6:27 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್ಸಿಗೆ ಮಸಿ: ಗಡಿ ಭಾಗ ಅಥಣಿಯಲ್ಲಿ ವಿನೂತನ ಪ್ರತಿಭಟನೆ

28/11/2022, 20:23

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಮಹಾರಾಷ್ಟ್ರದಲ್ಲಿ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸುಗಳಿಗೆ ಕಪ್ಪು ಮಸಿ ಬಳಿದು ಕಲ್ಲು ಹೊಡೆದ ಮರಾಠಿ ಪುಂಡರ ಕೃತ್ಯ ಖಂಡಿಸಿ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ವಿನೂತನ ಪ್ರತಿಭಟನೆ ನಡೆಸಲಾಯಿತು. ಕರವೇ ಪ್ರವೀಣ ಶೆಟ್ಟಿ ಬಣದಿಂದ ಮಹಾರಾಷ್ಟ್ರ ಸಾರಿಗೆ ಸಂಸ್ಥೆಯ ಚಾಲಕ ನಿರ್ವಾಹಕರಿಗೆ ಹಾರ ಹಾಕಿ ಕನ್ನಡ ಶಲ್ಯೆ ಕೊಟ್ಟು ಧ್ವಜವನ್ನು ಹಿಡಿಸಿ ಗುಲಾಬಿ ನೀಡುವ ಮೂಲಕ ಮಹಾರಾಷ್ಟ್ರ ಸಾರಿಗೆ ಸಿಬ್ಬಂದಿಗಳನ್ನು ಸನ್ಮಾನಿಸಿದರು.

ಅಥಣಿ ಪಟ್ಟಣದ ಹಲ್ಯಾಳ ಸರ್ಕಲ್ ಮತ್ತು ಅಂಬೇಡ್ಕರ್ ವೃತ್ತದಲ್ಲಿ ಮಹಾರಾಷ್ಟ್ರ ಸಾರಿಗೆ ಬಸ್ ತಡೆದ ಕರವೇ ಸದಸ್ಯರು ಮಹಾರಾಷ್ಟ್ರ ಸಿ ಎಮ್ ಎಕನಾಥ ಶಿಂಧೆ ಮತ್ತು ಎಮ್ ಇ ಎಸ್ ಹಾಗೂ ಶಿವಸೇನೆ ಪುಂಡರ ವಿರುದ್ದ ಧಿಕ್ಕಾರ ಕೂಗಿದರಲ್ಲದೆ ಜತ್ ಸೋಲಾಪುರ ಅಕ್ಕಲಕೋಟ ಲಾಥೂರ ಗಳನ್ನು ಕರ್ನಾಟಕ ರಾಜ್ಯಕ್ಕೆ ಸೇರಿಸುವಂತೆ ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಕರವೇ ಅಧ್ಯಕ್ಷ ಅಣ್ಣಾಸಾಬ ತೆಲಸಂಗ ಗಡಿ ಕ್ಯಾತೆ ತೆಗೆಯುವ ಮಹಾ ಪುಂಡರಿಗೆ ತಕ್ಕ ಪಾಠ ಕಲಿಸಲು ಕರ್ನಾಟಕದಲ್ಲಿ ಎಮ್ ಇ ಎಸ್ ಮತ್ತು ಶಿವಸೇನೆಯನ್ನು ನಿಷೇಧಿಸಬೇಕು. ಅಲ್ಲಿನ ಕನ್ನಡಿಗರ ಮೇಲೆ ಹಲ್ಲೆ ಮತ್ತು ಅವಮಾನ ಮಾಡಲಾಗುತ್ತಿದ್ದು ತಪ್ಪಿತಸ್ಥರ ವಿರುದ್ದ ಶಿಸ್ತು ಕ್ರಮ ಜರುಗಿಸುವಂತೆ ಆಗ್ರಹಿಸಿದರು.

ಸಾಹಿತಿ ದೀಪಕ ಶಿಂಧೇ ಮಾತನಾಡಿ, ಮಹಾರಾಷ್ಟ್ರದ ಜತ್,ಅಕ್ಕಲಕೋಟ,ಸೊಲ್ಲಾಪುರ, ಕೊಲ್ಲಾಪೂರ ಜಿಲ್ಲೆಗಳಲ್ಲಿ ಕನ್ನಡಿಗರ ಸಂಖ್ಯೆ ಹೆಚ್ಚಾಗಿರುವ ಹಳ್ಳಿಗಳನ್ನು ಕಡೆಗಣಿಸಲಾಗುತ್ತಿದ್ದು ಅಭಿವೃದ್ಧಿ ಮಾಡದೆ ಇದ್ದರೆ ಕರ್ನಾಟಕ ಯಾವುದೇ ಕಾರಣಕ್ಕೂ ಕರ್ನಾಟಕದ ಒಂದಿಂಚು ಭೂಮಿಯನ್ನು ಮಹಾರಾಷ್ಟ್ರಕ್ಕೆ ಬಿಟ್ಟು ಕೊಡುವದಿಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು