1:11 AM Saturday18 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಮುಗ್ರೋಡಿ: 75 ಲಕ್ಷ ರೂ. ವೆಚ್ಚದಲ್ಲಿ ರಾಜಕಾಲುವೆ ತಡೆಗೋಡೆ ಕಾಮಗಾರಿ; ಶಾಸಕ ವೇದವ್ಯಾಸ್ ಕಾಮತ್ ಚಾಲನೆ

24/11/2022, 12:01

ಮಂಗಳೂರು(reporter Karnataka.com): ಪಾಲಿಕೆಯ ಪದವು ಪಶ್ಚಿಮ ವಾರ್ಡಿನ ಮುಗ್ರೋಡಿಯ ಅಚ್ಚುಕೋಡಿಯಲ್ಲಿ 75 ಲಕ್ಷ ರೂಪಾಯಿ ವೆಚ್ಚದಲ್ಲಿ ರಾಜಕಾಲುವೆ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ನಗರ ಪ್ರದೇಶದಲ್ಲಿ ಮಳೆಗಾಲದ ಸಂದರ್ಭದಲ್ಲಿ ರಾಜಕಾಲುವೆಯಿಂದ ನೀರು ಉಕ್ಕುವ ಸಮಸ್ಯೆ ಪ್ರತಿ ವರ್ಷವೂ ಮರುಕಳಿಸುವ ಹಿನ್ನೆಲೆಯಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಅನುದಾನ ತರಲಾಗಿದೆ. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ನಗರ ಪ್ರದೇಶಕ್ಕೆ ಸಣ್ಣ ನೀರಾವರಿ ಇಲಾಖೆಯಿಂದ ಅನುದಾನ ಬಿಡುಗಡೆಯಾಗಿದೆ. ಜನರಿಗೆ ಕೊಟ್ಟ ಮಾತಿನಂತೆ ಇಂದು ಅನೇಕ ತಗ್ಗು ಪ್ರದೇಶಗಳಲಿಲೂ ರಾಜಕಾಲುವೆ ಅಭಿವೃದ್ಧಿಪಡಿಸಿ ಕೃತಕ ನೆರೆಯಂತಹ ಸಮಸ್ಯೆಯನ್ನು ಬಗೆಹರಿಸಲಾಗಿದೆ ಎಂದರು.
ಮುಗ್ರೋಡಿ ಅಚ್ಚುಕೋಡಿಯಲ್ಲಿ ರಾಜಕಾಲುವೆಯ ಸಮಸ್ಯೆಯನ್ನು ಮನಗಂಡು ತಡೆಗೋಡೆ ನಿರ್ಮಿಸಲು 75 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಅತೀ ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ವನಿತಾ ಪ್ರಸಾದ್, ಮುಖಂಡರಾದ ರವಿಚಂದ್ರ, ಪ್ರಸಾದ್ ಆಚಾರ್ಯ, ಗಿರಿಧರ್ ಶೆಟ್ಟಿ, ಗೋಪಾಲ, ಬಾಬು ಶೆಟ್ಟಿ, ಶುಭಕರ್, ಪದ್ಮನಾಭ, ಸಂದೇಶ್,ರಂಜಿತ್, ಪವನ್, ಕಿರಣ್, ಪ್ರಸಾದ್, ನಿತೇಶ್ ದೇವಾಡಿಗ, ಗೋಪಾಲ ಪೂಜಾರಿ, ಚೇತನ್, ದಿವಾಕರ್, ಯಾದವ, ಜನಾರ್ದನ್, ಪ್ರಭಾಕರ್, ಪದ್ಮ,ಮಮತಾ, ಸುಶೀಲಾ, ಪ್ರೇಮಾ, ರಮ್ಯ, ರಾಧಾ, ಪೂರ್ಣಿಮಾ, ರಜನಿ, ವಸಂತಿ, ಗೋಪಾಲ, ಜಾನಕಿ, ಅನುಷಾ, ಹರ್ಷಿತ, ಜೀವನ್, ಚೇತನ ಇನ್ನಿತರ ಪ್ರಮುಖರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು