6:20 PM Saturday20 - April 2024
ಬ್ರೇಕಿಂಗ್ ನ್ಯೂಸ್
ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿ ಸೇರ್ಪಡೆ: ಪಕ್ಷದ ಧ್ವಜ ನೀಡಿ… ಮಂಗಳೂರಿನಲ್ಲಿ ಕರ್ಕಶ ಹಾರ್ನ್ ಗಳ ಕಿರಿಕಿರಿ ತಪ್ಪಿಸಲು ಪೊಲೀಸ್ ಕಾರ್ಯಾಚರಣೆ: ಹಾರ್ನ್ ಕಿತ್ತೆಸೆದು… ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆಯಲ್ಲಿ ದನಗಳಿಗೆ ಚರ್ಮಗಂಟು ರೋಗ: ಮುನ್ನೆಚ್ಚರಿಕೆ ವಹಿಸಲು ಸೂಚನೆ

02/12/2022, 13:53

ಸುಳ್ಯ(reporterkarnataka.com): ಉತ್ತರ ಕರ್ನಾಟಕದಲ್ಲಿ ಕಾಣಿಸಿಕೊಂಡ ಚರ್ಮಗಂಟು ರೋಗ ಈಗ ದ.ಕ. ದಲ್ಲಿ ಕಾಣಿಸಿಕೊಂಡಿದೆ. ಆ ಮೂಲಕ ಹೈನುಗಾರರ ನಿದ್ದೆಗೆಡಿಸುವಂತೆ ಮಾಡಿದೆ.

ಜಿಲ್ಲೆಯ ಬೆಳ್ತಂಗಡಿ, ಕಡಬ, ಸುಳ್ಯ ತಾಲೂಕುಗಳ ಕೆಲವು ಗ್ರಾಮಗಳಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗದ ಲಕ್ಷಣಗಳು ಕಂಡು ಬಂದಿವೆ.
ಚರ್ಮಗಂಟು ರೋಗವು ದನ ಮತ್ತು ಎಮ್ಮೆಗಳಲ್ಲಿ ಕಂಡು ಬರುವ ವೈರಸ್ ಕಾಯಿಲೆಯಾಗಿದ್ದು ಕ್ಯಾಪ್ರಿಪಾಕ್ಸ್ ಎಂಬ ವೈರಾಣುವಿನಿಂದ ಹರಡುತ್ತದೆ. ರೋಗ ತಗುಲಿದ ಪ್ರಾಣಿಯಿಂದ ರಕ್ತ ಹೀರುವ ಸೊಳ್ಳೆ,ಉಣ್ಣೆ ನೊಣಗಳು ಆರೋಗ್ಯವಂತ ಜಾನುವಾರುಗಳಿಗೆ ಕಚ್ಚುವ ಮೂಲಕ ರೋಗವನ್ನು ಹರಡುತ್ತವೆ. ರೋಗಪೀಡಿತ ಜಾನುವಾರುಗಳ ರಕ್ತ, ಕೀವು, ದೈಹಿಕ ಸ್ರಾವಗಳ ನೇರ ಸಂಪರ್ಕದಿಂದಲೂ ರೋಗಾಣು ಹರಡಬಹುದು.

ಬೆಳ್ತಂಗಡಿ ತಾಲೂಕಿನ ಹೊಸಂಗಡಿ, ಚಿಬಿದ್ರೆ, ಧರ್ಮಸ್ಥಳ ಗ್ರಾಮಗಳ ಶಂಕಿತ 5 ಹಸುಗಳ ಕಡಬದ ಕಡಬ, ಕುಟುಪಾಡಿ, ಬಂಟ್ರ ಗ್ರಾಮಗಳ 3 ಹಸುಗಳ, ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು, ಮಕರ್ಂಜೆ ಗ್ರಾಮಗಳ 2 ಚರ್ಮ ಗಂಟು ರೋಗ ಶಂಕಿತ ಹಸುಗಳ ರಕ್ತದ ಮಾದರಿಯನ್ನು ಜಿಲ್ಲಾ ಪ್ರಯೋಗಕ್ಕೆ ಈಗಾಗಲೇ ರವಾನಿಸಲಾಗಿದೆ.
ಚರ್ಮಗಂಟು ರೋಗದ ಲಕ್ಷಣಗಳು ಕಂಡು ಬರುತ್ತಿದ್ದಂತೆ ಇದೀಗ ಜಿಲ್ಲೆಯ ಪ್ರತಿ ತಾಲೂಕಿಗೆ ತಲಾ 19,000 ಲಸಿಕೆಯನ್ನು ಇಲಾಖೆ ವತಿಯಿಂದ ಪೂರೈಸಲಾಗಿದ್ದು, ಅಲ್ಲಲ್ಲಿ ಶಿಬಿರಗಳನ್ನು ಏರ್ಪಡಿಸುವ ಮೂಲಕ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು