7:00 AM Saturday20 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ಬಂಟ್ವಾಳ ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆಯ ಪ್ರಯುಕ್ತ ಕಾನೂನು ಅರಿವು ಕಾರ್ಯಕ್ರಮ

27/11/2022, 09:01

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜ್ ರಾಷ್ಟೀಯ ಸೇವಾ ಯೋಜನೆ ಹಾಗೂ ಬಂಟ್ವಾಳ ತಾಲೂಕು ವಕೀಲರು ಸೇವಾ ಸಂಘದ ಜಂಟಿ ಆಶ್ರಯದಲ್ಲಿ ಸಂವಿಧಾನ ದಿನಾಚರಣೆಯ ಪ್ರಯುಕ್ತ ಕಾನೂನು ಅರಿವು ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು.

ಪ್ರಧಾನ ಸಿವಿಲ್ ನ್ಯಾಯಾದೀಶರಾದ ಚಂದ್ರಶೇಖರ ವೈ ತಳವಾರ,
ಕಾರ್ಯಕ್ರಮವನ್ನು ಉದ್ಘಾಟಿಸಿ, ನಮ್ಮ ಸಂವಿಧಾನ ದೇಶದ ಜನರನ್ನು ಸಶಕ್ತಗೊ ಳಿಸಿದೆ. ಸರ್ವರಿಗೂ ಸಮಾನತೆ ಒದಗಿಸಿದೆ, ಭಾರತಕ್ಕೆ ಸಂವಿಧಾನ ದೊಡ್ಡ ಬಲ ಎಂಬ ಸಂದೇಶ ನೀಡಿದರು.

ಮುಖ್ಯ ಅತಿಥಿಯಾಗಿ ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ಬಿ. ಗಣೇಶಾನಂದ ಸೋಮಯಜಿ ಆಗಮಿಸಿದ್ದರು.

ಕಾಲೇಜಿನ ಪ್ರಾಂಶುಪಾಲೆ ಡಾ. ಸಿಸ್ಟರ್ ಲತಾ ಫೆರ್ನಾಂಡಿಸ್ ಎ ಸಿ , ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸರಕಾರಿ ಸಹಾಯಕ ಅಭಿಯೋಜಕಿ ಹರಿಣಿ, ಬಂಟ್ವಾಳ ನಗರ ಪೊಲೀಸ್ ಠಾಠಾ ನೀರಿಕ್ಷಕರು ವಿವೇಕಾನಂದ ಉಪಸ್ಥಿತರಿದ್ದರು.

ಹಿರಿಯ ವಕೀಲ ಕೆ.ರಮೇಶ್ ಉಪಾಧ್ಯಾಯ ಸಂಪನ್ಮೂಲ ವ್ಯಕ್ತಿ ಯಾಗಿ ಅವರು ಮಾತನಾಡಿದರು.
ಅವರು ಮಾತನಾಡಿ ಭಾರತೀಯ ಸಂವಿಧಾನದ ಇತಿಹಾಸ ಅದರ ರುಪುರೇಷೆಗಳು, ಭಾರತೀಯ ಸಂವಿಧಾನದ ಹಕ್ಕುಗಳು, ಕರ್ತವ್ಯಗಳ ಅರಿವು ಪ್ರತಿಯೊಬ್ಬ ನಾಗರೀಕನಲ್ಲಿ ಇರಬೇಕು ಎಂಬ ಮಾಹಿತಿ ನೀಡಿದರು.

ಸುಪ್ರೀತ ನಿರೂಪಿಸಿದರು, ರಾಷ್ಟೀಯ ಸೇವಾ ಯೋಜನಾ ಘಟಕದ ಸಹ ಯೋಜನಾಧಿಕಾರಿ ವಿಜೇತ ಸ್ವಾಗತಿಸಿದರು, ಕಾಲೇಜಿನ ಮಾನವ ಹಕ್ಕು ಘಟಕದ ಸಂಯೋಜಕರು ನಿಹಾರಿಕಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು