7:08 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಬಿಎಸ್ಸಿ ಓದಲು ಇಷ್ಟವಿಲ್ಲ; ಡೆತ್ ನೋಟು ಬರೆದಿಟ್ಟು ಸ್ವಗೃಹದಲ್ಲಿ ವಿದ್ಯಾರ್ಥಿ ನೇಣಿಗೆ ಶರಣು

05/12/2022, 21:59

ರಾಹುಲ್ ಅಥಣಿ ಬೆಳಗಾವಿ

info.reporterkarnataka.com

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಯಲ್ಪಾರಟ್ಟಿ ಗ್ರಾಮದಲ್ಲಿ ಬಿಎಸ್ಸಿ ಓದಲು ಇಷ್ಟವಿಲ್ಲವೆಂದು ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾದ ಘಟನೆ ನಡೆದಿದೆ.

ತಡರಾತ್ರಿಯಲ್ಲಿ ನೇಣಿಗೆ ಶರಣಾದ ನಿಂಗಣ್ಣಾ (ಉರ್ಪ ಮಾರುತಿ) ಚಿದಾನಂದ ನಾವ್ಹಿ ವಯಸ್ಸು 22 ಎಂದು ತಿಳಿದು ಬಂದಿದೆ.

ಈತ ಜಮಖಂಡಿಯ ಬಿಎಲ್ ಡಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ ಮೂರು ದಿನಗಳ ಹಿಂದಷ್ಟೇ ಸ್ವ ಗ್ರಾಮವಾದ ಯಲ್ಪಾರಟ್ಟಿಗೆ ಆಗಮಿಸಿದ್ದ. ಆದರೆ ನಿನ್ನೆ ತಮ್ಮ ಸ್ವಂತ ಮನೆಯಲ್ಲಿ ತಡರಾತ್ರಿ ಮನೆಯ ಮುಂದೆ ಇರುವ ಛಾವಣಿಯಲ್ಲಿ ಮಲಗಿಕೊಂಡಾಗ ನಿಂಗಣ್ಣಾ ,(ಉರ್ಪ ಮಾರುತಿ) ನೇಣಿಗೆ ಶರಣಾಗಿದ್ದಾನೆ. ಬೆಳಿಗ್ಗೆ ಎದ್ದು ತಂದೆ ತಾಯಿ ನೋಡಿದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.

ಡೇತ ನೋಟಿನಲ್ಲಿ ನನ್ನನು ಕ್ಷೇಮಿಸಿ ಬಿಡಿ,ನಂಗೆ BSC ಇಷ್ಟ ಇಲ್ಲ
ಮನಿ ಪರಿಸ್ಥಿತಿ ನೋಡಿ ನಾನೂ BSC ಮಾಡಿನಿ ಈಗ ನನಗೆ study pressure ಬಹಳ ಆಗೆತಿ. ಅದಕ್ಕೆ ನಾ ಸಾಯುತ್ತೆನೆ,Sorry papa Sorry mom ಎಂದು ಡೇತ್ ನೋಟ ಬರೆದಿಟ್ಟಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಹಾರುಗೇರಿ ಪೊಲೀಸ್ ಠಾಣೆಯ ಪಿಎಸ್ಐ ರಾಘವೇಂದ್ರ ಖೋತ,ಸಿಬ್ಬಂದಿಗಳ ಜೊತೆಗೇ ಸ್ಥಳಕ್ಕೆ ಬೆಟ್ಟಿ ನೀಡಿ ಸ್ಥಳ ಪರಿಶೀಲಿಸಿ ಬಳಿಕ ಆತ್ಮಹತ್ಯೆ ಮಾಡಿಕೊಂಡ ಯುವಕನ ತಂದೆ ತಾಯಿಗಳಿಂದ ಮಾಹಿತಿ ಪಡೆದು ಪಂಚನಾಮೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು