7:47 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಹುಲಿ ದಾಳಿಗೆ 3 ಹಸುಗಳು ಬಲಿ: ಕಾಫಿನಾಡಲ್ಲಿ ಮುಂದುವರೆದ ವ್ಯಾಘ್ರ ಅಟ್ಟಹಾಸ; ಕೈಕಟ್ಟಿ ಕುಳಿತ ಅರಣ್ಯ ಇಲಾಖೆ

26/11/2022, 21:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಭಾರತಿಬ್ಯೆಲು ಕನ್ನಗೆರೆ ಕಣ್ಣ ಕಾಫಿ ಎಸ್ಟೇಟ್ ನಲ್ಲಿ ಶುಕ್ರವಾರ ರಾತ್ರಿ ಸಮಯದಲ್ಲಿ ಹುಲಿ ಸುಮಾರು 4 ಹಸುಗಳನ್ನು ಬೇಟೆಯಾಡಿದ್ದು,ಇದರಲ್ಲಿ ಒಂದು ಕರು ಕೂಡ ಸೇರಿದೆ.

ಇವುಗಳಲ್ಲಿ ಒಂದು ಹಸು ಜೀವ ಉಳಿಸಿಕೊಂಡು ಕನ್ನಗೆರೆ ಗ್ರಾಮಕ್ಕೆ ಓಡಿ ಬಂದಿದೆ. ಇನ್ನೆರಡು ಹಸುಹಾಗು ಒಂದು ಕರು ಪ್ರಾಣ ಬಿಟ್ಟಿದ್ದು ಒಂದನ್ನು ಭಾಗಶಃ ತಿಂದು ಹಾಕಿದೆ.

ಅದರಲ್ಲಿ ಒಂದು ಹಸು ಗರ್ಭ ಧರಿಸಿದ್ದು ಹೊಟ್ಟೆಯಿಂದ ಕರವನ್ನು ಹೊರಹಾಕಿ ತಿಂದಿರುವ ಭಯಾನಕ ದೃಶ್ಯವನ್ನು ಗ್ರಾಮಸ್ಥರು ಕಂಡು ಬೆಚ್ಚಿಬಿದ್ದಿದ್ದಾರೆ. ಈ ಭಾಗದಲ್ಲಿ ಕಳೆದ ಕೆಲವು ದಿವಸಗಳಿಂದ ಎರಡು ಹುಲಿಗಳು ಸಂಚರಿಸುತ್ತಿದ್ದು, ಅನೇಕ ಹಸುಗಳನ್ನು ಇದುವರೆಗೂ ಬೇಟೆಯಾಡಿರುವ ವರದಿಯಾಗಿದೆ.

ಕೂಡಲೇ ಜೀವಹಾನಿ ಸಂಭವಿಸುವ ಮುಂಚೆ ಈ ಹುಲಿಗಳನ್ನು ಹಿಡಿದು ಸ್ಥಳಾಂತರಿಸಬೇಕು ಎಂದು ಗ್ರಾಮಸ್ಥರು ಅರಣ್ಯ ಇಲಾಖೆಗೆ ಅಗ್ರಹಿಸಿದ್ದಾರೆ.
ಉಪವಲಯ ಅರಣ್ಯ ಅಧಿಕಾರಿ ಉಮೇಶ್, ಅರಣ್ಯ ರಕ್ಷಕ ಮೋಹಸೀನ್ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು