2:30 PM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಮಂಗಳೂರು: ಓವರ್ ಟೇಕ್ ಭರಾಟೆ; ನಿಂತಿದ್ದ ಮೊಟ್ಟೆ ಸಾಗಾಟದ ವಾಹನಕ್ಕೆ ಬಸ್ ಡಿಕ್ಕಿ, ರಸ್ತೆಯಲ್ಲೇ ಆಮ್ಲೇಟ್ !

28/10/2022, 18:11

ಮಂಗಳೂರು(reporterkarnataka.com): ನಗರದ ವೆಲೆನ್ಸಿಯಾದಲ್ಲಿ ಖಾಸಗಿ ಬಸ್ಸೊಂದರ ಚಾಲಕ ಓವರ್ ಟೇಕ್ ಮಾಡುವ ಭರದಲ್ಲಿ ನಿಲ್ಲಿಸಿದ್ದ ಮೊಟ್ಟೆ ಸಾಗಾಟದ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲಿ ಸಾವಿರಾರು ಮೊಟ್ಟೆಗಳು ಚಲ್ಲಾಪಿಲ್ಲಿಯಾದ ಘಟನೆ ಶುಕ್ರವಾರ ನಡೆದಿದೆ.

ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೊಟ್ಟೆ ಸಾಗಾಟದ ವಾಹನ ಸುಮಾರು 15 ಅಡಿಗಳಷ್ಟು ದೂರ ತಳ್ಳಲ್ಪಟ್ಟಿದೆ. ಮಂಗಳಾದೇವಿ ಕಡೆಯಿಂದ ಬರುತ್ತಿದ್ದ ಎರಡು ಖಾಸಗಿ ಬಸ್ ಗಳು ಒಟ್ಟೋಟ್ಟಿಗೆ ಬಂದಿದ್ದು, ವೆಲೆನ್ಸಿಯಾದ ಸರ್ಕಲ್ ಬಳಿ ತಲುಪಿದಾಗ ಸಿಟಿ ಬಸ್ ಓವರ್ ಟೇಕ್ ಮಾಡಲು ಮುಂದಾಗಿದ್ದು, ಈ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಬದಿಯಲ್ಲಿ ನಿಲ್ಲಿಸಿ ಅಂಗಡಿಗೆ ಮೊಟ್ಟೆ ಪೂರೈಕೆ ಮಾಡುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು