6:27 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಬಿಜೆಪಿ ಸರಕಾರ ಮೀನುಗಾರರಿಗೆ ಯಾವುದೇ ನೆರವು ನೀಡಿಲ್ಲ: ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್

05/12/2022, 22:15

ಮಂಗಳೂರು(reporterkarnataka.com): ರಾಜ್ಯ ಬಿಜೆಪಿ ಸರಕಾರ ಮೀನುಗಾರರಿಗೆ ವಸತಿ, ಸಬ್ಸಿಡಿ ಸಹಿತ ಯಾವುದೇ ನೆರವು ನೀಡಿಲ್ಲ ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಆರೋಪಿಸಿದ್ದಾರೆ.

ಬಿಜೆಪಿ ಸರಕಾರ ಮೀನುಗಾರರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ತಮ್ಮ ರಾಜಕೀಯ ಅಸ್ತಿತ್ವಕ್ಕೆ ಮೀನುಗಾರರ ಜೀವವನ್ನು ಬಳಸುತ್ತಿದ್ದಾರೆ. ಅವರ ಅಭಿವೃದ್ಧಿ ನಿಟ್ಟಿನಲ್ಲಿ, ಅವರಿಗೆ ಬದುಕನ್ನು ಕಟ್ಟಿಕೊಡಲು ಯಾವುದೇ ಕ್ರಮ ಕೈಗೊಂಡಿಲ್ಲ.

ಕಾಂಗ್ರೆಸ್ ಸರಕಾರ ತಂದಿದ್ದ ಯೋಜನೆಗಳನ್ನೂ ಸಂಪೂರ್ಣ
ಸ್ಥಗಿತಗೊಳಿಸಿದ್ದಾರೆ. ಸಬ್ಸಿಡಿ ದರದ ಸೀಮೆಎಣ್ಣೆಯನ್ನು ನೀಡಲೂ ಬಿಜೆಪಿ ಸರಕಾರ ಹಿಂದೇಟು ಹಾಕಿದೆ ಎಂದು ಖಾದರ್ ಹೇಳಿದ್ದಾರೆ.

ನಮ್ಮ ಸರಕಾರ ಇದ್ದಾಗ ಮೀನುಗಾರರ ನೋವಿಗೆ ಸ್ಪಂದಿಸುತ್ತಿತ್ತು. ಬಿಜೆಪಿ ಸರಕಾರ ಬಂದ ಬಳಿಕ ಮೀನುಗಾರರಿಗೆ ಒಂದೇ ಒಂದು ಮನೆಯನ್ನೂ
ನೀಡಲು ಮುಂದಾಗಿಲ್ಲ. ಕೆಲವು ದಿನಗಳ ಹಿಂದೆ ಪಟ್ಟಿ ಕಳುಹಿಸಿದ್ದಾರೆ. ಆದರೆ ಅಲ್ಲಿನ ಮೀನುಗಾರರಿಗೆ ಮನೆ ಕೊಟ್ಟಿಲ್ಲ. ಯಾವ ರೀತಿಯಲ್ಲಿ ಮೀನುಗಾರರನ್ನು ನಡೆಸಿಕೊಳ್ಳುತ್ತಿದ್ದಾರೆ ಎನ್ನವುದಕ್ಕೆ ಸಾಕ್ಷಿ ಇದು.
ಕರಾವಳಿಯ ಶಾಸಕರಾದ ವೇದವ್ಯಾಸ ಕಾಮತ್, ಉಮಾನಾಥ ಕೋಟ್ಯಾನ್ ಯಾರೂ ಕೂಡ ಮೀನುಗಾರರ ಪರವಾಗಿ ಕೆಲಸ ಮಾಡಿಲ್ಲ.
ಮುಖ್ಯಮಂತ್ರಿ ಮಂಗಳೂರಿಗೆ ಬಂದ ಸಂದರ್ಭದಲ್ಲೂ ಮೀನುಗಾರರ ಸಮಸ್ಯೆಯನ್ನು ಮುಂದಿಡುವ ಕೆಲಸ ಮಾಡಿಲ್ಲ. ಹೊಸ ಯೋಜನೆ ಬಿಡಿ, ಕಾಂಗ್ರೆಸ್‌ನ ಯೋಜನೆಗಳನ್ನೂ ಕೂಡಾ ಮೀನುಗಾರರಿಗೆ ತಲುಪಿಸಲು ಇವರಿಗೆ ಆಗಿಲ್ಲ ಎಂದು ವಾಗ್ದಾಳಿ ನಡೆಸಿದರು.

ಮೀನುಗಾರರ ಸಮಸ್ಯೆಗೆ ಸ್ಪಂದಿಸದೇ ಇದ್ದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಮುಂದಿನ 10 ದಿನಗಳ ಒಳಗೆ ದೊಡ್ಡ ಮಟ್ಟದ ಪ್ರತಿಭಟನೆ ನಡೆಸುವುದಾಗಿ ಖಾದರ್ ಎಚ್ಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು