ಇತ್ತೀಚಿನ ಸುದ್ದಿ
ಕೆಪಿಸಿಸಿ ಅಧ್ಯಕ್ಷ ಡಿಕೆಶಿ ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯುತ್ತಿದ್ದರು: ಸಿ.ಟಿ. ರವಿ ವ್ಯಂಗ್ಯ
02/10/2022, 15:13
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತುಂಬಾ ಚೆನ್ನಾಗಿ ನಟನೆ ಮಾಡ್ತಾರೆ. ಬಣ್ಣ ಹಾಕದೇ, ಗ್ಲಿಸರಿನ್ ಹಾಕದೇ ಕಣ್ಣೀರು ಹಾಕುವ ನಟನೆ ಅವರಿಗೆ ಒಲಿದು ಬಂದಿದೆ. ಈ ನಟನೆ ಅವರಿಗೆ ಬೈ ಬರ್ತ್ ಬಂದಿದೆ. ಡಿಕೆಶಿ ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದಾಗಿತ್ತು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವ್ಯಂಗ್ಯವಾಡಿದರು.
ಭಾರತ್ ಜೋಡೋ ಯಾತ್ರೆಯಲ್ಲಿ ಡಿಕೆಶಿ ಕಣ್ಣೀರಿಗೆ ಹಾಕಿದ ಬಗ್ಗೆ ಮಾಧ್ಯಮ ಜತೆ ಪ್ರಸ್ತಾಪಿಸಿದ ಸಿ.ಟಿ.ರವಿ, ಡಿಕೆಶಿ ಒಳಗಡೆ ಇಂತಹ ಕಲಾವಿದ ಇದ್ದನೆಂದು ನಾನು ಅಂದುಕೊಂಡಿರಲಿಲ್ಲ ಎಂದು ಲೇವಡಿ ಮಾಡಿದರು.
ಬೈ ಮಿಸ್ಟೇಕ್ ಅವರು ರಾಜಕೀಯಕ್ಕೆ ಬಂದು ಬಿಟ್ಟಿದ್ದಾರೆ.ಶಿವಕುಮಾರ್ ಅವರಿಗೆ ಹೀರೋ ಆಗುವ ವಯಸ್ಸು ಮುಗಿದು ಹೋಗಿದೆ. ವಿಲನ್ ಆಗೋಕೂ ತಾಕತ್ತು ಇಲ್ಲದಂತಾಗಿದೆ. ಆದರೆ, ಪ್ರಯತ್ನಪಟ್ಟರೆ ನಟನಾಗೋಕೆ ಪೋಷಕ ಪಾತ್ರಗಳು ಸಿಗುತ್ತದೆ ಎಂದು ಅವರು ನುಡಿದರು.
ಕಾಂತಾರ ಸಿನಿಮಾದಲ್ಲಿ ರಿಷಬ್ ಶೆಟ್ಟಿಗೆ ಕಾಂಪಿಟೇಟರ್ ಹುಟ್ಕೊಂಡಿದ್ದಾರೆ. ರಿಷಬ್ ಶೆಟ್ಟಿಗೂ ಅವಕಾಶ ಸಿಗದಂತೆ ಡಿಕೆಶಿ ಮಾಡಿದ್ದಾರೆ. ಇನ್ನು ಮುಂದೆ ಪ್ರಶಸ್ತಿ ಏನಿದ್ರೂ ಡಿಕೆಶಿ ಪಾಲಿಗೆ. ಸಿನಿಮಾದಲ್ಲಿ ನಟಿಸಲು ಡಿ.ಕೆ. ಶಿವಕುಮಾರ್ ಟ್ರೈ ಮಾಡೋದು ಒಳ್ಳೆಯದು ಎಂದರು.