7:53 AM Tuesday28 - May 2024
ಬ್ರೇಕಿಂಗ್ ನ್ಯೂಸ್
ಮತದಾನ ಕುರಿತು ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ: ಪ್ರಜಾವಾಣಿ ಪತ್ರಿಕೆಯ ಮಂಗಳೂರು ಛಾಯಾಗ್ರಾಹಕ ಎಚ್.… ಅಜ್ಞಾತ ಸ್ಥಳದಿಂದ ಸಂಸದ ಪ್ರಜ್ವಲ್ ರೇವಣ್ಣ ವೀಡಿಯೊ: ಅಶ್ಲೀಲ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ… ಭಾರತದೊಂದಿಗೆ ಬಾಹ್ಯಾಕಾಶ ಸಹಯೋಗ ನಕ್ಷತ್ರದಾಚೆಗೂ ಮುಂದುವರಿಯುವುದು: ಅಮೆರಿಕ ರಾಯಭಾರಿ ಗಾರ್ಸೆಟ್ಟಿ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಸಹೋದರ ಪುತ್ರಿಯ ವಿವಾಹ: ರಾಜ್ಯಪಾಲ, ಸಿಎಂ, ಡಿಸಿಎಂ,… ಕಾನೂನು ಎಲ್ಲರಿಗೂ ಒಂದೇ ಅಲ್ವೇನ್ರೀ? ಎಂಎಲ್ ಎ ಅಂತ ಬಿಟ್ಟು ಬಿಡೋಕೆ ಆಗುತ್ತಾ?:… ಉಡುಪಿ: ನಡು ರಸ್ತೆಯಲ್ಲೇ ಗ್ಯಾಂಗ್ ವಾರ್ ವೀಡಿಯೊ ವೈರಲ್; ಕೊನೆಗೂ ಎಚ್ಚೆತ್ತ ಪೊಲೀಸರಿಂದ… ವರುಣ ಕ್ಷೇತ್ರದಲ್ಲಿ ವರುಣನ ಅಬ್ಬರಕ್ಕೆ ತುಂಬಿದ ಕೆರೆ-ಕಟ್ಟೆಗಳು; ಬಾಗಿನ ಅರ್ಪಿಸಿದ ಗ್ರಾಮಸ್ಥರು ಬುದ್ಧ ಪೂರ್ಣಿಮೆ: ದಕ್ಷಿಣ ಕಾಶಿ ನಂಜನಗೂಡು ದೇಗುಲಕ್ಕೆ ಹರಿದು ಬಂದ ಭಕ್ತ ಸಾಗರ;… ಕುಡುಕ ಪತಿಯಿಂದ ಪತ್ನಿಯ ಬರ್ಬರ ಹತ್ಯೆ: ಮಕ್ಕಳ ಕಣ್ಣೆದುರೇ ಸಲಾಕೆಯಿಂದ ಹೊಡೆದು ಕೊಲೆ… ಪೂರ್ವ ಮುಂಗಾರು: ದ.ಕ., ಉಡುಪಿ ಸಹಿತ ರಾಜ್ಯದ 7 ಜಿಲ್ಲೆಗಳಲ್ಲಿ ಭಾರೀ ಮಳೆ…

ಇತ್ತೀಚಿನ ಸುದ್ದಿ

ಮಂಡ್ಯ: ಕೆ.ಆರ್.ಪೇಟೆಯಲ್ಲಿ ರಾಷ್ಟ್ರಪಿತ ಗಾಂಧೀಜಿ, ಶಾಸ್ತ್ರೀಜಿ ಜಯಂತಿ ಮಹೋತ್ಸವ

03/10/2022, 00:05

ಸೈಯ್ಯದ್ ಖಲೀಲ್ ಕೃಷ್ಣರಾಜಪೇಟೆ ಮಂಡ್ಯ

info.reporterkarnataka@gmail.com

ಕೆ.ಆರ್.ಪೇಟೆ ಪಟ್ಟಣದ ಮಿನಿ ವಿಧಾನಸೌಧ

ಸಭಾಂಗಣದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಜಯಂತಿ ಮಹೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು .

ತಹಶೀಲ್ದಾರ್ ಎಂ.ವಿ.ರೂಪ ಇಬ್ಬರೂ ಮಹನೀಯರ ಭಾವಚಿತ್ರಗಳಿಗೆ ವಿಶೇಷ ಪೂಜೆ ಮಾಡಿ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಅಹಿಂಸಾ ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧಿಯವರು ವಿಶ್ವಮಾನ್ಯ ನಾಯಕರಾಗಿದ್ದಾರೆ. ಜಾತಿ, ಮತ ಹಾಗೂ ಪಂಥಗಳಿಂದ ಮುಕ್ತವಾದ ಸಮಾನತೆಯಿಂದ ಕೂಡಿರುವ ಸಮ ಸಮಾಜವನ್ನು ನಿರ್ಮಾಣ ಮಾಡಲು ಪಣ ತೊಡಬೇಕು. ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಒಂದಾಗಿ ದುಡಿಯಬೇಕು. ಗುಡಿ ಕೈಗಾರಿಕೆಗಳು ಹಾಗೂ ಸ್ವದೇಶಿ ಉತ್ಪನ್ನಗಳ ತಯಾರಿಕೆ ಹಾಗೂ ಮಾರಾಟಕ್ಕೆ ಒತ್ತು ನೀಡಬೇಕು ಎಂದು ಸಂದೇಶ ನೀಡಿ ನುಡಿದಂತೆ ನಡೆದು ಖಾದಿ ಉತ್ಪನ್ನಗಳನ್ನು ಬಳಸಿ ಮಾದರಿಯಾಗಿ ಜೀವನ ನಡೆಸಿದ ರಾಷ್ಟ್ರಪಿತನ ಜೀವನದ ಆದರ್ಶಗಳನ್ನು ಯುವಜನರು ಕಡ್ಡಾಯವಾಗಿ ಪಾಲಿಸಬೇಕು ಎಂದು ಮನವಿ ಮಾಡಿದರು. 

ದೇಶದ ಪ್ರಧಾನಮಂತ್ರಿಗಳಾಗಿ ರಾಷ್ಟ್ರವನ್ನು ಸಮರ್ಥವಾಗಿ ಮುನ್ನಡೆಸಿದ ಶಾಸ್ತ್ರೀಜಿ ಅವರು ಭ್ರಷ್ಟಾಚಾರ ಮುಕ್ತವಾದ ದಕ್ಷ ಆಡಳಿತ ನೀಡಿ ಇತಿಹಾಸದ ಪುಟಗಳಲ್ಲಿ ದಾಖಲಾಗಿದ್ದಾರೆ. ಶಾಸ್ತ್ರೀಜಿ ಅವರ ಪ್ರಾಮಾಣಿಕತೆ ಹಾಗೂ ಕಾರ್ಯದಕ್ಷತೆಯನ್ನು ಯುವಜನರು ಮೈಗೂಡಿಸಿಕೊಂಡು ಮುನ್ನಡೆಯಬೇಕು ಎಂದು ತಹಶೀಲ್ದಾರ್ ರೂಪ ಕರೆ ನೀಡಿದರು.

ಕೆ.ಆರ್.ಪೇಟೆ ತಾಲ್ಲೂಕು ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕ ಡಾ.ನರಸಿಂಹರಾಜು ಮಹಾತ್ಮಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಜೀವನ ಸಾಧನೆಯನ್ನು ಕುರಿತು ಮಾತನಾಡಿದರು. 

ಪುರಸಭೆ ಮುಖ್ಯಾಧಿಕಾರಿ ಕುಮಾರ್, ಅಗ್ನಿಶಾಮಕ ಠಾಣಾಧಿಕಾರಿ ಶಿವಣ್ಣ, ಶಿಕ್ಷಣ ಸಂಯೋಜಕಿ ನೀಲಾಮಣಿ, ಪುರಸಭೆ ಸದಸ್ಯ ಕೆ.ಆರ್.ನೀಲಕಂಠ, ತಾಲ್ಲೂಕು ಕಂದಾಯ ಇಲಾಖಾ ನೌಕರರ ಸಂಘದ ಅಧ್ಯಕ್ಷೆ ಚಂದ್ರಕಲಾ, ಮಂಡ್ಯ ಜಿಲ್ಲಾ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಹರೀಶ್, ಆರೋಗ್ಯ ಇಲಾಖೆಯ ರತ್ನ, ಉಪತಹಶೀಲ್ದಾರ್ ಲಕ್ಷ್ಮೀಕಾಂತ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು