2:38 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಬೇಕಾಬಿಟ್ಟಿ ರಸ್ತೆ ಅಗೆದು ಯಾರಾದರು ಗುಂಡಿಗೆ ಬಿದ್ರೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕಿಸ್ತೀನಿ: ಗೇಲ್ ಅಧಿಕಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಎಚ್ಚರಿಕೆ

04/01/2023, 21:25

ಮಂಗಳೂರು(reporterkarnataka.com): ಅಲ್ಲಲ್ಲಿ ಅಗೆದು ಗುಂಡಿಯನ್ನು ಹಾಗೇ ಬಿಟ್ಟಿದ್ದೀರಿ. ನನ್ನ ಕ್ಷೇತ್ರದಲ್ಲಿ ಒಬ್ಬ ದ್ವಿಚಕ್ರ ಸವಾರರು ಗುಂಡಿಗೆ ಬಿದ್ದು ಅನಾಹುತ ಆದ್ರೂ ಸುಮ್ಮನಿರಲ್ಲ. ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕ್ತೀನಿ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಗೇಲ್ ಕಂಪೆನಿಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ನಗರದ ದೇರೆಬೈಲ್ ಕೊಂಚಾಡಿ ಬಳಿ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆಗೆ ಬಂದಿದ್ದ ಶಾಸಕರಲ್ಲಿ ಸ್ಥಳೀಯರು ಗೇಲ್ ಕಂಪೆನಿ ಅಧಿಕಾರಿಗಳು ಎಲ್ಲೆಂದರಲ್ಲಿ ರಸ್ತೆಯನ್ನು ಅಗೆಯುತ್ತಿದ್ದು, ಇದರಿಂದ ನೀರಿನ ಪೈಪ್ ಒಡೆದು ಸಮಸ್ಯೆ ಸೃಷ್ಟಿಯಾಗಿದೆ ಎನ್ನುವುದನ್ನು ಗಮನಕ್ಕೆ ತಂದರು. ಈ ವೇಳೆ ಸ್ಥಳದಲ್ಲೇ ಇದ್ದ ಕಂಪೆನಿ ಅಧಿಕಾರಿಗಳನ್ನು ಕರೆದ ಶಾಸಕರು, “ಪೈಪ್ ಲೈನ್ ಗಾಗಿ ಎಲ್ಲೆಂದರಲ್ಲಿ ಬೇಕಾಬಿಟ್ಟಿ ರಸ್ತೆ ಅಗೆದು ಜನರಿಗೆ ತೊಂದರೆ ಉಂಟುಮಾಡಿದರೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕಿಸ್ತೀನಿ ಎಂದರು.
ಬೇಕಾಬಿಟ್ಟಿ ಕಾಮಗಾರಿ ಮಾಡಬೇಡಿ, ಏನೇ ಮಾಡೋದಿದ್ರೂ ಸ್ಥಳೀಯ ಕಾರ್ಪೋರೇಟರ್ ಹಾಗೂ ಸಾರ್ವಜನಿಕರ ಗಮನಕ್ಕೆ ತಂದು ಬಳಿಕ ಮಾಡಿ. ನಿಮ್ಮಿಂದಾಗಿ ನಗರ ಪಾಲಿಕೆಯ ಎಲ್ಲಾ ಕಡೆಗಳಲ್ಲಿ ಸಮಸ್ಯೆಯಾಗುತ್ತಿದೆ. 10-15 ದಿನಗಳು ನೀರಿಲ್ಲದಿದ್ದರೆ ಜನರು ಏನು ಮಾಡಬೇಕು? ಅಲ್ಲಲ್ಲಿ ಅಗೆದು ಗುಂಡಿಯನ್ನು ಹಾಗೇ ಬಿಟ್ಟಿದ್ದೀರಿ. ನನ್ನ ಕ್ಷೇತ್ರದಲ್ಲಿ ಒಬ್ಬ ದ್ವಿಚಕ್ರ ಸವಾರರು ಗುಂಡಿಗೆ ಬಿದ್ದು ಅನಾಹುತ ಆದ್ರೂ ಸುಮ್ಮನಿರಲ್ಲ. ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕ್ತೀನಿ ಎಂದು ಎಚ್ಚರಿಕೆ ನೀಡಿದರು. ಈ ವೇಳೆ ಕಂಪೆನಿ ಅಧಿಕಾರಿ ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುವುದಾಗಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು