11:53 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

2023 ವಿಧಾನಸಭೆ ಚುನಾವಣೆ: 100 ಕ್ಷೇತ್ರಗಳಿಗೆ ಬಿಜೆಪಿಯಿಂದ ಹೊಸ ಮುಖ?; ದ.ಕ. ಜಿಲ್ಲೆಯ 4 ಮಂದಿಗೆ ಟಿಕೆಟ್ ಇಲ್ಲ?

18/10/2021, 15:57

ಅಶೋಕ್ ಕಲ್ಲಡ್ಕ ಮಂಗಳೂರು

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಮುಂಬರುವ ವಿಧಾನಸಭೆ ಚುನಾವಣೆಗೆ ರಾಜ್ಯದ ಎಲ್ಲ ಮೂರು ಪ್ರಮುಖ ಪಕ್ಷಗಳು ಸಿದ್ಧತೆಯಲ್ಲಿ ತೊಡಗಿವೆ. ಅಧಿಕಾರರೂಢ ಬಿಜೆಪಿ ಸ್ವಂತ ಬಲದಲ್ಲಿ ಮತ್ತೆ ಅಧಿಕಾರಕ್ಕೇರುವ ಬಗ್ಗೆ ಯೋಜನೆ ರೂಪಿಸಿದೆ. ರಾಜ್ಯದ 224 ಸ್ಥಾನಗಳ ಪೈಕಿ ಕನಿಷ್ಠ 150 ಸ್ಥಾನಗಳನ್ನು ಪಡೆದು ಅಧಿಕಾರಕ್ಕೇರುವುದು ಬಿಜೆಪಿ ಪರಮ ಗುರಿಯಾಗಿದೆ. ಈ ನಿಟ್ಟಿನಲ್ಲಿ 100 ಕ್ಷೇತ್ರಗಳಲ್ಲಿ ಮತ್ತೆ ಹೊಸ ಮುಖಗಳನ್ನು ಕಣಕ್ಕಿಳಿಸುವ ಬಗ್ಗೆ ಪಕ್ಷದ ಹೈಕಮಾಂಡ್ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.

ಕನಿಷ್ಠ 100 ಕ್ಷೇತ್ರಗಳಲ್ಲಿ ಹೊಸ ಮುಖಗಳನ್ನು ಕಣಕ್ಕಿಳಿಸಬೇಕೆನ್ನುವ ಸೂಚನೆಯನ್ನು ಹೈಕಮಾಂಡ್ ರಾಜ್ಯ ಬಿಜೆಪಿಗೆ ನೀಡಿದೆ. ಇದು ಹಲವು ಮಂದಿ ಹಾಲಿ ಶಾಸಕರು, ಸಚಿವರಲ್ಲಿ ನಡುಕ ಹುಟ್ಟಿಸಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಹೊಸ ಮುಖಗಳನ್ನು, ಏನೂ ಅಲ್ಲದ ಹೆಸರಿಲ್ಲದ ಸಾಮಾನ್ಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಜಯಗಳಿಸುವ ಪ್ರಯೋಗದಲ್ಲಿ ಯಶಸ್ವಿ ಕಂಡಿರುವ ಬಿಜೆಪಿ 150 ಸೀಟುಗಳನ್ನು ಬಾಚಿಕೊಳ್ಳಲು ಮತ್ತೆ ಹಳೆ ತಂತ್ರಕ್ಕೆ ಶರಣಾಗಲಿದೆ. ರಾಜ್ಯದ100 ಕ್ಷೇತ್ರಗಳಲ್ಲಿ ಹೊಸ ಮುಖಗಳನ್ನು ಪರಿಚಯಿಸುವ ಪ್ರಯೋಗ ಈ ಬಾರಿಯೂ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಎಲ್ಲ ಜಿಲ್ಲೆಗಳಲ್ಲಿ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಾಲಿ 8 ಮಂದಿ ಶಾಸಕರ ಪೈಕಿ 7 ಮಂದಿ ಹೊಸಬರಾದರೂ ಮುಂದಿನ ಚುನಾವಣೆಯಲ್ಲಿ ಅವರನ್ನು ಹಳೆ ಮುಖವೆಂದೇ ಪರಿಗಣಿಸಲಾಗುತ್ತದೆ. ಸಾಧನೆ ಶೂನ್ಯ ಶಾಸಕರನ್ನು, ಪಕ್ಷ ಸಂಘಟನೆಗೆ ಕೈಜೋಡಿಸದ ಶಾಸಕರನ್ನು, ಸ್ಥಳೀಯ ಆರೆಸ್ಸೆಸ್ ನಾಯಕರ ಕಡೆಗಣಿಸಿದ ಶಾಸಕರನ್ನು ಮುಂದಿನ ಚುನಾವಣೆಯಲ್ಲಿ ಕೈಬಿಡಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ 8 ಶಾಸಕರ ಪೈಕಿ 2ರಿಂದ 4 ಮಂದಿಯನ್ನು ಹಾಗೂ ಉಡುಪಿ ಜಿಲ್ಲೆಯ 5 ಮಂದಿ ಶಾಸಕರ ಪೈಕಿ ಇಬ್ಬರಿಗೆ ಟಿಕೆಟ್ ನಿರಾಕರಿಸಲಾಗುತ್ತದೆ. ಯಾರನ್ನೆಲ್ಲ ಕೈಬಿಡಬೇಕೆನ್ನುವ ಪಟ್ಟಿ ಕೂಡ ಈಗಾಗಲೇ ಸಿದ್ಧವಾಗಿದೆ. ಈ ನಿಟ್ಟಿನಲ್ಲಿ ಪಕ್ಷದ ಹೈಕಮಾಂಡ್ ಗುಪ್ತವಾಗಿ ಸಮೀಕ್ಷೆ ನಡೆಸಿ ವರದಿ ಸಿದ್ಧಪಡಿಸಿಕೊಂಡಿದೆ ಎನ್ನಲಾಗಿದೆ.

ಮುಂದಿನ ವಿಧಾನಸಭೆ ಚುನಾವಣೆಯ ಬಳಿಕ ಆಪರೇಶನ್ ಕಮಲ ಯಾವುದೇ ಕಾರಣಕ್ಕೂ ಅವಕಾಶ ಸಿಗಬಾರದು ಎಂಬ ಏಕೈಕ ಕಾರಣಕ್ಕಾಗಿ ಮಿಷನ್ 150 ಬಿಜೆಪಿ ಸಿದ್ಧಪಡಿಸಿದೆ. ಕ್ಲೀನ್ ಇಮೇಜ್ ಮೂಲಕ ಪಕ್ಷ ಸ್ವತಂತ್ರವಾಗಿ ಅಧಿಕಾರಕ್ಕೇರಬೇಕು ಎನ್ನುವುದು ಹೈಕಮಾಂಡ್ ಗುರಿಯಾಗಿದೆ.

ಕನಿಷ್ಠ 100 ಕ್ಷೇತ್ರಗಳಿಗೆ ಹೊಸ ಮುಖಗಳನ್ನು ಕಣಕ್ಕಿಳಿಸುವಾಗ ಅವರ ಸಾಧನೆ, ಹಿನ್ನೆಲೆ ಮತ್ತು ವಯಸ್ಸನ್ನು ಮುಖ್ಯವಾಗಿ ಪರಿಗಣಿಸಲಾಗುವುದು. ಹೊಸ ಮುಖಗಳಿಗೆ ಅವಕಾಶ ನೀಡುವಾಗ ಕೆಲವು ಹಾಲಿ ಶಾಸಕರ ಜತೆಗೆ ಕಳೆದ ಬಾರಿ ಸೋತವರನ್ನೂ ಕೈಬಿಟ್ಟು ಹೊಸಬರನ್ನು ಆಯ್ಕೆ ಮಾಡಲಾಗುತ್ತದೆ. ಪಕ್ಕಾ ಸಂಘ ಪರಿವಾರದ ಹಿನ್ನೆಲೆಯಿಂದ ಬಂದಿರುವ ಯುವಕರನ್ನು ಕಣಕ್ಕಿಳಿಸಬೇಕೆನ್ನುವ ಸೂಚನೆಯನ್ನು ಕಮಲ ಹೈಕಮಾಂಡ್ ನೀಡಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು