9:40 AM Thursday25 - April 2024
ಬ್ರೇಕಿಂಗ್ ನ್ಯೂಸ್
ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ…

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ಅಂಗಾಂಗದಾನ, ನೇತ್ರದಾನ ಮತ್ತು ನೋಂದಣಿ ಜಾಗೃತಿ ಅಭಿಯಾನ

28/11/2022, 20:35

ಮಂಗಳೂರು(reporterkarnataka.com): “ನಮ್ಮ ಸಮಾಜದಲ್ಲಿ ದಾನ ಎಂಬುದು ಕರುಣೆ,ಪ್ರೀತಿ, ದಯೆ ಮೊದಲಾದ ಮೌಲ್ಯಗಳನ್ನೊಳಗೊಂಡ ನಮಗ್ರ ಆದರ್ಶ. ಈ ಆದರ್ಶವನ್ನು ನಿಸ್ವಾರ್ಥದಿಂದ ಪಾಲಿಸುವವರನ್ನು ಸಮಾಜ ಸರ್ವಕಾಲಕ್ಕೂ ಸ್ಮರಿಸುತ್ತದೆ. ಇಂತಹಾ ಆದರ್ಶವನ್ನು ಪಾಲಿಸಿದ ವ್ಯಕ್ತಿಗಳ ಹಾದಿಯಲ್ಲಿ ನಡೆಯಲು ನಮಗೆ ಅವಕಾಶ ಮಾಡಿಕೊಡುವ ಪುಣ್ಯಕರ ಕಾರ್ಯವೇ ಅಂಗಾಂಗ ದಾನ ಹಾಗೂ ನೇತ್ರದಾನ. ಇನ್ನೊಬ್ಬರ ಜೀವ ಉಳಿಸುವ,ಒಂದಷ್ಟು ಜನರ ಬದುಕಿಗೆ ಬೆಳಕಾಗುವ, ಸಾವಿನ ನಂತರವೂ ಮತ್ತೊಬ್ಬರಿಗೆ ಬದುಕು ನೀಡಿ, ಜನಮಾನಸದಲ್ಲಿ ನಮಗೆ ಬದುಕಲು ಇಂತಹ ದಾನದಿಂದ ಸಾಧ್ಯ. ಹಾಗಾಗಿ ಇದು ಎಲ್ಲಕ್ಕಿಂತ ಶ್ರೇಷ್ಠ ದಾನ.ಈ ರೀತಿಯ ಶ್ರೇಷ್ಠ ಕಾರ್ಯದಲ್ಲಿ ಎಲ್ಲರೂ ಭಾಗಿಯಾಗಿ ಜಾಗೃತಿ ಕಾರ್ಯ ಕೈಗೊಂಡಾಗ ಮಾತ್ರ ಅಂಗಾಂಗ ಹಾಗೂ ನೇತ್ರದಾನ ಜನರ ಅಭಿಯಾನವಾಗಿ,ಆಂದೋಲನವಾಗಿ ಬದಲಾಗಲು ಸಾಧ್ಯ” ಎಂದು ಅಂಗಾಂಗದಾನದ ಜಿಲ್ಲಾ ಮುಖ್ಯ ಸಂಯೋಜಕ ಲಯನ್ ಫಿಲಿಪ್ ಜೆ.ಪಿರೇರಾ ಹೇಳಿದರು.

ಅವರು ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆ ಹಾಗೂ ಕದ್ರಿಯ ಲಯನ್ಸ್ ಹಾಗೂ ಲಿಯೋ ಕ್ಲಬ್ ನ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ನೇತ್ರದಾನ ಹಾಗೂ ಅಂಗಾಂಗದಾನ ಮತ್ತು ನೋಂದಣಿ ಅಭಿಯಾನದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕದ್ರಿ ಲಯನ್ಸ್ ಕ್ಲಬ್ ನ ಅಧ್ಯಕ್ಷೆ ಲಯನ್ ಸುಮಿತ್ರಾ ಶೆಟ್ಟಿ ಮಾತನಾಡಿ, ಅಂಗಾಂಗ ದಾನದ ಮಹತ್ವವನ್ನು ತಿಳಿಸಿ,ಈ ಒಂದು ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಲಯನ್ ಜಯಕುಮಾರಿ ಸತೀಶನ್,ಲಯನ್ ರತ್ನಾಕರ್,ಲಯನ್ ಮಾಲಾ ಕಿಶೋರ್, ಲಯನ್ ವಿಜಯ ಶೆಟ್ಟಿ ,ಕಾಲೇಜಿನ ರಾ.ಸೇ.ಯೋ.ಯೋಜನಾಧಿಕಾರಿಗಳಾದ ಸೀಮಾ ಪ್ರಭು,ವಾಣಿ ಯು.ಎಸ್.ಉಪಸ್ಥಿತರಿದ್ದರು.


ಕು.ಸಮೀಕ್ಷಾ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಕು.ವೀಕ್ಷಾ ಸಾಲ್ಯಾನ್ ವಂದಿಸಿ,ಕು.ಶ್ರಾವ್ಯ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು