7:37 PM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಭಯೋತ್ಪಾಕರ ಬಹಿಷ್ಕರಿಸಿ ಸಮುದಾಯದ ಎಲ್ಲ ಸವಲತ್ತುಗಳಿಂದ ದೂರ ಇಡಬೇಕು: ಶಾಸಕ ಡಾ.ಭರತ್ ಶೆಟ್ಟಿ

25/11/2022, 10:51

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ನಡೆದ ಉಗ್ರರ ಕೃತ್ಯವನ್ನು ಮುಸ್ಲಿಂ ಜಮಾತ್ ಗಳು ,ಮುಸ್ಲಿಂ ಮುಖಂಡರು ಖಂಡಿಸುವ ಮತ್ತು
,ಇಂತಹ ಕೃತ್ಯಗಳಿಗಾಗಿ ಮುಸ್ಲಿಂ ಯುವಕರ ತಲೆಯಲ್ಲಿ ಮತಾಂಧತೆಯನ್ನು ತುಂಬಿಸಿ ಉಗ್ರ ಕೃತ್ಯ ನಡೆಸಲು ಹಣಕಾಸು ನೀಡುವ ,ಬೆಂಬಲ ನೀಡಿದ ಜನರನ್ನು ಹಾಗೂ ಸಂಘಟನೆಗಳನ್ನು ಬಹಿಷ್ಕರಿಸಿ ದೂರವಿಡುವ ಮೂಲಕ ದೇಶದ ಹಿತಕ್ಕಾಗಿ ಎನ್ ಐ ಎ ಜತೆ ಉಗ್ರ ನಿರ್ಮೂಲನಕ್ಕೆ ಸಹಕರಿಸಬೇಕಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಒತ್ತಾಯಿಸಿದ್ದಾರೆ.

ಮಂಗಳೂರಿನಲ್ಲಿ ನಡೆದ ಸ್ಪೋಟಕ್ಕೆ ಇಸ್ಲಾಮಿಕ್ ರೆಸಿಸ್ಟನ್ಸ್ ಕೌನ್ಸಿಲ್ ಹೊಣೆ ಹೊತ್ತಿದೆ. ಸರಕಾರ ಉಗ್ರ ನಿಗ್ರಹಕ್ಕೆ ಬೇಕಾದ ಕ್ರಮ ಕೈಗೊಳ್ಳುತ್ತದೆ.
ಇದರ ಹಿಂದೆ ಯಾರು ಇದ್ದಾರೆ ಎಂಬುದನ್ನು ಸಮುದಾಯದ ನಾಯಕರು ಗುರುತಿಸಿ ಮಾಹಿತಿ ನೀಡಿ ಇಂತಹ ಕೃತ್ಯ ಮುಂದೆ ನಡೆಯದಂತೆ ಎಚ್ಚೆತ್ತುಕೊಳ್ಳಬೇಕು.

“ಸಾಮರಸ್ಯ, ಭ್ರಾತೃತ್ವ ಕೇವಲ ಬಾಯಿ ಮಾತಾಗದಿರಲಿ. ಆಡಿದ್ದನ್ನು ಮಾಡಿ ತೋರಿಸುವ ಗುಣವೂ ಇರಬೇಕಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಕೆ ಜಿ ಹಳ್ಳಿ,ಡಿ ಜೆ ಹಳ್ಳಿ ಘಟನೆ ನಡೆದಾಗಲೇ ಎಚ್ಚೆತ್ತುಕೊಂಡು
ಮುಸ್ಲಿಂ ಮುಖಂಡರು ಸಮುದಾಯದಲ್ಲಿ ಮತಾಂಧತೆಯನ್ನು ಹೆಚ್ಚಿಸಿಕೊಂಡು ದಾರಿ ತಪ್ಪಿದ , ಭಯೋತ್ಪಾದನೆಯಲ್ಲಿ ನಿರತವಾಗಿರುವವರ ಗೌಪ್ಯ ಮಾಹಿತಿನ್ನು ಎನ್ ಐ ಎ ಗೆ ನೀಡಬೇಕಿತ್ತು.
ಇದನ್ನು ಸಮುದಾಯ ನಿರ್ಲಕ್ಷಿಸಿದ್ದರಿಂದಲೇ ಮಂಗಳೂರು ಘಟನೆ ನಡೆಯಲು ಕಾರಣವಾಗಿದೆ.

ದೇಶ, ವಿದೇಶದಿಂದ ಹಣ ಪಡೆದು, ಭಯೋತ್ಪಾದನೆಯನ್ನು ನಡೆಸುತ್ತಿರುವುದರ ಘಟನೆಗಳನ್ನು ಸಮುದಾಯದ ನಾಯಕರು ಗಂಭೀರವಾಗಿ ಪರಿಗಣಿಸದೆ ಇದ್ದ ಪರಿಣಾಮ ಮಂಗಳೂರಿನಲ್ಲಿ ಭಾರೀ ಅನಾಹುತದ ಸಂಚು ರೂಪಿತವಾಗಿದೆ ಎಂದು ಡಾ.ಭರತ್ ಶೆಟ್ಟಿ ವೈ ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು