5:06 AM Friday19 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ಮಳೆಗಾಲದಲ್ಲಿ ಬರ್ಕೆ ಪರಿಸರ ಮುಳುಗಡೆಗೆ ಶಾಶ್ವತ ಪರಿಹಾರ: ಶಾಸಕ ವೇದವ್ಯಾಸ ಕಾಮತ್

02/12/2022, 22:09

ಮಂಗಳೂರು(reporterkarnataka.com): ಪಾಲಿಕೆಯ ಮಣ್ಣಗುಡ್ಡೆ ವಾರ್ಡಿನಲ್ಲಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ತೋಡಿನ ಅಭಿವೃದ್ಧಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಶಾಸಕ ಕಾಮತ್, ಮಿಷನ್ ಗೋರಿಯಿಂದ ಬರ್ಕೆ ವರೆಗಿನ ತೋಡಿನ ಆಯ್ದ ಭಾಗಗಳನ್ನು ಅಭಿವೃದ್ಧಿಪಡಿಸುವ ಕಾಮಗಾರಿಗೆ 50 ಲಕ್ಷ ರೂಪಾಯಿ ಅನುದಾನವನ್ನು ಸಣ್ಣ ನೀರಾವರಿ ಇಲಾಖೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದರು.

ಬರ್ಕೆ ಪರಿಸರವು ಪ್ರತಿ ಮಳೆಗಾಲದ ಸಮಯದಲ್ಲಿ ಮುಳುಗಡೆಯಾಗುತ್ತಿರುವುದನ್ನು ಮನಗಂಡು ಶಾಶ್ವತ ಪರಿಹಾರ ನೀಡುವ ದೃಷ್ಟಿಯಿಂದ ಯೋಜನೆ ರೂಪಿಸಲಾಗಿದೆ. 4 ವರ್ಷಗಳ ಹಿಂದಿನ ಸಮಸ್ಯೆ ಅಲ್ಪ ಪ್ರಮಾಣದಲ್ಲಿ ಬಗೆಹರಿದಿದ್ದು, ಮನೆಯೊಳಗೆ ಮಳೆ ನೀರು ಹರಿಯುವ ಅತೀ ದೊಡ್ಡ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಸಂಧ್ಯಾ ಮೋಹನ್ ಆಚಾರ್, ಪಾಲಿಕೆ ಸದಸ್ಯರಾದ ಜಯಶ್ರೀ ಕುಡ್ವ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಮುಖಂಡರಾದ ಸುಧಾಕರ್ ಮೈೂಲಿ, ಗೋಕುಲ್ ದಾಸ್ ಭಟ್, ಗುರು ಚರಣ್, ವಸಂತ್ ಶೇಟ್, ಮೋಹನ್ ಆಚಾರ್,ಜನಾರ್ದನ್ ಕುಡ್ವ, ರಘುನಾಥ್ ಪ್ರಭು, ಶ್ರೀ ದೇವಿ ಆಚಾರ್ಯ, ರಾಮಚಂದ್ರ ಭಂಡಾರಿ, ರಾಜೇಂದ್ರ ಶೆಟ್ಟಿ, ಉಮೇಶ್ ಟೈಲರ್, ಭರತ್ ಭಟ್, ಪ್ರಮುಖರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು