3:07 AM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಉಡುಪಿ: ಹೊಮ್ ನರ್ಸ್ ನಿಂದ ವೃದ್ಧೆಯ 1.45 ಲಕ್ಷ ರೂ ಮೌಲ್ಯದ ಚಿನ್ನದ ಸರ ಕಳವು

26/11/2022, 17:33

ಉಡುಪಿ(reporterkarnataka.com): ವಯೋವೃದ್ಧರೊಬ್ಬರ ನೋಡಿಕೊಳ್ಳಲು ನೇಮಿಸಿದ್ದ ಹೋಮ್ ನರ್ಸ್ ವೋರ್ವಳು, ವೃದ್ಧೆಯ ಕುತ್ತಿಗೆಯಲ್ಲಿದ್ದ 1.45 ಲಕ್ಷ ಮೌಲ್ಯದ ಚಿನ್ನದ ಸರ ಕಳವು ಮಾಡಿಕೊಂಡು ಪರಾರಿಯಾದ ಘಟನೆ ಉಡುಪಿ ತಾಲೂಕಿನ ಆತ್ರಾಡಿ ಗ್ರಾಮದ ಮದಗ ಎಂಬಲ್ಲಿ ನಡೆದಿದೆ.

ಮದಗದ ಚೆನ್ನಿಬೆಟ್ಟು ನಿವಾಸಿ ವಸಂತ ಶೆಟ್ಟಿ ಅವರು ತಮ್ಮ 98 ವರ್ಷದ ತಾಯಿ ಸರಸ್ವತಿ ಅವರ ಆರೈಕೆ ಮಾಡಿ ನೋಡಿಕೊಳ್ಳಲು ಉಡುಪಿ ಉಷಾ ಮ್ಯಾರೇಜ್ ಬ್ಯುರೋ & ಜಾಬ್ ಲಿಂಕ್ಸ್ ಏಜೆನ್ಸಿ ಮುಖಾಂತರ ರೇಖಾ ಹೆಬ್ಬಳ್ಳಿ ಎಂಬಾಕೆಯನ್ನು ಹೋಂ ನರ್ಸ್ ಆಗಿ ನೇಮಿಸಿದ್ದರು.

ಅಕ್ಟೋಬರ್ 20 ರಿಂದ ರೇಖಾ ಹೆಬ್ಬಳ್ಳಿ, ಸರಸ್ವತಿ ಅವರ ಆರೈಕೆ ಮಾಡಿ ನೋಡಿಕೊಂಡಿದ್ದರು. ನ.21 ರಂದು ಸಂಜೆ ವೇಳೆ ರೇಖಾ ಹೆಬ್ಬಳ್ಳಿ ಯಾರಿಗೂ ಹೇಳದೇ ಮನೆಯಿಂದ ಹೋಗಿದ್ದಳು. ಬಳಿಕ ವಸಂತ ಶೆಟ್ಟಿ ಅವರು ತಾಯಿಯ ಬಳಿ ಹೋಗಿ ನೋಡಿದಾಗ ಅವರ ಕುತ್ತಿಗೆಯಲ್ಲಿದ್ದ 1,45, ಲಕ್ಷ ರೂ. ಮೌಲ್ಯದ ಚಿನ್ನದ ಚೈನ್ ಕಂಡು ಬಂದಿಲ್ಲ. ಈ ಬಗ್ಗೆ ರೇಖಾಳಿಗೆ ಫೋನ್ ಮಾಡಿದಾಗ ಆಕೆಯು ಫೋನ್ ಸ್ವೀಕರಿಸುತ್ತಿರಲಿಲ್ಲ. ತಾಯಿ ಚೈನ್ ಅನ್ನು ರೇಖಾ ಅವರೇ ಕಳವು ಮಾಡಿಕೊಂಡು ಹೋಗಿರುವ ಸಂಶಯ ಇದೆ ಎಂದು ನೀಡಿದ ದೂರಿನಂತೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು