11:18 PM Sunday5 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಅಥಣಿ ಪಟ್ಟಣದ ಮೂಲಭೂತ ಸಮಸ್ಯೆ: ಪುರಸಭೆ ಸದಸ್ಯರ ನಿಯೋಗ ಮುಖ್ಯಾಧಿಕಾರಿ ಭೇಟಿ; ಪ್ರತಿಭಟನೆ ಎಚ್ಚರಿಕೆ

07/12/2022, 19:47

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಪುರಸಭೆ ಸದಸ್ಯರ ನಿಯೋಗವು ಇಂದು ಅಥಣಿ ಪುರಸಭೆ ಮುಖ್ಯಾಧಿಕಾರಿ ಈರಣ್ಣಾ ದಡ್ಡಿ ಅವರನ್ನ ಭೇಟಿ ಮಾಡಿ ಅಥಣಿ ಪಟ್ಟಣದ ಸಮಸ್ಯೆಗಳ ಕುರಿತು ಚರ್ಚಿಸಿ, ನಿವಾರಣೆಯಾಗದಿದ್ದರೆ ಪ್ರತಿಭಟಣೆ ಮಾಡುವ ಎಚ್ಚರಿಕೆ ನೀಡಿದರು.
ಅಥಣಿ ಪಟ್ಟಣದ ಜೋಡು ಕೆರೆಗಳ ಅಭಿವೃದ್ಧಿ, ಪಟ್ಟಣದ ಟ್ರಾಫಿಕ್ ಸಮಸ್ಯೆ ಸೇರಿದಂತೆ ಹಲವು ವಾರ್ಡಗಳಲ್ಲಿನ ಮೂಲಭೂತ ಸೌಕರ್ಯದ ಬಗ್ಗೆ ಮುಖ್ಯಾಧಿಕಾರಿಗಳೊಂದಿಗೆ ಚರ್ಚಿಸಿ ಆದಷ್ಟು ಬೇಗ ಸಮಸ್ಯೆ ಪರಿಹರಿಸುವ ಮತ್ತು ಟೆಂಡರ್ ಪ್ರಕ್ರಿಯೆ ಕೈಗೊಳ್ಳುವಂತೆ ಆಗ್ರಹಿಸಿದರು.
ಇದೆ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಮಾತನಾಡಿ, ಅಥಣಿ ಪಟ್ಟಣದ ಜೋಡು ಕೆರೆ ಅಭಿವೃದ್ಧಿಗೆ ಬಂದ ಹಣ ಹಿಂದುರುಗಿ ಹೋಗಿದೆ. ಇದಕ್ಕೆ ಅಧಿಕಾರಿಗಳ ಬೇಜವಾಬ್ದಾರಿ ಮತ್ತು ಸ್ಥಳಿಯ ಶಾಸಕರ ನಿರ್ಲಕ್ಷ ಎಂದರು.


ಇನ್ನೂ ಕಾಂಗ್ರೆಸ್ ಪಕ್ಷದಿಂದ ಕೆರೆ ಉಳಿಸಿ ಎಂಬ ಅಭಿಯಾನ ಮಾಡಲಾಗುತ್ತಿದ್ದು ಆದಷ್ಟು ಬೇಗ ಸಮಸ್ಯೆ ಪರಿಹರಿಸದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ರಾವಸಾಬ ಐಹೋಳೆ, ವಿಲಿನ್ ಯಳಮಲ್ಲೆ, ಬವರಾಜ ಹಳದಮಳ, ಮಲ್ಲು ಬುಟಾಳಿ, ರಿಯಾಜ್ ಸನದಿ ಕಾಂಗ್ರೆಸ್ ಮುಖಂಡರಾದ ರವಿ ಬಡಕಂಬಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು