8:31 PM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಮೈಸೂರು ದಸರಾ ಪ್ರಧಾನ ಕವಿಗೋಷ್ಠಿ: ಮಂಗಳೂರಿನ ಮಹೇಶ್ ಆರ್. ನಾಯಕ್ ಆಯ್ಕೆ

02/10/2022, 13:07

ಮೈಸೂರು(reporterkarnataka.com): ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಧಾನ ಕವಿಗೋಷ್ಠಿಗೆ ಮಂಗಳೂರಿನ ಕವಿ, ಸಾಹಿತಿ ಮಹೇಶ ಆರ್. ನಾಯಕ್ ಆಯ್ಕೆಯಾಗಿದ್ದಾರೆ.

ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಉದ್ಘಾಟಿಸಲಿರುವ ಈ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಸುಪ್ರಸಿದ್ಧ ಹಿರಿಯ ಕವಿ ಡಾ. ಎಚ್. ಎಸ್. ಶಿವಪ್ರಕಾಶರವರು ವಹಿಸಲಿದ್ದಾರೆ. ಕಳೆದ ಮೂರು ದಶಕಗಳಿಂದ ಕನ್ನಡ ಮತ್ತು ಕೊಂಕಣಿ ಭಾಷೆಯ ಸಾಹಿತ್ಯ ರಚನೆಯಲ್ಲಿ ಸಕ್ರಿಯವಾಗಿರುವ ಮಹೇಶ ಆರ್. ನಾಯಕ್ ಅವರು ‘ಕಲ್ಲಚ್ಚು ಪ್ರಕಾಶನದ’ ಮುಖ್ಯಸ್ಥರಾಗಿದ್ದು, ಈವರೆಗೆ 80ಕ್ಕೂ ಅಧಿಕ ಸಾಹಿತ್ಯ ಕೃತಿಗಳನ್ನು ಪ್ರಕಟಿಸಿದ್ದಾರೆ ಮತ್ತು ಅಮೆರಿಕದ ‘ಅಕ್ಕ’  ವಿಶ್ವ ಕನ್ನಡ ಸಮ್ಮೇಳನ, ಸಿಂಗಾಪುರ ಬರಹಗಾರರ ಹಬ್ಬ, ಕೆನಡಾದ ಟೊರೆಂಟೂ ಅಂತರರಾಷ್ಟ್ರೀಯ ಸಿನಿಮಾ ಹಬ್ಬ, ಹಾಂಕ್ ಕಾಂಗ್ ಸಾಹಿತ್ಯ ಹಬ್ಬ, ದಕ್ಷಿಣ ಆಫ್ರಿಕಾ ಮತ್ತು ಮಾರಿಷಸ್ ನಲ್ಲಿ ಜರುಗಿದ ವಿಶ್ವ ಹಿಂದಿ ಸಮ್ಮೇಳನ, ಜರ್ಮನಿಯ ಫ್ರಾಂಕ್ ಫಾರ್ಟ್ ಪುಸ್ತಕ ಹಬ್ಬ, ಭೂತಾನ್ ಲಿಟರೇಚರ್ ಫೆಸ್ಟಿವಲ್,  ದುಬೈ ಲಿಟ್ ಫೆಸ್ಟ್, ಶ್ರೀಲಂಕಾ ಲಿಟ್ ಫೆಸ್ಟ್, ಜೈಪುರ ಲಿಟ್ ಫೆಸ್ಟ್, ವಿಶ್ವ ಕೊಂಕಣಿ ಅಧಿವೇಶನ ಸೇರಿದಂತೆ ರಾಷ್ಟ್ರೀಯ ಅಂತರರಾಷ್ಟ್ರೀಯವಾಗಿ ನೂರಾರು ಸಾಹಿತ್ಯಪರ ಕಾರ್ಯಕ್ರಮಗಳಲ್ಲಿ ವಿವಿಧ ನೆಲೆಗಳಲ್ಲಿ ಭಾಗಿಯಾಗಿದ್ದು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯರಾಗಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು