11:20 PM Sunday5 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಜನರಿಗೆ ಮೂಲಸೌಕರ್ಯ ಒದಗಿಸುವುದು ನಮ್ಮ ಜವಾಬ್ದಾರಿ: ಶಾಸಕ ವೇದವ್ಯಾಸ ಕಾಮತ್

25/11/2022, 21:28

ಮಂಗಳೂರು(reporterkarnataka.com): ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನಮ್ಮ ಜವಾಬ್ದಾರಿ, ಅದನ್ನು ನಮ್ಮ ಆಡಳಿತ ವ್ಯವಸ್ಥೆಯ ಮೂಲಕ ಪೂರ್ಣಗೊಳಿಸುವ ಕಾರ್ಯ ಆಗುತ್ತಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.

ನಗರದ ಕುಲಶೇಖರ ವೀರನಾರಾಯಣ ಕಟ್ಟೆಯ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಜನರಿಗೆ ನಮ್ಮ ಆಡಳಿತದ ಮೇಲೆ ಸಂಪೂರ್ಣ ಭರವಸೆಯಿದೆ. ಜನರ ಬೇಡಿಕೆಗಳನ್ನು ಈಡೇರಿಸುವ ದೃಷ್ಟಿಯಿಂದ ನಮ್ಮ ಸರಕಾರವು ಬದ್ಧವಾಗಿದೆ ಎಂದು ನುಡಿದರು.

ಮಂಗಳೂರು ನಗರದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಕೋಟ್ಯಂತರ ರೂಪಾಯಿ ಅನುದಾನ ತರಲಾಗಿದೆ. ಹಂತ ಹಂತವಾಗಿ ಅನುದಾನಗಳನ್ನು ಬಳಸಿ ನಗರದ ಉನ್ನತೀಕರಣ ದೃಷ್ಟಿಯಿಂದ ಕಾರ್ಯ ನಿರ್ವಹಿಸಲಾಗುವುದು. ಮುಂಬರುವ ದಿನಗಳಲ್ಲಿ ದೇಶದ ಅಭಿವೃದ್ಧಿ ಹೊಂದಿದ ನಗರವಾಗಿ ಮಂಗಳೂರು ನಗರವು ರೂಪುಗೊಳ್ಳಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ‌ ಕಿಶೋರ್ ಕೊಟ್ಟಾರಿ, ಶಕಿಲಾ ಕಾವಾ, ಸ್ಥಳೀಯ ಕಾರ್ಪೋರೇಟರ್ ಭಾಸ್ಕರ್ ಮೈೂಯ್ಲಿ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಮುಖಂಡರಾದ ಅಜಯ್ ಕುಲಶೇಖರ, ಮಂಜುಳಾ ರಾವ್, ವೀತು, ಅನಿಲ್ ರಾವ್, ಹರಿಣಿ ಪ್ರೇಮ್, ವಸಂತ್ ಆಚಾರ್ಯ, ಉದಯ್ ಚೌಕಿ, ಗೋಪಿಯಕ್ಕ, ಸುಶಾಂತ್ ಕೋಟಿಮುರ, ಯಶೋದ, ಅರುಣ್ ರಾವ್, ದಿನೇಶ್ ಜ್ಯೋತಿನಗರ, ಯೋಗಿಶ್ ಚೌಕಿ, ದಿನೇಶ್, ಅಶ್ವಿತ್ ಕೊಟ್ಟಾರಿ, ಭಾರತೀ, ಉಷಾ, ಮೆಲ್ವಿನ್, ನಾಗರಾಜ್ ಆಚಾರ್ಯ, ಪ್ರಾನ್ಸಿಸ್, ಯೋಗಿಶ್ ಚೌಕಿ, ಅಭಿಲಾಷ್, ಸಮರ್ಥ್, ಅಂಕಿತ್, ಲೋಕೇಶ್ ಚೌಕಿ, ಅಶ್ವಿನ್ ಅಮಿನ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು