6:20 AM Saturday20 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಎನ್ ಸಿ ಸಿ ಘಟಕಗಳ ವತಿಯಿಂದ ರಕ್ತದಾನ ಶಿಬಿರ

28/11/2022, 21:11

ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜು ಹಾಗೂ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಎನ್ ಸಿ. ಸಿ ಘಟಕಗಳ ವತಿಯಿಂದ ರೋಟರಿ ಕ್ಯಾಂಪ್ಯೂ ಬ್ಲಡ್ ಸೆಂಟರ್ ಸಹಯೋಗದೊಂದಿಗೆ ಎನ್.ಸಿ.ಸಿ. ದಿನದ ಪ್ರಯುಕ್ತ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ರೋಟರಿ ಕ್ಯಾಂಪ್ಕೊ -ಬ್ಲಡ್ ಸೆಂಟರ್ ನಲ್ಲಿ ಆಯೋಜಿಸಲಾಯಿತು. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ರೋಟರಿ ಕ್ಯಾಂಪ್ಕೊ ಬ್ಲಡ್ ಸೆಂಟರ್ ನ ವೈದ್ಯಾಧಿಕಾರಿಯಾದ ಡಾ| ರಾಮಚಂದ್ರ ಭಟ್ ರವರು ರಕ್ತದಾನವು ಸಕಲದಾನಗಳಿಗಿಂತಲೂ ಶ್ರೇಷ್ಠವಾದುದು ಯಾಕೆಂದರೆ ರಕ್ತವನ್ನು ಬೇರೆ ಯಾವುದೇ ಕೃತಕರೀತಿಯಲ್ಲಿ ತಯಾರಿಸಲು ಸಾಧ್ಯವಾಗುವುದಿಲ್ಲ. ಆರೋಗ್ಯವಂತ ವ್ಯಕ್ತಿಯು ದಾನಮಾಡುವ ಮೂಲಕ ಮಾತ್ರವೇ ರಕ್ತವನ್ನು ಪಡೆಯಬಹುದಾಗಿದೆ.
ಅಪಘಾತ, ಶಸ್ತ್ರಕ್ರಿಯೆ ಹಾಗೂ ಜ್ವರ ಮುಂತಾದ ಅನಾರೋಗ್ಯಗಳ ಸಂದರ್ಭದಲ್ಲಿ ರೋಗಿಗಳಿಗೆ ರಕ್ತದ ಅವಶ್ಯಕತೆ ಇರುತ್ತದೆ. 18 ವರ್ಷಗಳಿಗೆ ಮೇಲ್ಪಟ್ಟ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದಾಗಿದೆ” ಎಂದು ಹೇಳಿದರು.

ಕಾಲೇಜಿನ ಎನ್ ಸಿಸಿ ಭೂದಳದ ಅಧಿಕಾರಿ ಲೆ ಜೋನ್ಸನ್ ಡೇವಿಡ್ ಸಿಕ್ವೆರಾ ಹಾಗೂ ನೌಕಾದಳದ ಅಧಿಕಾರಿ ತೇಜಸ್ವಿ ಭಟ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು. 50 ಕೆಡೆಟ್ ಗಳು ರಕ್ತದಾನ ಮಾಡುವ ಮೂಲಕ ತಮಗಿರುವ ಸಾಮಾಜಿಕ ಕಳಕಳಿಯನ್ನು ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು