1:45 AM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ನಾಗಮಂಗಲ: ವಿದ್ಯುತ್ ಖಾಸಗೀಕರಣ, ಕೃಷಿ ಕಾಯ್ದೆ ರದ್ದತಿ ಆಗ್ರಹಿಸಿ ಫೆ. 3ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

25/01/2023, 18:23

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ಕರ್ನಾಟಕ ರಾಜ್ಯ ರೈತ ಸಂಘದಿಂದ ಫೆಬ್ರವರಿ 3ರಂದು ನಾಗಮಂಗಲದಲ್ಲಿ ಬೃಹತ್ ರೈತ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು
ನಾಗಮಂಗಲ ತಾಲ್ಲೂಕು ಘಟಕದ ಅಧ್ಯಕ್ಷ ದೊಡ್ಡಘಟ್ಟ ಸುರೇಶ್ ಹೇಳಿದರು.

ಅವರು ನಾಗಮಂಗಲ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ವಿದ್ಯುತ್ ಖಾಸಗಿಕರಣ ರದ್ದತಿ, ಕೃಷಿ ಕಾಯಿದೆ ಮಾರಕವಾಗಿರುವ ಕಾಯಿದೆ ಸರ್ಕಾರ ಕೂಡಲೇ ರದ್ದುಪಡಿಸುವಂತೆ ಮತ್ತು ರಾಗಿ ಭತ್ತ ಕೊಬ್ಬರಿ ಖರೀದಿ ಕೇಂದ್ರವನ್ನ ಮತ್ತು ಬೆಂಬಲ ಬೆಲೆ ನಿಗದಿಪಡಿಸುವಂತೆ ಒತ್ತಾಯಿಸಲು ಬೃಹತ್ ರೈತ ಪ್ರತಿಭಟನೆ ಮತ್ತು ಧರಣಿ ಯನ್ನು ಏರ್ಪಡಿಸಲಾಗಿದೆ.

ಸರ್ಕಾರವು ರೈತರಿಗೆ ಸಮರ್ಪಕವಾಗಿ ಇದುವರೆಗೂ ಬೆಲೆ ನಿಗದಿ ಮಾಡದೆ ಇರುವುದು ಹಾಲು, ಕೊಬ್ಬರಿ ಕನಿಷ್ಠ ದರ ನಿಗದಿ ಮಾಡದೇ ಇರುವುದು ರೈತರ ಸಂಕಷ್ಟ ಕೇಳುವರು ಇಲ್ಲದಂತಾಗಿದೆ. ಪ್ರತಿಯೊಬ್ಬ ರೈತರು ಮಳೆ ಅವಾಂತರದಿಂದಾಗಿ ಬೀದಿಗಳಿದು ಹೋರಾಟ ಮಾಡುವ ಸಂಭವವಾಗಿದ್ದು ಕೂಡಲೇ ಸರ್ಕಾರ ಕೃಷಿಗೆ ಸಂಬಂಧಪಟ್ಟಂತಹ ಮಾರಕವಾದ ಕಾಯ್ದೆಗಳನ್ನು ಕೈ ಬಿಟ್ಟು ರೈತರಿಗೆ ಪೂರಕವಾದ ಯೋಜನೆಗಳನ್ನು ಕೈಗೊಳ್ಳುವ ಸಲುವಾಗಿ ಫೆಬ್ರವರಿ 3ರಂದು ನಾಗಮಂಗಲ ಟಿಬಿ ವೃತ್ತದಿಂದ ರೈತರ ಬೃಹತ್ ಮೆರವಣಿಗೆಯೊಂದಿಗೆ ಮಿನಿ ವಿಧಾನಸೌಧದ ಮೆರವಣಿಗೆ ಮಾಡಲಾಗಿದ್ದು ರೈತರ ಮನವಿಯನ್ನು ಸರ್ಕಾರಕ್ಕೆ ನೀಡಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ(ಮೂಲ ಸಂಘಟನೆ)ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ವೆಂಕಟೇಶ್, ಕಾರ್ಯಾಧ್ಯಕ್ಷ ಜಿ.ಟಿ.ಹರೀಶ್, ಉಪಾಧ್ಯಕ್ಷ ಕೆ.ಜೆ.ಯೋಗೇಶ್,
ಬೆಳ್ಳೂರು ಹೋಬಳಿ ಮಟ್ಟದ ಅಧ್ಯಕ್ಷ ಪಾಪಣ್ಣ, ಖಜಾಂಚಿ ಬೋರೇಗೌಡ, ಕಾರ್ಯದರ್ಶಿ ದೇವರಾಜ ಹಾಗೂ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು