5:29 AM Friday19 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ಭಾರತೀಯ ಭಾಷೆಗಳ ಬಗ್ಗೆ ಪ್ರೀತಿ, ಗೌರವ, ಅಭಿಮಾನವಿರಲಿ: ಪರಶುರಾಮ್ ಜಿ. ಮಾಳಗೆ

09/12/2022, 23:26

ಮಂಗಳೂರು(reporterkarnata.com): ಭಾರತೀಯ ಭಾಷಾ ದಿವಸದ ಅಂಗವಾಗಿ ಕೆನರಾ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಹಿಂದಿ ಮತ್ತು ಸಂಸ್ಕೃತ ಸಂಘಗಳ ಜಂಟಿ ಆಶ್ರಯದಲ್ಲಿ “ಭಾರತೀಯ ಭಾಷೆ – ಮಹತ್ವ”ದ ಕುರಿತಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಮುಖ್ಯ ಅತಿಥಿಯಾಗಿದ್ದ ಬೆಸೆಂಟ್ ಮಹಿಳಾ ಮಹಾವಿದ್ಯಾಲಯದ ಡಾ. ಪರಶುರಾಮ್ ಜಿ. ಮಾಳಗೆ ಅವರು ಮಾತನಾಡಿ, ವಿವಿಧ ಭಾಷೆಗಳನ್ನು ಆಡುವ, ವಿವಿಧ ಆಚಾರ, ವಿಚಾರ ಸಂಪ್ರದಾಯಗಳಿದ್ದರೂ ನಾವೆಲ್ಲರೂ ಒಂದೇ, ನಾವೆಲ್ಲರೂ ಭಾರತೀಯರು. ಭಾಷೆ ಯಾವುದೇ ಇರಲಿ, ಪ್ರತಿಯೊಂದು ಭಾಷೆಯಲ್ಲಿ ಪ್ರೀತಿ, ಗೌರವವನ್ನು ಇಟ್ಟುಕೊಂಡು ಮುನ್ನಡೆದಲ್ಲಿ ವ್ಯಕ್ತಿತ್ವವು ವಿಕಸನಗೊಳ್ಳುವುದು. ಭಾಷೆಯು ನಮ್ಮ ಮನಸ್ಸಿನ ಭಾವನೆಗಳನ್ನು ಪರಸ್ಪರ ವ್ಯಕ್ತಪಡಿಸುವ ಒಂದು ಒಳ್ಳೆಯ ಸಾಧನವಾಗಿರುವುದು ಎಂದು ನುಡಿದರು. ಕಾಲೇಜಿನ ಪ್ರಾಂಶುಪಾಲೆ ಡಾ. ಪ್ರೇಮಲತಾ ವಿ. ಅವರು ಅಧ್ಯಕ್ಷತೆ ವಹಿಸಿದ್ದು ಭಾಷೆ ಯಾವುದೇ ಇರಲಿ ಅದರ ಬಗ್ಗೆ ಪ್ರೀತಿ, ಅಭಿಮಾನ, ಗೌರವವನ್ನು ಇಟ್ಟುಕೊಳ್ಳುವ ಅಗತ್ಯತೆ ಇದೆ ಎಂದರು.

ಕಲ್ಪೇಶ್ ತೆಂಡಲ್ ಅತಿಥಿಗಳನ್ನು ಪರಿಚಯಿಸಿ, ಸ್ವಾಗತಿಸಿದರು.
ಮನಸ್ವಿ ಮತ್ತು ಸೊನಾಲಿ ಪ್ರಾರ್ಥಿಸಿದರು. ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಕಲ್ಪನಾ ಪ್ರಭು, ಹಿಂದಿ ಸಂಘದ ಸಂಯೋಜಕಿ ಸುಜಾತಾ ಜಿ. ನಾಯಕ್ ಹಾಗೂ ಸಂಸ್ಕೃತ ವಿಭಾಗದ ಮುಖ್ಯಸ್ಥೆ ಹಾಗೂ ಸಂಸ್ಕೃತ ಸಂಘದ ಸಂಯೋಜಕಿ ಚೇತನಾ, ಸ್ವಾತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅನುಶ್ರೀ ವಂದಿಸಿ, ಶೃಜನ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು