಲ!: ಆದ್ಯತೆ ಮೇರೆಗೆ ನಿರ್ಮಾಣ…

ಇತ್ತೀಚಿನ ಸುದ್ದಿ

ಭಾರತ್ ಜೋಡೋ ಯಾತ್ರೆ ಕರ್ನಾಟಕಕ್ಕೆ ಪ್ರವೇಶ:  ಗುಂಡ್ಲುಪೇಟೆಯಲ್ಲಿ ರಾಹುಲ್ ಗಾಂಧಿಗೆ ಭಾರಿ ಸ್ವಾಗತ

01/10/2022, 01:01

ಚಾಮರಾಜನಗರ(reporterkarnataka.com): ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು ದೇಶವ್ಯಾಪಿ ನಡೆಸಲು ಉದ್ದೇಶಿಸಿರುವ ಭಾರತ್ ಜೋಡೋ ಯಾತ್ರೆ ಶುಕ್ರವಾರ ಮುಂಜಾನೆ ಕರ್ನಾಟಕವನ್ನು ಪ್ರವೇಶಿಸಿತು. ಹುಲಿ ಸಂರಕ್ಷಿತ ಅರಣ್ಯದಲ್ಲಿ ಪಾದಯಾತ್ರೆಗೆ ಅರಣ್ಯ ಇಲಾಖೆ ಅನುಮತಿ ನಿರಾಕರಿಸಿದ್ದ ಹಿನ್ನೆಲೆಯಲ್ಲಿ ತಮಿಳುನಾಡಿನ ಗುಡಲೂರಿನಿಂದ ಕರ್ನಾಟಕದ ಗುಂಡ್ಲುಪೇಟೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಹನದಲ್ಲಿ ಬಂದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಹುಲ್​ ಗಾಂಧಿ ಅವರಿಗೆ ಸ್ವಾಗತಿಸಲಾಯಿತು.

ಕಾಂಗ್ರೆಸ್ ನಾಯಕರಿಗೆ ಅರಣ್ಯ ಇಲಾಖೆಯು ಕಾರಿನಲ್ಲಿ ತೆರಳಲು ಅವಕಾಶ ನೀಡಿತ್ತು. ರಾಹುಲ್​ ಗಾಂಧಿ ಮತ್ತು ಸಿದ್ದರಾಮಯ್ಯ ಒಂದೇ ಕಾರಿನಲ್ಲಿ ಗುಂಡ್ಲುಪೇಟೆಗೆ ಬಂದರು.

ರಾಹುಲ್ ಗಾಂಧಿ ಅವರನ್ನು ಕೆಕ್ಕೆನಹಳ್ಳಿಯ ಕರ್ನಾಟಕ ಗಡಿಯಲ್ಲೇ ಸಿದ್ದರಾಮಯ್ಯ ತಮ್ಮ ಬೆಂಬಲಿಗರೊಂದಿಗೆ ಸ್ವಾಗತಿಸಿದರು. ಈ ವೇಳೆ ಮಹದೇವಪ್ಪ, ಜಾರ್ಜ್, ಪ್ರಕಾಶ್ ರಾಥೋಡ್ ಉಪಸ್ಥಿತರಿದ್ದರು. ಮತ್ತೊಂದೆಡೆ ರಾಹುಲ್ ಗಾಂಧಿ ಸ್ವಾಗತಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವೇದಿಕೆಯ ಬಳಿಯೇ ಕಾಯುತ್ತಿದ್ದರು. ಗುಂಡ್ಲುಪೇಟೆಯಿಂದ ಕೆಕ್ಕೇನಹಳ್ಳಿ ಸುಮಾರು 25 ಕಿಮೀ ದೂರವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು